Forest Land: ಎಚ್ಎಂಟಿ ಭೂಮಿ ವಶದ ವಿರುದ್ಧ ಕಾನೂನು ಹೋರಾಟ: ಎಚ್ಡಿಕೆ
ಮಾಜಿ ಸ್ಪೀಕರ್ ಕಬಳಿಸಿರುವ ಅರಣ್ಯ ಭೂಮಿ ಬಗ್ಗೆ ಮೊದಲು ಕ್ರಮ ಕೈಗೊಳ್ಳಿ: ಕೇಂದ್ರ ಸಚಿವ ಆಗ್ರಹ
Team Udayavani, Oct 27, 2024, 3:42 AM IST
ಬೆಂಗಳೂರು: ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ನೂರಾರು ಎಕರೆ ಅರಣ್ಯ ಭೂಮಿ ಲೂಟಿ ಹೊಡೆದಿದ್ದಾರಲ್ಲ, ಮೊದಲು ಅದರ ಬಗ್ಗೆ ನೋಡಲಿ. ಇದರ ಬಗ್ಗೆ ನ್ಯಾಯಾಲಯ ಕೊಟ್ಟಿರುವ ತೀರ್ಪನ್ನೇ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದಾರೆ. ಎಷ್ಟು ಎಕರೆ ಲೂಟಿ ಆಗಿದೆ ಅಲ್ಲಿ ನೋಡಲಿ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅರಣ್ಯ ಸಚಿವ ಈಶ್ವರ್ ಖಂಡ್ರೆಯ ತರಾಟೆಗೆ ತೆಗೆದುಕೊಂಡಿದ್ದಾರೆ.
ಎಚ್ಎಂಟಿಗೆ ಸೇರಿದ್ದ 5 ಎಕರೆ ಜಾಗವನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, 5 ಎಕರೆಗೆ ಬಲವಂತವಾಗಿ ಹೋಗಿ ಬೇಲಿ ಹಾಕಿಕೊಂಡಿದ್ದಾರೆ. ಕೋರ್ಟ್ ಆದೇಶಗಳಿಗೆ ಎಚ್ಎಂಟಿ ಹಾಗೂ ಅಧಿಕಾರಿಗಳು ತಲೆ ಬಾಗಬೇಕಾಗುತ್ತದೆ. ಎಚ್ಎಂಟಿ ಜಮೀನು ವಶ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು. ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf: ರೈತರ ಭೂಮಿ ಕಬಳಿಸಲು ವಕ್ಫ್ ಗೆ ಕಾಂಗ್ರೆಸ್ ಕುಮ್ಮಕ್ಕು: ಅರವಿಂದ್ ಬೆಲ್ಲದ
Forest Land: ಎಚ್ಎಂಟಿ ಭೂಮಿ ವಶದ ವಿರುದ್ಧ ಕಾನೂನು ಹೋರಾಟ: ಎಚ್ಡಿಕೆ
Sulya: ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ
Coastal Karnataka: ಆಟೋಮೊಬೈಲ್: ವರ್ಷಾಂತ್ಯದವರೆಗೂ ಬೇಡಿಕೆ
Kasaragodu: ಹೊಸ ದಾಖಲೆ ಸೃಷ್ಟಿಸಿದ ಉದಯವಾಣಿ “ಚಿಣ್ಣರ ಬಣ್ಣ-2024′
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.