Forest encroachment: ಸಣ್ಣ ಒತ್ತುವರಿದಾರರಿಗೆ ತೊಂದರೆ ಕೊಡೆ, ದೊಡ್ಡವರ ಬಿಡೆ: ಸಿಎಂ
ಅರಣ್ಯ ಒತ್ತುವರಿ ತೆರವು ಕೈಗೊಳ್ಳದಿರಲು ಪಟ್ಟಭದ್ರರ ಕುತಂತ್ರ: ಸಿದ್ದರಾಮಯ್ಯ
Team Udayavani, Sep 5, 2024, 1:21 AM IST
ಬೆಂಗಳೂರು: ಅರಣ್ಯ ಒತ್ತುವರಿ ತೆರವು ಕಾರ್ಯ ಕೈಗೊಳ್ಳದಂತೆ ಪಟ್ಟ ಭದ್ರರು ಒತ್ತಡ ಹೇರುವುದು ಸೇರಿ ಹಲವು ಕುತಂತ್ರ ಮಾಡುತ್ತಿದ್ದಾರೆ. ಆದರೆ ಸಣ್ಣ ಒತ್ತುವರಿದಾರರಿಗೆ ತೊಂದರೆ ಕೊಡುವುದಿಲ್ಲ; ದೊಡ್ಡ ಒತ್ತುವರಿದಾರರನ್ನು ಬಿಡುವು
ದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಅರಣ್ಯ ಇಲಾಖೆ ಸಿಬಂದಿಗೆ 2022 ಮತ್ತು 2023ನೇ ಸಾಲಿನ “ಮುಖ್ಯಮಂತ್ರಿ ಪದಕ’ ಪ್ರದಾನ ಮತ್ತು 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಆದೇಶ ಪತ್ರ ಪ್ರದಾನ ಮಾಡಿ ಮಾತನಾಡಿದ ಅವರು, ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆ ಆವಶ್ಯಕ. ಮುಂಬರುವ ದಿನಗಳಲ್ಲಿ ಒತ್ತುವರಿಯೇ ಆಗದಂತೆ ನೋಡಿಕೊಳ್ಳಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಪಟ್ಟಭದ್ರರಿಂದ ಕುತಂತ್ರ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಜಾಗತಿಕ ಹವಾಮಾನ ಬದಲಾವಣೆಯ ಅವಾಂತರಗಳು ಹೆಚ್ಚಾಗಿರುವುದನ್ನು ಕಾಣಬಹುದು. ನೆರೆಯ ವಯನಾಡಿನಲ್ಲಿ ಎರಡು ಹಳ್ಳಿಗಳೇ ನಾಶವಾದವು. ಶಿರೂರಿನಲ್ಲಿ 11 ಜನ ಸಾವನ್ನಪ್ಪಿದರು. ಈ ಹಿನ್ನೆಲೆಯಲ್ಲಿ ಪರಿಸರ ಸಮತೋಲನ ಮತ್ತು ಸಂರಕ್ಷಣೆ ನಮ್ಮ ಆದ್ಯಕರ್ತವ್ಯ ಆಗಬೇಕು. ಇದಕ್ಕಾಗಿ ದೊಡ್ಡ ಪ್ರಮಾಣದ ಅರಣ್ಯ ಒತ್ತುವರಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.