Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

ಇಂದು ರಾಮ ರಾಜ್ಯದ ಕನಸು ಇನ್ನು ಕನಸಾಗಿಯೇ ಉಳಿಯುವಂತಾಗಿದೆ.

Team Udayavani, Oct 19, 2024, 12:09 PM IST

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

ಗಾಂಧಿ ಜಯಂತಿ ಅ.2 ಎಂದಾಕ್ಷಣ ನನ್ನ ಮನ ಬಾಲ್ಯದ ದಿನಗಳ ದಸರಾ ರಜೆಗೂ ಮೊದಲು ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಆಚರಣೆಯನ್ನು ಮಾಡಿ ಒಂದು ತಿಂಗಳು ರಜೆಯನ್ನು ಘೋಷಿಸುತ್ತಿದ್ದ ದಿನಗಳಿಗೆ ಜಾರುತ್ತದೆ. ಅಂದು ಶಾಲೆಗೆ ಹೋಗಿ ಗಾಂಧೀ ಜನ್ಮದಿನಾಚರಣೆಯನ್ನು ಮಾಡುವ ಮುನ್ನ ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಂದ ಚಿಕ್ಕದಾದ ಯಾವುದಾದರೂ ಕೆಲಸಗಳನ್ನು ಮಾಡಿಸುವುದು. ಶಾಲೆಯ ಮುಂದಿನ ಜಾಗವನ್ನು ಚೊಕ್ಕಟ ಮಾಡಿಸುವುದು..ಹೀಗೆ…ಆಗಿನ ಆ ಹುರುಪು ತುಂಬ ಖುಷಿಯನ್ನು ಕೊಡುವ ಕ್ಷಣಗಳು. ಏಕೆಂದರೆ ನಾಳಿನಿಂದ ಒಂದು ತಿಂಗಳ ರಜಾ ಮಜಾವನ್ನು ನೆನಪಿಸಿಕೊಂಡು ಸಂಭ್ರಮ ಪಡುತ್ತಿದ್ದೇವು. ನಾನು ರಜೆಯಲ್ಲಿ ಹೀಗೆ -ಹಾಗೆ ಮಾಡುವೇನು, ಅಲ್ಲಿಗೆ ಅವರ ಜತೆ ಹೋಗುವೇನು ಎಂದು ಬಡಾಯಿ ಕೊಚ್ಚಿಕೊಳ್ಳುವುದೇನೂ…ಬಿಡಿ ಆ ದಿನಗಳು ಮತ್ತೇ ಮರಳಲಾರವು.

ಗಾಂಧಿಯೇಂದರೇ ಏನೋ ಪ್ರೀತಿ. ಅವರ ಬಾಲ್ಯದಲ್ಲಿ ಅವರು ಮಾಡಿದ ಕಳ್ಳತನ. ದಾರಿ ತಪ್ಪಿ ಕೆಟ್ಟ ಹುಡುಗನಾಗಿ ತಂದೆಯ ಮುಂದೆ ಕ್ಷಮಾಪಣೆ ಕೇಳಿದ್ದು. ತಾಯಿಯ ಜತೆ 21 ದಿನಗಳ ವರೆಗೂ ಉಪವಾಸ ಮಾಡಿದ್ದು. ಹೀಗೆ ಅವರ ಜೀವನವನ್ನು ನಮ್ಮ ಜತೆ ಸಮಕರಿಸಿಕೊಂಡು, ಮರಿ ಗಾಂಧಿಯನ್ನಾಗಿ ಮಾಡಿಕೊಂಡು ನಮ್ಮವರೇ ಅವರು ಎಂಬ ಉತ್ಸಾಹದಿಂದ ಶಾಲೆಯಲ್ಲಿ ಸಿಹಿಯನ್ನು ತಿನ್ನುವ ಮೂಲಕ ಸಂತೋಷ ಪಡುತ್ತಿದ್ದೆವು. ಅವರ ಕಥೆಯನ್ನು ಪುಸ್ತಕದಲ್ಲಿ ಓದಿದ್ದರೂ, ಪುನಃ ನಮ್ಮ ಗುರುಗಳ ಬಾಯಿಯಲ್ಲಿ ಅವರ ಸಾಧನೆ ಮತ್ತು ಆದರ್ಶದ ನುಡಿಗಳನ್ನು ನಮ್ಮ ಕಿವಿಗೆ ತುಂಬಿಕೊಳ್ಳುತ್ತಿದ್ದೇವು. ಮುಂದೆ ಒಂದು ದಿನ ಅವರ ಮಟ್ಟಿಗೆ ಬೆಳೆಯಬೇಕು. ಅವರ ರೀತಿ ನಾವು ನಾಯಕರಾಗಬೇಕು. ಬಡವರ ಬಗ್ಗೆ ನಮ್ಮ ಕೈಯಿಂದ ಆಗುವ ಸಹಾಯವನ್ನು ಮಾಡಬೇಕು. ಇತ್ಯಾದಿ ಇತ್ಯಾದಿ ವಿಚಾರಗಳ ಸರಮಾಲೆಯನ್ನು ಆ ಕ್ಷಣದಲ್ಲಿ ಮನಸ್ಸಿನ ತುಂಬ ತುಂಬಿಕೊಂಡು ಬೀಗುತ್ತಿದ್ದೇವು. ಈಗ ಅದು ಎಲ್ಲ ಸುಮಧುರ ನೆನಪು ಮಾತ್ರ.!

ಶಾಲೆಯ ದಿನಗಳಿಂದ ಹೊರಗೆ ಬಂದ ಅನಂತರ ಈ ದಿನಗಳು ಕೇವಲ ರಜಾದಿನಗಳಾಗಿ ಬಿಟ್ಟಿವೆ. ರಾಷ್ಟ್ರಕ್ಕಾಗಿ ಹೋರಾಡಿ ತಮ್ಮನ್ನೇ ತಾವು ಅರ್ಪಿಸಿಕೊಂಡು ನಮ್ಮ ಇಂದಿನ ಈ ಸುಖೀ ದಿನಗಳಿಗೆ ಕಾರಣಕರ್ತರಾದ ಗಾಂಧಿ, ಲಾಲಬಹದ್ದೂರ್‌ ಶಾಸ್ತ್ರೀ ಮುಂತಾದ ಸ್ವಾತಂತ್ರ್ಯ ನಾಯಕರ ನೆನಪು ಇಂದು ಯಾವ ರೀತಿಯಲ್ಲೂ ಬೇರೆ ದಿನಗಳಲ್ಲಿ ಬರಲಾರದು ಅಲ್ಲವಾ? ಗಾಂಧಿಜೀಯವರ ಆದರ್ಶ, ನೀತಿ, ಮೌಲ್ಯಗಳು ಮತ್ತು ಕನಸುಗಳು ಇಂದಿನ ಈ ದಿನಮಾನಗಳಲ್ಲಿ ಅವರ ಜಯಂತಿ ದಿನಕ್ಕೆ ಮಾತ್ರ ಸೀಮಿತ. ಆ ಒಂದು ದಿನ ಮಾತ್ರ ಎಲ್ಲೆಲ್ಲೂ ಅವರ ಗುಣಗಾನ ಮಾಡಿ ಅನಂತರ ಮುಂದಿನ ಜಯಂತಿ ಬರುವವರೆಗೂ ಗೊತ್ತು ಗೊತ್ತಿಲ್ಲದ ಗಾವಿದರ ರೀತಿ ಮಲಗಿ ಬಿಟ್ಟಿರುತ್ತೇವೆ.

ಗಾಂಧಿಯೇಂದರೆ ಇಂದಿನ ನಮ್ಮ ಹೈಟೆಕ್‌ ಯುವಕ ಯುವತಿಯರಿಗೆ ಹಾಡಿಕೊಳ್ಳುವ ವಸ್ತುವಾಗಿದೆ. ಅವರ ಹೆಸರು ಕೇವಲ ಎಲ್ಲ ಮುಖ್ಯ ನಗರಗಳಲ್ಲಿ ಒಂದು ಮುಖ್ಯ ರಸ್ತೆಗೆ, ಮುಖ್ಯ ಸರ್ಕಲ್‌ಗೆ ಮಾತ್ರ ಇಟ್ಟು ಕೊಂಡಾಡುವವರ ರೀತಿ ನಮ್ಮ ಹಿರಿಮೆಯನ್ನು ಮೆರೆಯುತ್ತಿದ್ದೇವೆ. ಯಾರಾದರೂ ಸ್ವಲ್ಪ ಸಾಧುವಾಗಿ ಮತ್ತು ಸಭ್ಯನಾಗಿ ಅಥವಾ ಹಳೆಕಾಲದವನ ರೀತಿಯಲ್ಲಿ ನೆಡೆದುಕೊಂಡರೆ ಮುಗಿಯಿತು ಪ್ರತಿಯೊಬ್ಬರೂ ಅವನನ್ನು “ನೋಡಾಪ್ಪ ಗಾಂಧಿ ಬಂದ’ ಅನ್ನುವರು.

ಸಿನೆಮಾ ಥಿಯೇಟರ್‌ನಲ್ಲಿ ಗಾಂಧಿ ಕ್ಲಾಸ್‌ ಎಂದು ಮುಂದಿನ ಆಸನಗಳಿಗೆ ಇಟ್ಟಿರುವವರು. ಅಲ್ಲಿಗೆ ಹೋಗುವ ಮಂದಿಗಳು ಸ್ವಲ್ಪ ಯೋಚಿಸುವಂತೆ ಮಾಡಿರುವವರು ಯಾರು? ಅಂದು ಇಡೀ ಭಾರತ ಅವರ ಒಂದು ಮಾತಿಗೆ ಅವರ ಹಿಂದೆ ಬರುವಂತೆ ಮಾಡಿದ್ದ ಪವಾಡವಾದರೂ ಏನೂ? ಕಲ್ಪಿಸಲೂ ಸಾಧ್ಯವಿಲ್ಲ. ಯಾವುದೇ ದುಡ್ಡು, ಪ್ರಲೋಭನೆ ಯಾವೊಂದು ಇಲ್ಲದೇ ತಮ್ಮ ಸರಳತೆ, ಸತ್ಯ ಶೋಧನೆಯ ಮಾರ್ಗದಲ್ಲಿ, ಅಹಿಂಸೆಯ ಸತ್ಯಾಗ್ರಹವೆಂಬ ಅಸ್ತ್ರವನ್ನು ಮಾತ್ರ ಇಟ್ಟುಕೊಂಡು. ಪ್ರತಿಯೊಬ್ಬರಿಗೂ ಮುಂದೆ ದೂರಕುವ ಭವ್ಯ ಭರವಸೆಯ ಸ್ವಾತಂತ್ರ್ಯದ ಫಲಕ್ಕಾಗಿ ಎಲ್ಲರೂ ಕಟಿ ಬದ್ಧರಾಗಿರುವಂತೆ ಮಾಡಿದ ಮೋಡಿಗಾರ ಮತ್ತೇ ಈ ನೆಲದಲ್ಲಿ ಹುಟ್ಟಿ ಬರಲಾರೇನೋ.

ಅಂದು ಸಮಾಜದಲ್ಲಿ ವಿದ್ಯಾವಂತರ ಕೊರತೆ ಇದ್ದಿರಬಹುದು, ಬಡತನವಿದ್ದಿರಬಹುದು ಮತ್ತು ಮೌಢ್ಯದಲ್ಲಿಯೇ ಬದುಕಿದ್ದಿರಬಹುದು. ಆದರೂ ಎಲ್ಲರೂ ಒಂದಾಗಿ ಗಾಂಧಿ ಹಾಕಿ ಕೊಟ್ಟ ಹಾದಿಯಲ್ಲಿ ಸ್ವಾತಂತ್ರ್ಯಕ್ಕಾಗಿ ಅವರಿಗೆ ಬೆಂಬಲ ಕೊಟ್ಟಿರುವುದು ಆ ಜನರ ಹೆಮ್ಮೆಗೆ ಮತ್ತು ದೊಡ್ಡತನಕ್ಕೇ ಹಿಡಿದ ಕನ್ನಡಿ.

ಸ್ವಾತಂತ್ರ್ಯ ಬಂದು ಅರ್ಧ ಶತಮಾನ ಕಳೆದರೂ ನಮ್ಮ ಈ ರಾಜಕೀಯ ವ್ಯವಸ್ಥೆಯಲ್ಲಿರುವ ನಾಯಕರುಗಳ ಕನಸುಗಳು, ಅಧಿಕಾರ ದಾಹ, ಭ್ರಷ್ಟತೆ, ಯಾರನ್ನಾದರೂ ಏನಾದರೂ ಮಾಡುವಂತಿರುವ ಇವರುಗಳೆ ರಾಷ್ಟ್ರಪಿತ ಹುಟ್ಟಿದ ಭಾರತಾಂಬೆಯ ಮಕ್ಕಳೇ ಎಂಬ ಸಂಶಯ ಬರದೇ ಇರಲಾರದು. ಇದಕ್ಕೆ ಇರಬೇಕು ಇಂದು ಕೆಲವರು ಹೇಳುತ್ತಿರುತ್ತಾರೆ ಇಂದು ನಡೆಯುತ್ತಿರುವ ಈ ಭ್ರಷ್ಟ ವ್ಯವಸ್ಥೆಯಲ್ಲಿ ಏನಾದರೂ ಗಾಂಧಿಜೀಯವರು ಬಂದು ಯಾವುದಾದರೂ ಕ್ಷೇತ್ರಕ್ಕೆ ಸ್ಪರ್ಧಿಸಿದರೇ ಅವರನ್ನು ನಮ್ಮ ಜನ ಅತೀ ಹೆಚ್ಚು ಮತಗಳ ಅಂತರದಿಂದ ಸೋಲಿಸುತ್ತಾರೆ!!?

ನಮ್ಮ ಇಂದಿನ ಮಕ್ಕಳಿಗೆ ಗಾಂಧಿಯ ನುಡಿ, ಕನಸು, ಜೀವನ ಕೇವಲ ಪುಸ್ತಕದಲ್ಲಿ ಇದ್ದು ಅಂಕ ಪಡೆಯುವ ವಸ್ತುವಾಗಿದೆ.
ತಾನು ಬೆಳೆದ ಮೇಲೆ ಅದನ್ನು ಗಾಳಿಗೆ ತೋರಿ ತಾನು ಮಾತ್ರ ಚೆನ್ನಾಗಿರಬೇಕು ಮತ್ತು ತನ್ನವರು ಮಾತ್ರ ಚೆನ್ನಾಗಿರಬೇಕು ಎಂಬ ಸ್ವಾರ್ಥ ಸಮಾಜದ ನಿರ್ಮಾಣ ಕಾರ್ಯದಲ್ಲಿ ನಿರತವಾಗಿರುತ್ತಿದ್ದಾರೆ.

ಇಂದು ರಾಮ ರಾಜ್ಯದ ಕನಸು ಇನ್ನು ಕನಸಾಗಿಯೇ ಉಳಿಯುವಂತಾಗಿದೆ. ಅವರ ಅತೀ ಸರಳ ನಡೆ ನುಡಿ ನೇರವಂತಿಕೆ ಇಂದು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಅಂದು ಅವರನ್ನು ಕಂಡು ಅವರ ಆದರ್ಶವನ್ನು ಪಾಲಿಸಿಕೊಂಡು ನಮ್ಮ ನಡುವೆ ಇಂದು ಬದುಕುತ್ತಿರುವ ಕೆಲವೇ ಕೆಲವು ಹಿರಿಯರುಗಳು ಮರೆಯಾದರೇ. ಅವರ ಬಗ್ಗೆ ಹೇಳುವವರೆ ಸಿಗುವುದಿಲ್ಲವೇನೋ.

ಅದಕ್ಕೆ ಹಿಂದೆ ಗಾಂಧಿಯವರ ಸಮಯದಲ್ಲಿದ್ದ ಪ್ರಸಿದ್ಧ ಭೌತ ವಿಜ್ಞಾನಿ ಅಲ್ಬರ್ಟ್‌ ಐನ್‌ಸ್ಟಿàನ್‌ ಅವರು “ಈ ವ್ಯಕ್ತಿ ಹಿಂದೆ ನಮ್ಮ ಭೂಮಿಯ ಮೇಲೆ ಇದ್ದು ನಡೆದಾಡಿದ್ದಾರೆ ಎಂದರೆ ಮುಂದಿನ ಜನಾಂಗ ನಂಬುವುದಿಲ್ಲ’ ಎಂದು ಹೇಳಿರುವುದು. ನಮ್ಮ ದೇಶದಲ್ಲಿಯೇ ಹುಟ್ಟಿ ತನ್ನ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಉಸಿರನ್ನೇ ಮುಡಿಪಿಟ್ಟ ಮಹಾನ್‌ ವ್ಯಕ್ತಿಯನ್ನು ದಿನಂಪ್ರತಿ ನೆನೆಯುತ್ತ. ಅವರ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಐನ್‌ಸ್ಟೀನ್‌ ಅವರ ಮಾತನ್ನು ಸುಳ್ಳು ಮಾಡೋಣವೇ!

*ತಿಪ್ಪೇರುದ್ರಪ್ಪ ಎಚ್‌. ಈ, ಡೇಟನ್‌

 

ಟಾಪ್ ನ್ಯೂಸ್

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

12-biggboss

BBK11: ಜಗದೀಶ್ ಗೆ ನ್ಯಾಯ ಸಿಗಬೇಕು.. ವಕೀಲ್ ಸಾಬ್ ಪರ ನಿಂತ ಜನ

Udupi: Scooter caught fire near petrol pump

Udupi: ಪೆಟ್ರೋಲ್‌ ಪಂಪ್‌ ಬಳಿಯೇ ಹೊತ್ತಿ ಉರಿದ ಸ್ಕೂಟರ್‌; ತಪ್ಪಿದ ಭಾರೀ ಅನಾಹುತ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

11-malpe

Malpe: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

1-nikk

Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

ಗಾಳಿಯಲ್ಲೇ ರಾಕೆಟ್ ಹಿಡಿಯುವ ಯಶಸ್ವಿ ಪ್ರಯೋಗ:Rocket ಮರುಬಳಕೆಗೆ ಸ್ಪೇಸ್ಎಕ್ಸ್ ಹೊಸ ಭಾಷ್ಯ

ಗಾಳಿಯಲ್ಲೇ ರಾಕೆಟ್ ಹಿಡಿಯುವ ಯಶಸ್ವಿ ಪ್ರಯೋಗ:Rocket ಮರುಬಳಕೆಗೆ ಸ್ಪೇಸ್ಎಕ್ಸ್ ಹೊಸ ಭಾಷ್ಯ

ashish.jpg

Celebrity Corner: ನಿಜವಾದ ಗೆಳೆಯನನ್ನು ಕೊಟ್ಟ ಈ ಕ್ರಿಕೆಟ್‌ ಜಗತ್ತಿಗೆ ನಾನು ಚಿರಋಣಿ…

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

12-biggboss

BBK11: ಜಗದೀಶ್ ಗೆ ನ್ಯಾಯ ಸಿಗಬೇಕು.. ವಕೀಲ್ ಸಾಬ್ ಪರ ನಿಂತ ಜನ

Udupi: Scooter caught fire near petrol pump

Udupi: ಪೆಟ್ರೋಲ್‌ ಪಂಪ್‌ ಬಳಿಯೇ ಹೊತ್ತಿ ಉರಿದ ಸ್ಕೂಟರ್‌; ತಪ್ಪಿದ ಭಾರೀ ಅನಾಹುತ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.