ಮಲೇಷ್ಯಾ: 9ರ ಬಾಲೆ ಹೊಲಿಯುತ್ತಾಳೆ ನಿತ್ಯ 4 PPE ಕಿಟ್‌


Team Udayavani, May 15, 2020, 7:45 PM IST

ಮಲೇಷ್ಯಾ: 9ರ ಬಾಲೆ ಹೊಲಿಯುತ್ತಾಳೆ ನಿತ್ಯ 4 PPE ಕಿಟ್‌

ಮಣಿಪಾಲ: ಶತಮಾನದ ಅನಂತರ ಬಂದು ಅಪ್ಪಳಿಸಿರುವ ಕೋವಿಡ್ ಎಂಬ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ಇಲ್ಲಿಯವರೆಗೂ ಎದುರಿಸಲು ಯಾವ ದೇಶದಿಂದಲೂ ಸಾಧ್ಯವಾಗಿಲ್ಲ. ಬಡ ದೇಶಗಳಲ್ಲಂತೂ ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯ ಸಿಬಂದಿಗಳಿಗೆ ಪಿಪಿಇ ಕಿಟ್‌ಗಳ ಕೊರತೆ ಎದುರಾಗಿದ್ದು, ಜೀವ ಪಣಕ್ಕಿಟ್ಟು ಸೇವೆಗೈಯುತ್ತಿದ್ದಾರೆ. ಈ ಸಮಸ್ಯೆಯ ತೀವ್ರತೆಯನ್ನು ಅರಿತ ಮಲೇಷ್ಯಾದ 9ರ ಹರೆಯದ ಪೋರಿಯೊಬ್ಬಳು ಮಾದರಿಯಾಗುವಂತಹ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾಳೆ. ವೈದ್ಯರಿಗೆ ಅಗತ್ಯವಿರುವ ಪಿಪಿಇ ಕಿಟ್‌ಗಳನ್ನು ಸಿದ್ಧಪಡಿಸುತ್ತಿದ್ದಾಳೆ ಈ ಬಾಲೆ.

ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಅದೆಷ್ಟೋ ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು ಸೂಕ್ತ ಪಿಪಿಇ ಕಿಟ್‌ (ಸ್ವಯಂ ಸಂರಕ್ಷಣಾ ಕಿಟ್‌)ಗಳು ಇಲ್ಲದೆ ಕಷ್ಟಪಡುತ್ತಿದ್ದಾರೆ. ಇದನ್ನು ಮನಗಂಡ ಮಲೇಷ್ಯಾದ ನೈರುತ್ಯಕ್ಕಿರುವ ನೆಗೆರಿ ಸೆಂಬಿಲಾನ್‌ನ 9 ವರ್ಷದ ಬಾಲಕಿ ನೂರ್‌ಅಫಿಯಾ ಕಿಸ್ಟಿನಾ ಜಮುjರಿ ಪಿಪಿಇ ಕಿಟ್‌ಗಳ ತಯಾರಿಕೆಗೆ ಮುಂದಾಗಿದ್ದಾಳೆ.

ಮಲೇಷ್ಯಾದ ಆಸ್ಪತ್ರೆಗಳಲ್ಲೂ ಸಹ ಪಿಪಿಇ ಕಿಟ್‌ಗಳ ಕೊರತೆ ಇದ್ದು, ಆರೋಗ್ಯ ಸಿಬಂದಿ ಸುರಕ್ಷತಾ ಸಾಧನಗಳಿಲ್ಲದೆ ತಮ್ಮ ಜೀವವನ್ನು ಅಪಾಯಕ್ಕೆ ಒಡ್ಡಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಈ ವಿಚಾರ ತಿಳಿದ ನೂರ್‌ಅಫಿಯಾ ತತ್‌ಕ್ಷಣ ತಾಯಿಯ ಬಳಿ ಅಮ್ಮ ಕೋವಿಡ್‌-19 ಅಪಾಯಕಾರಿ ಎಂಬುದು ನನಗೆ ಗೊತ್ತು. ಆದರೆ ಆಸ್ಪತ್ರೆಗಳಲ್ಲಿ ಪಿಪಿಇ ಗೌನ್‌ಗಳಿಲ್ಲದೆ ಚಿಕಿತ್ಸೆ ನೀಡುತ್ತಿದ್ದಾರೆ. ಆದೂ ಮತ್ತೂ ಅಪಾಯ ಎಂಬ ಭಾವ ಕಾಡುತ್ತಿದೆ. ಹಾಗಾಗಿ ಅಂಥವರಿಗೆ ಗೌನ್‌ ಹೊಲಿದು ಕೊಡುವ ಮೂಲಕ ಸಹಾಯ ಹಸ್ತ ನೀಡುವ ಎಂದು ಕೇಳಿಕೊಂಡಿದ್ದಾಳೆ. ವೃತ್ತಿಯಲ್ಲಿ ಟೈಲರ್‌ ಆಗಿರುವ ನೂರ್‌ನ ತಾಯಿಯೂ ಬೆಂಬಲ ಸೂಚಿಸಿದ್ದು, ನೂರ್‌ಅಫಿಯಾ ಸ್ವತಃ ಪಿಪಿಇ ಕಿಟ್‌ಗಳನ್ನು ತಯಾರಿಸಿ ಆರೋಗ್ಯ ಕಾರ್ಯಕರ್ತರ ಆರೋಗ್ಯ ರಕ್ಷಣೆಗೆ ಮುಂದಾಗಿದ್ದಾಳೆ.

ಈವರೆಗೆ ಸುಮಾರು 250 ಪಿಪಿಇ ಗೌನ್‌ಗಳನ್ನು ಹೊಲಿದು ನೂರ್‌ ಸ್ಥಳೀಯ ಆಸ್ಪತ್ರೆಗಳಿಗೆ ನೀಡಿದ್ದು, ಇನ್ನು ನೂರಾರು ಪೀಸ್‌ಗಳನ್ನು ಹೊಲಿಯುವ ಸಿದ್ಧಪಡಿಸುತ್ತಿದ್ದಾಳೆ. ಅಗತ್ಯ ವಸ್ತುಗಳನ್ನೆಲ್ಲ ತಂದ ಪುಟಾಣಿ, ದಿನವೊಂದಕ್ಕೆ ನಾಲ್ಕು ಪಿಪಿಇ ಗೌನ್‌ಗಳನ್ನು ಹೊಲಿಯುತ್ತಿದ್ದಾಳೆ.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

iran

Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.