ಫ್ರೂಟ್ ಇರ್ಫಾನ್ ಕೊಲೆ ಆರೋಪಿ ಸೆರೆ : ದಯಾನಾಯಕ್ ನೇತೃತ್ವದ ತಂಡದಿಂದ ಕಾರ್ಯಾಚರಣೆ
Team Udayavani, Nov 26, 2020, 11:50 AM IST
ಮುಂಬೈ: ರಿಯಲ್ ಎಸ್ಟೇಟ್ ಉದ್ಯಮಿ ಫ್ರೂಟ್ ಇರ್ಫಾನ್ನನ್ನು ಈ ವರ್ಷ ಆಗಸ್ಟ್ನಲ್ಲಿ ಹುಬ್ಬಳ್ಳಿಯಲ್ಲಿ ಕೊಲೆ ಮಾಡಿದ ಉತ್ತರಪ್ರದೇಶದ ಅನೂಪ್ ಸಿಂಗ್ನನ್ನು (24) ಮುಂಬೈನ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.
ಉತ್ತರಪ್ರದೇಶದ ಬಲರಾಮಪುರದ ನಿವಾಸಿ ಗೊಲು ಅಲಿಯಾಸ್ ಅಂಕುರ್ ಸಿಂಗ್ ಅಲಿಯಾಸ್ ಅನೂಪ್ ಸಿಂಗ್ ಸುಪಾರಿ ಪಡೆದು
ಫ್ರೂಟ್ ಇರ್ಫಾನ್ನನ್ನು ಆ.6ರಂದು ಹತ್ಯೆ ಮಾಡಿದ್ದ. ಈ ಘಟನೆ ಬಳಿಕ ಸತತವಾಗಿ ಪೊಲೀಸರ ಕಣ್ತಪ್ಪಿಸಿಕೊಂಡು ಓಡಾಡುತ್ತಿದ್ದ ಅನೂಪ್ನನ್ನು ಖಚಿತ ಸುಳಿವಿನ ಮೇಲೆ ದಯಾನಾಯಕ್ ನೇತೃತ್ವದ ಎಟಿಎಸ್ ತಂಡ ಮಂಗಳವಾರ ಸಂಜೆ ಅಂಧೇರಿಯಲ್ಲಿ ಬಲೆಗೆ ಬೀಳಿಸಿತ್ತು. ಬಲಿಯಾದ ಉದ್ಯಮಿಯ ಎದೆಗೆ ಗುಂಡು ಹಾರಿಸಿರುವುದಾಗಿ ಅನೂಪ್ ವಿಚಾರಣೆ ವೇಳೆ
ಒಪ್ಪಿದ್ದರು. ಅನೂಪ್ 2016ರಲ್ಲೇ ಒಮ್ಮೆ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ. ಅವನನ್ನು ಮುಂಬೈನ ಅರ್ಥರ್ ರಸ್ತೆಯ ಬಂಧಿಖಾನೆಯಲ್ಲಿ ಇರಿಸಲಾಗಿತ್ತು.
ಇದನ್ನೂ ಓದಿ:ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದ ಮೈಕ್ರೋಮ್ಯಾಕ್ಸ್: ನೋಟ್-1 Sold Out, 1B ಇಂದು ಬಿಡುಗಡೆ
ಅಲ್ಲೇ ಆತನಿಗೆ ನಿಪುಣ ಶೂಟರ್ಗಳ ಸಂಪರ್ಕ ಬಂದಿದ್ದು, ಜೈಲಿನಿಂದ ಬಿಡುಗಡೆಯಾದ ಕೂಡಲೇ ಇರ್ಫಾನ್ ಹತ್ಯೆಗೆ ಸುಪಾರಿ ಪಡೆದಿದ್ದ ಎಂದು ಪೊಲೀಸ್ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ
ಕನ್ನಡದಲ್ಲಿ ಎಂಜಿನಿಯರಿಂಗ್ ಓದಲು ಹಿಂದೇಟು! ಕಳೆದ 4 ವರ್ಷಗಳಲ್ಲೂ ಪ್ರವೇಶಕ್ಕೆ ನಿರಾಸಕ್ತಿ
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.