Anant Ambani Wedding: ಅನಂತ್‌ ಅಂಬಾನಿ ವಿವಾಹಕ್ಕೆ ಗಣ್ಯಾತೀಗಣ್ಯರ ಆಗಮನ, 40 ದಿನ ಅನ್ನದಾನ

ಟೋನಿ ಬ್ಲೇರ್‌, ಬೋರಿಸ್‌ ಜಾನ್ಸನ್‌ ಸೇರಿದಂತೆ ಗಣ್ಯಾತೀಗಣ್ಯರು ಮುಂಬೈಗೆ ಆಗಮಿಸಿದ್ದಾರೆ.

Team Udayavani, Jul 12, 2024, 4:40 PM IST

Anant Ambani Wedding: ಅನಂತ್‌ ಅಂಬಾನಿ ವಿವಾಹಕ್ಕೆ ಗಣ್ಯಾತೀಗಣ್ಯರ ಆಗಮನ, 40 ದಿನ ಅನ್ನದಾನ

ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ದಂಪತಿ ಪುತ್ರ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ವಿವಾಹ ಮುಂಬೈನ ಜಿಯೋ ವರ್ಲ್ಡ್‌ ಕನ್ವೆಶನ್‌ ಸೆಂಟರ್‌ ನಲ್ಲಿ ಗುರುವಾರ (ಜುಲೈ 12) ರಾತ್ರಿ 8ಗಂಟೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬ್ರಿಟನ್‌ ನ ಮಾಜಿ ಪ್ರಧಾನಿಗಳಾದ ಟೋನಿ ಬ್ಲೇರ್‌, ಬೋರಿಸ್‌ ಜಾನ್ಸನ್‌ ಸೇರಿದಂತೆ ಗಣ್ಯಾತೀಗಣ್ಯರು ಮುಂಬೈಗೆ ಆಗಮಿಸಿದ್ದಾರೆ.

ಈಗಾಗಲೇ ಅನಂತ್-ರಾಧಿಕಾ ಮರ್ಚೆಂಟ್‌ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಮೆರಿಕಾ ರಿಯಲ್ಟಿ ಟಿವಿ ಐಕಾನ್‌ ಕಿಮ್‌ ಕಾರ್ಡಶಿಯಾನ್‌ ಮತ್ತು ಖ್ಲೋ ಕಾರ್ಡಶಿಯಾನ್‌ ಬುಧವಾರ ತಡರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದರು. ಅಲ್ಲದೇ ಸ್ಯಾಮ್‌ ಸಂಗ್‌ ಸಿಇಒ ಹಾನ್‌ ಜಾಂಗ್‌ ಹೀ ಮುಂಬೈಗೆ ಆಗಮಿಸಿದ್ದಾರೆ.‌

ಜು.12ರಿಂದ ಮೂರು ದಿನಗಳ ಕಾಲ ನಡೆಯಲಿರುವ ಅನಂತ್‌ ಅಂಬಾನಿ ವಿವಾಹ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌,  ವಿಶ್ವಸಂಸ್ಥೆಯ ಮಾಜಿ ಕಾರ್ಯದರ್ಶಿ ಜನರಲ್‌ ಬಾನ್‌ ಕಿ ಮೂನ್‌ ದಂಪತಿ, ಪೀಟರ್‌ ಡೈಮಂಡಿಸ್‌, ಕಲಾವಿದ ಜೆಫ್‌ ಕೂನ್ಸ್‌, ಗುರು ಜೇ ಶೆಟ್ಟಿ, ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ ಜಾನ್‌ ಕೆರ್ರಿ, ಕೆನಡಾ ಮಾಜಿ ಪ್ರಧಾನಿ ಸ್ಟೀಫನ್‌ ಹಾರ್ಪರ್‌ ಸೇರಿದಂತೆ ಹಲವು ಗಣ್ಯಾತೀಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ ಎಂದು ವರದಿ ತಿಳಿಸಿದೆ.

ಅನಂತ್‌ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ ಪ್ರೀ ವೆಡ್ಡಿಂಗ್‌ ಕಾರ್ಯಕ್ರಮ ಮಾರ್ಚ್‌ ನಲ್ಲಿ ಗುಜರಾತ್‌ ನ ಜಾಮ್‌ ನಗರದಲ್ಲಿ ಅದ್ದೂರಿಯಾಗಿ ನೆರವೇರಿತ್ತು. ಮೂರು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ದಲ್ಜಿತ್‌ ದೋಸ್ಸಾಂಜ್‌, ಅರಿಜಿತ್‌ ಸಿಂಗ್‌, ಪಾಪ್‌ ತಾರೆ ರಿಹಾನಾ ಭಾಗವಹಿಸಿ ಸಂಗೀತ ರಸಮಂಜರಿ ಕಾರ್ಯಕ್ರಮ ನೆರವೇರಿಸಿದ್ದರು.

40 ದಿನಗಳ ಕಾಲ ಅನ್ನದಾನ:

ಪುತ್ರ ಅನಂತ್‌ ಅಂಬಾನಿ ವಿವಾಹದ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ಮುಕೇಶ್‌ ಅಂಬಾನಿ ನಿವಾಸ ಅಂಟಾಲಿಯಾ ಮುಂಭಾಗದಲ್ಲಿ ಅಂಬಾನಿ ಕುಟುಂಬ ಅನ್ನದಾನ ಏರ್ಪಡಿಸಿದೆ. 40 ದಿನಗಳ ಕಾಲ ಅನ್ನದಾನ ನಡೆಯಲಿದ್ದು, ಪ್ರತಿದಿನ 9 ಸಾವಿರ ಜನರಿಗೆ ಉಚಿತ ಊಟ ನೀಡುವ ಗುರಿ ಹೊಂದಿದೆ. ಜೂನ್‌ 5ರಿಂದ ಪ್ರಾರಂಭವಾದ ಈ ಅನ್ನದಾನ ಜುಲೈ 15ರವರೆಗೆ ನಡೆಯಲಿದೆ.

ಅಂಬಾನಿ ಕುಟುಂಬ ಇತ್ತೀಚೆಗೆ ಮುಂಬೈನಲ್ಲಿ 50 ಬಡ ಜೋಡಿಗಳಿಗೆ ಸಾಮೂಹಿಕ ವಿವಾಹ ಏರ್ಪಡಿಸಿ, ಆ ಎಲ್ಲಾ ವಧುಗಳಿಗೆ ನೀತು ಅಂಬಾನಿಯವರು ತಲಾ 1 ಲಕ್ಷ ರೂಪಾಯಿ ನೀಡಿದ್ದಾರೆ. ಜೊತೆಗೆ ಚಿನ್ನಾಭರಣಗಳನ್ನು ವಿತರಿಸಿದ್ದರು ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:FIR: ಆಂಧ್ರ ಮಾಜಿ ಸಿಎಂ ಜಗನ್ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್… ಏನಿದು ಪ್ರಕರಣ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.