Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ
ಕೊಟ್ಟಿದ್ದ ಹಣ ವಾಪಸ್ ಕೇಳಿದ್ದಕ್ಕೆ ಪ್ರಾಣ ಬೆದರಿಕೆ
Team Udayavani, Sep 30, 2024, 1:53 AM IST
ಬೆಂಗಳೂರು: ಸರಕಾರಿ ಉದ್ಯೋಗ ಕೊಡಿಸುವುದಾಗಿ ಖಾಸಗಿ ಕಂಪೆನಿ ಉದ್ಯೋಗಿಯೊಬ್ಬರಿಗೆ ಬರೋಬರಿ 28 ಲಕ್ಷ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಹೊಸಪಾಳ್ಯ ನಿವಾಸಿ ಎಚ್.ಕೆ. ರಾಘವೇಂದ್ರ ಅವರು ನೀಡಿದ ದೂರಿನ ಮೇರೆಗೆ ದಾವಣಗೆರೆ ಮೂಲದ ರಾಘವೇಂದ್ರ, ಮಂಜುನಾಥ್, ಸುನೀತಾ ಬಾಯಿ, ಗಾಯತ್ರಿ, ಸಚಿನ್ ಹಾಗೂ ತಿಲಕ್ ಎಂಬವರ ವಿರುದ್ಧ ಬಂಡೇಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ದೂರುದಾರ ರಾಘವೇಂದ್ರ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ಈ ಮಧ್ಯೆ ಸ್ನೇಹಿತ ಕಿರಣ್ ಮೂಲಕ ದಾವಣಗೆರೆಯ ರಾಘವೇಂದ್ರ ಎಂಬಾತ ಪರಿಚಯವಾಗಿದ್ದಾನೆ. ಆಗ ಆರೋಪಿ ತನಗೆ ಸರಕಾರದ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಪರಿಚಯವಿದ್ದು, ನಿಮಗೆ ಸರಕಾರಿ ಕೆಲಸ ಕೊಡಿ
ಸುತ್ತೇನೆ. ಅಲ್ಲದೆ, ತನ್ನ ಸಹೋದರ ಮಂಜುನಾಥ್ ದಾವಣಗೆರೆಯಲ್ಲಿ ಎಇಇ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ನಂಬಿಸಿದ್ದಾನೆ.
ಕೆಲವು ದಿನಗಳ ಬಳಿಕ ಸರಕಾರಿ ಕೆಲಸ ಕೊಡಿಸಲು ಮುಂಗಡವಾಗಿ 2021ರ ಫೆ. 22ರಂದು 2 ಲಕ್ಷ ರೂ.ಅನ್ನು ತನ್ನ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ನಂತರ ಹಂತವಾಗಿ ಅವರ ಸಹೋದರ ಮಂಜುನಾಥ್ ಪತ್ನಿ ಗಾಯಿತ್ರಿ, ತನ್ನ ಪತ್ನಿ ಸುನೀತಾ ಬಾಯಿ, ರಾಘವೇಂದ್ರನ ಪರಿಚಯಸ್ಥ ಸಚಿನ್ ಮತ್ತು ತಿಲಕ್ಗೆ ನಗದು ರೂಪದಲ್ಲಿ ಹಣ ಕೊಡಿಸಿದ್ದಾನೆ.
ಆ ಬಳಿಕವೂ ಆರೋಪಿ ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಒಟ್ಟು 28.40 ಲಕ್ಷ ರೂ. ನೀಡಲಾಗಿದೆ. ಆದರೆ, ಇದುವರೆಗೂ ಸರ್ಕಾರಿ ಕೆಲಸ ಕೊಡಿಸಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ ಆರೋಪಿಗಳು ಪ್ರಾಣ ಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್
FIR Rigister: ಕೇಂದ್ರ ಸಚಿವೆ ನಿರ್ಮಲಾ, ಸಿದ್ದರಾಮಯ್ಯ ಪ್ರಕರಣ ಅಜಗಜಾಂತರ: ಆರ್. ಅಶೋಕ್
Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.