Gandhi Jayanti: ಉಡುಪಿಯವರನ್ನು ತಾಜಾ ಬನಿಯಾ ಎಂದಿದ್ದ ಗಾಂಧೀಜಿ!

ಇದು ಉಡುಪಿಯ ಮರ್ಯಾದೆ ಪ್ರಶ್ನೆ. ಎಲ್ಲರೂ ಬಿಡ್‌ ನಲ್ಲಿ ಭಾಗವಹಿಸಬೇಕು...

Team Udayavani, Oct 2, 2024, 12:59 PM IST

Gandhi Jayanti: ಉಡುಪಿಯವರನ್ನು ತಾಜಾ ಬನಿಯಾ ಎಂದಿದ್ದ ಗಾಂಧೀಜಿ!

ಉಡುಪಿ: ಗಾಂಧೀಜಿಯವರು 1920, 1927, 1934ರಲ್ಲಿ ದ.ಕ. ಜಿಲ್ಲೆಗೆ ಮೂರು ಬಾರಿ ಭೇಟಿ ನೀಡಿದ್ದರೂ ಉಡುಪಿ, ಬ್ರಹ್ಮಾವರ, ಕುಂದಾಪುರಕ್ಕೆ ಭೇಟಿ ಕೊಟ್ಟದ್ದು ಒಂದೇ ಬಾರಿ. ಅದು 1934ರ ಫೆಬ್ರವರಿ 25ರಂದು. ಫೆ. 24ರಂದು ಮಡಿಕೇರಿ ಮೂಲಕ ಸಂಪಾಜೆಗೆ ಬಂದು ಸುಳ್ಯ, ಪುತ್ತೂರು, ಬಂಟ್ವಾಳ, ಮಂಗಳೂರಿನಲ್ಲಿ ತಂಗಿದರು. ಫೆ. 25ರಂದು ಮೂಲ್ಕಿ, ಉಡುಪಿ, ಬ್ರಹ್ಮಾವರ,
ಕುಂದಾಪುರದಲ್ಲಿ ಪ್ರವಾಸ ನಡೆಸಿದರು.

ಉದ್ಯಾವರದ ಹೊಳೆಯನ್ನು ದೋಣಿ ಮೂಲಕ ದಾಟಿ ಉಡುಪಿಗೆ ಬಂದ ಗಾಂಧೀಜಿಯವರು ಅಜ್ಜರಕಾಡಿನ ಮೈದಾನದಲ್ಲಿ ದೊಡ್ಡ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದವರು ಕಾರ್ಪೊರೇಶನ್‌ ಬ್ಯಾಂಕ್‌ ಸ್ಥಾಪಕ ಅಧ್ಯಕ್ಷರಾಗಿದ್ದ ಹಾಜಿ ಅಬ್ದುಲ್ಲಾ ಸಾಹೇಬ್‌. ಅಸ್ಪೃಶ್ಯತಾ ನಿವಾರಣೆಗಾಗಿಯೇ ಈ ಪ್ರವಾಸವನ್ನು ಗಾಂಧೀಜಿ ಕೈಗೊಂಡಿದ್ದರಿಂದ ವಿವಿಧೆಡೆಗಳಲ್ಲಿ ದಲಿತೋದ್ಧಾರಕ್ಕಾಗಿ ಹಣ ಸಂಗ್ರಹಿಸಿದ್ದರು. ಇದರಲ್ಲಿ ಚಿನ್ನ ಸಂಗ್ರಹವೂ ಇತ್ತು. ಉಡುಪಿಯಲ್ಲಿ ನಡೆದ ಸಭೆಯಲ್ಲಿ ಪಾಂಗಾಳ ನಾಯಕ್‌ ಕುಟುಂಬದ ನಿರುಪಮಾ ನಾಯಕ್‌ ಅವರೂ ಚಿನ್ನದ ಆಭರಣವನ್ನು ಸಮರ್ಪಿಸಿದ್ದರು.

ದೇಣಿಗೆ ಮೊತ್ತವನ್ನು ಏರಿಸುವುದಕ್ಕಾಗಿ ಏಲಂ ಹಾಕಿದಾಗ ಗಾಂಧೀಜಿಯವರು ಉಡುಪಿಯವರನ್ನು “ತಾಜಾ ಬನಿಯರು’
ಎಂದು ಹಾಸ್ಯ ಚಟಾಕಿ ಹಾರಿಸಿದರು. ಆ ಸನ್ನಿವೇಶ ಹೀಗಿತ್ತು: ಗಾಂಧೀಜಿಯವರು ಬಂದ ಚಿನ್ನಾಭರಣ ಉಡುಗೊರೆ ಗಳನ್ನು ಏಲಂ ಹಾಕಿದರು. ಗಾಂಧೀಜಿಯವರೇ ಸ್ವತಃ ಕರೆದರೂ ಏಲಂಗೆ ನಿರೀಕ್ಷಿತ ಲಾಭ ಆಗಲಿಲ್ಲ.

“ನಾನೇ ಕರೆದರೂ ಇಷ್ಟೇನಾ ಪ್ರತಿಕ್ರಿಯೆ’ ಎಂದು ಗಾಂಧೀಜಿ ಹೇಳಿದಾಗ ದಿ|ಡಾ| ಎಂ.ವಿ. ಕಾಮತ್‌ ಅವರ ತಂದೆ ವಿಟಲ ಕಾಮತ್‌ ಅವರು ಮುಂದೆ ನಿಂತು “ಇದು ಉಡುಪಿಯ ಮರ್ಯಾದೆ ಪ್ರಶ್ನೆ. ಎಲ್ಲರೂ ಬಿಡ್‌ ನಲ್ಲಿ ಭಾಗವಹಿಸಬೇಕು’ ಎಂದು ಹೇಳಿ ವಾರ್‌ ಕರೆದರು. ಆಗ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಬೆಲೆಗೆ ಏಲಂ ಆಯಿತು. ಆಗ ಗಾಂಧೀಜಿಯವರು “”I thought I am a good baniya. But you are a better baniya than I am'(“ನಾನೇ ಉತ್ತಮ ಬನಿಯಾ ಎಂದು ತಿಳಿದುಕೊಂಡಿದ್ದೆ. ನನಗಿಂತಲೂ ನೀವು ತಾಜಾ ಬನಿಯಾ’) ಎಂದು ವಿಟಲ ಕಾಮತ್‌ರನ್ನುದ್ದೇಶಿಸಿ ಹೇಳಿದರು.

“ಇದು ಗಾಂಧೀಜಿ ಕೊಟ್ಟ ದೊಡ್ಡ ಬಿರುದು ಎಂದು ನನ್ನ ತಂದೆ ಹೇಳುತ್ತಿದ್ದರು’ ಎಂದು ಡಾ|ಎಂ.ವಿ.ಕಾಮತ್‌ ನೆನಪಿಸಿಕೊಳ್ಳುತ್ತಿದ್ದರು. ಈ ಮಾತನ್ನು ಉಡುಪಿ ಎಂಜಿಎಂ ಕಾಲೇಜಿನ ಗಾಂಧೀ ಅಧ್ಯಯನ ಕೇಂದ್ರದ ಸಂಶೋಧಕ ಯು. ವಿನೀತ್‌ ರಾವ್‌ ಅವರಲ್ಲಿ ಡಾ|ಎಂ.ವಿ.ಕಾಮತ್‌ ನೆನಪಿಸಿಕೊಂಡಿದ್ದರು. ಉಡುಪಿಯಲ್ಲಿ ಸಂಗ್ರಹವಾದ ಮೊತ್ತ 1,240 ರೂ. ಇದರಲ್ಲಿ ಪಡುಬಿದ್ರಿ, ಕಾಪು, ಕಟಪಾಡಿ, ಉದ್ಯಾವರದಿಂದ ಸಂಗ್ರಹವಾದ ಮೊತ್ತವೂ ಸೇರಿದೆ.

ಉಡುಪಿಯ ಬಳಿಕ ಕಲ್ಯಾಣಪುರ, ಬ್ರಹ್ಮಾವರಕ್ಕೆ ಸಂಜೆ 5 ಗಂಟೆಗೆ ಗಾಂಧೀಜಿಯವರು ತೆರಳಿ ಭಾಷಣ ಮಾಡಿದರು. ಇಲ್ಲಿ 239 ರೂ. ಸಂಗ್ರಹವಾಯಿತು. ರಾತ್ರಿ 8 ಗಂಟೆಗೆ ಕುಂದಾಪುರಕ್ಕೆ ತೆರಳಿ ಅಲ್ಲಿ ಭಾಷಣ ಮಾಡಿದರು. ಕುಂದಾಪುರದಲ್ಲಿ 1,143 ರೂ.
ಸಂಗ್ರಹವಾಯಿತು. ರಾತ್ರಿ ಅಲ್ಲಿ ವಾಸ್ತವ್ಯವಿದ್ದು ಫೆ. 26ರಂದು ಸೋಮವಾರ ಮೌನವ್ರತ ಆಚರಿಸಿ ಫೆ. 27ರಂದು ದಯಾವತಿ ಹಡಗಿನ ಮೂಲಕ ಕಾರವಾರಕ್ಕೆ ತೆರಳಿ ತಮ್ಮ ಪ್ರವಾಸವನ್ನು ಮುಂದುವರಿಸಿದರು.

ಗಾಂಧೀಜಿ ಪ್ರತಿಮೆ ಅನಾವರಣ


2000ನೇ ಅ. 2 ಗಾಂಧೀ ಜಯಂತಿಯಂದು ಅಜ್ಜರಕಾಡಿನಲ್ಲಿ ಗಾಂಧೀಜಿಯವರ ಶಿಲಾ ಪ್ರತಿಮೆಯನ್ನು ಸಮಾಜ ಕಲ್ಯಾಣ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪನವರು ಆನಾವರಣಗೊಳಿಸಿದ್ದರು. ಸಿಂಡಿಕೇಟ್‌ ಬ್ಯಾಂಕ್‌ ಅಧ್ಯಕ್ಷರಾಗಿದ್ದ ಡಿ.ಟಿ.ಪೈ, ಸಂಸದರಾಗಿದ್ದ ವಿನಯಕುಮಾರ ಸೊರಕೆ, ಶಾಸಕರಾಗಿದ್ದ ಯು.ಆರ್‌. ಸಭಾಪತಿ, ವಿಧಾನ ಪರಿಷತ್‌ ಸದಸ್ಯರಾಗಿದ್ದ ಡಾ|ವಿ.
ಎಸ್‌.ಆಚಾರ್ಯ, ಜಿಲ್ಲಾಧಿಕಾರಿ ಗೌರವ ಗುಪ್ತ, ಉದ್ಯಮಿ ಕೆ.ಸತೀಶ್ಚಂದ್ರ ಹೆಗ್ಡೆ, ಡಾ|ಮುರಾರಿ ಬಲ್ಲಾಳ್‌, ನಗರಸಭಾಧ್ಯಕ್ಷೆಯಾಗಿದ್ದ ಆನಂದಿ, ಉಪಾಧ್ಯಕ್ಷರಾಗಿದ್ದ ರೆನೋಲ್ಡ್‌ ಪ್ರವೀಣ್‌ಕುಮಾರ್‌, ಪೌರಾಯುಕ್ತ ಡಿ.ಬಸಪ್ಪ
ಮೊದಲಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

1-a-souti

India tour ಮುನ್ನ ನಾಯಕತ್ವ ತೊರೆದ ಸೌಥಿ :ಕಿವೀಸ್ ಗೆ ಹೊಸ ಸಾರಥಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

1-pawan-kalyana

Andhra DCM 11 ದಿನಗಳ ವ್ರತ; ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಪವನ್ ಕಲ್ಯಾಣ್

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

Delhi Drug Bust: ಬೃಹತ್‌ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್‌ ವಶ

Delhi Drug Bust: ಬೃಹತ್‌ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್‌ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-shirva

Shirva: ಬಂಟಕಲ್ಲು ರಕ್ತದಾನ ಶಿಬಿರ- ರಕ್ತದಾನದಿಂದ ಜೀವ ಉಳಿಸುವ ಕಾರ್ಯ: ಕಾಪು ತಹಶೀಲ್ದಾರ್‌

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

8-udupi-4

Udupi: ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ

1-shirva

Muscut ವಿಶ್ವಬ್ರಾಹ್ಮಣ ಒಕ್ಕೂಟ; ಸ್ವಯಂಪ್ರೇರಿತ ರಕ್ತದಾನ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!

Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!

10-shirva

Shirva: ಬಂಟಕಲ್ಲು ರಕ್ತದಾನ ಶಿಬಿರ- ರಕ್ತದಾನದಿಂದ ಜೀವ ಉಳಿಸುವ ಕಾರ್ಯ: ಕಾಪು ತಹಶೀಲ್ದಾರ್‌

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

1-a-souti

India tour ಮುನ್ನ ನಾಯಕತ್ವ ತೊರೆದ ಸೌಥಿ :ಕಿವೀಸ್ ಗೆ ಹೊಸ ಸಾರಥಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.