![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 21, 2020, 6:58 PM IST
ಹನೂರು (ಚಾಮರಾಜನಗರ): ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧ ಅವಹೇಳನಕಾರಿ ಫ್ಲೆಕ್ಸ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ,ಪಂ ಸದಸ್ಯ ಗಿರೀಶ್ ಹನೂರು ಪೊಲೀಸರಿಗೆ ದೂರು ನೀಡಿದ್ದಾರೆ.
ಏನಿದು ಪ್ರಕರಣ?: ಹನೂರು ಪಟ್ಟಣದ ವಿದ್ಯುತ್ ಸರಬರಾಜು ಕಂಪನಿ ಕಚೇರಿ ಮುಂಭಾಗದ ಬೇವಿನ ಮರವೊಂದರಲ್ಲಿ ಈ ರಸ್ತೆಯಲ್ಲಿ ಎಂ.ಪಿ, ಎಂಎಲ್ಎ, ಜಿ.ಪಂ ಮತ್ತು ತಾ.ಪಂ ಸದಸ್ಯರನ್ನು ಹೂಳಲು ಗುಂಡಿಗಳನ್ನು ತೋಡಲಾಗಿದೆ, ಪ್ರಯಾಣಿಕರು ದಯವಿಟ್ಟು ಜಾಗ್ರತೆಯಿಂದ ವಾಹನ ಚಲಾಯಿಸಿರಿ, ನೊಂದ ಹನೂರು ಕ್ಷೇತ್ರದ ಮತದಾರರು ಎಂದು ಫ್ಲೆಕ್ಸ್ ಅಳವಡಿಸಲಾಗಿತ್ತು. ಬುಧವಾರ ಬೆಳಿಗ್ಗೆ ವಾಯುವಿಹಾರಕ್ಕೆ ತೆರಳುತ್ತಿದ್ದ ಪ.ಪಂ ಸದಸ್ಯರಾದ ಗಿರೀಶ್, ಹರೀಶ್ಕುಮಾರ್ ಮತ್ತು ಸಂಪತ್ಕುಮಾರ್ ಇದನ್ನು ಗಮನಿಸಿದ್ದಾರೆ.
ಈ ಸಂಬಂಧ ಹನೂರು ಪೊಲೀಸರಿಗೆ ದೂರು ನೀಡಿರುವ ಪ.ಪಂ ಸದಸ್ಯ ಗಿರೀಶ್ ಕಿಡಿಗೇಡಿಗಳು ಎಸಗಿರುವ ಈ ಕೃತ್ಯದಿಂದ ಕ್ಷೇತ್ರದ ಸಂಸದರು, ಶಾಸಕರು, ಜಿ.ಪಂ ಸದಸ್ಯರು, ತಾ.ಪಂ ಸದಸ್ಯರಿಗೆ ಅಪಮಾನ ಮಾಡಿದಂತಾಗಿದೆ. ಆದುದರಿಂದ ಕೂಡಲೇ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಲಾಗಿದೆ.
ಇದನ್ನೂ ಓದಿ:4 ಜಿಲ್ಲೆಗಳ ಸಿಎಂ ವೈಮಾನಿಕ ಸಮೀಕ್ಷೆ : ಹವಾಮಾನ ವೈಪರೀತ್ಯದಿಂದ ವಿಜಯಪುರ ಸಮೀಕ್ಷೆ ರದ್ದು
ಕಿಡಿಗೇಡಿಗಳ ಈ ಕೃತ್ಯವನ್ನು ಖಂಡಿಸಿ ಹನೂರು ಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಕಾಂಗ್ರೆಸ್ ಭವನದಿಂದ ಪೊಲೀಸ್ ಠಾಣೆಯವರೆಗೆ ಹನೂರು ಮತ್ತು ರಾಮಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿವತಿಯಿಂದ ಪ್ರತಿಭಟನೆ ಹೊರಟು ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.