Gangavathi: ಬೈಕ್ ವೀಲ್ಹಿಂಗ್ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೇ ಥಳಿಸಿದ ಪುಂಡರ ಗುಂಪು!

ಇಬ್ಬರು ಪೊಲೀಸರಿಗೆ ತೀವ್ರ ಗಾಯ, ಗಾಂಜಾ ಮತ್ತಿನಲ್ಲಿದ್ದ ಮೂವರು ಯುವಕರ ಪೊಲೀಸರ ವಶಕ್ಕೆ ಒಪ್ಪಿಸಿದ ಜನರು, ಉಳಿದವರು ಪರಾರಿ

Team Udayavani, Oct 9, 2024, 10:58 PM IST

gan-police

ಗಂಗಾವತಿ: ಬೈಕ್ ನಲ್ಲಿ ವೀಲ್ಹಿಂಗ್ ಮಾಡುತ್ತಿದ್ದ ಪುಂಡರ ಗುಂಪು ತಡೆದು ಬುದ್ಧಿ ಮಾತು ಹೇಳಿದ ಪೊಲೀಸರನ್ನೇ ಅಟ್ಟಾಡಿಸಿ ಥಳಿಸಿದ ಪ್ರಕರಣ ತಾಲೂಕಿನ ದಾಸನಾಳ ಸೇತುವೆ ಬಳಿ ಬುಧವಾರ ಸಂಜೆ ನಡೆದಿದೆ.

ಹೇಮಗುಡ್ಡ ದಸರಾ ಹಬ್ಬದ ಬಂದೋಬಸ್ತ್ ಮುಗಿಸಿ ಪೊಲೀಸರು ವಾಪಸ್ ಆಗುವಾಗ ಗಾಂಜಾ ಮತ್ತಿನಲ್ಲಿ ರಸ್ತೆಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದ ನಗರದ ಯುವಕರ ಗುಂಪನ್ನು ಪೊಲೀಸರು ಪ್ರಶ್ನಿಸಿದರು. ಈ ವೇಳೆ ಪುಂಡರ ಗುಂಪು ಏಕಾಏಕಿ ಪೇದೆ ಬಸವರಾಜ ಪಾಟೀಲ್ ಹಾಗೂ ಪೊಲೀಸ್‌ ವಾಹನ ಚಾಲಕ ಕನಕಪ್ಪ ಉಪ್ಪಾರರನ್ನು ಮನಸೋ ಇಚ್ಛೆ ಥಳಿಸಿ‌ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಪೊಲೀಸರ ಮೊಬೈಲ್ ಕಸಿದು ತುಂಗಭದ್ರಾ ಎಡದಂಡೆ ಕಾಲುವೆಗೆ ಎಸೆದಿದ್ದಾರೆ.

ಈ ಸಂದರ್ಭದಲ್ಲಿ ದಾಸನಾಳ ಸೇತುವೆ ಹತ್ತಿರವಿದ್ದ ಸ್ಥಳೀಯರು ಗಲಾಟೆ ಬಿಡಿಸಲು ಯತ್ನಿಸಿದರೂ ಪುಂಡರ ಗುಂಪು ಕೈ ಗೆ ಸಿದ್ದ ಕಟ್ಟಿಗೆ, ಕಲ್ಲು ಇತರೆ ವಸ್ತುಗಳಿಂದ ಥಳಿಸಿದ್ದಾರೆ. ಆದರೂ ಪುಂಡರ ಪೈಕಿ ಗಂಗಾವತಿ ಗುಂಡಮ್ಮ ಕ್ಯಾಂಪಿನ ಮೂವರು ಯುವಕರ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಗಾಯಗೊಂಡ ಪೊಲೀಸರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ವಿವರ:
ಗ್ರಾಮೀಣ ಠಾಣೆಯ ಪಿಎಸ್ಐ ಪುಂಡಪ್ಪ, ಮುಖ್ಯ ಪೇದೆ ಮೀಸೆ ಬಸವರಾಜ್ ಹಾಗೂ ಪೊಲೀಸ್ ವಾಹನ ಚಾಲಕ ಕನಕಪ್ಪ  ಹೇಮಗುಡ್ಡ ದಸರಾ ಕರ್ತವ್ಯ ಮುಗಿಸಿ ಗಂಗಾವತಿಗೆ ಆಗಮಿಸುತ್ತಿದ್ದಾಗ ಕೊಪ್ಪಳದ ಕಡೆಯಿಂದ ಗುಂಡಮ್ಮ ಕ್ಯಾಂಪಿನ ಅರ್ಬಾಜ್ ಹಾಗೂ ಯುವಕರ ಪಡೆ ವೀಲ್ಹಿಂಗ್ ಮಾಡಿಕೊಂಡು ಪೊಲೀಸರ ವಾಹನ ಓವರ್ ಟೇಕ್ ಮಾಡಿ ಮುಂದೆ ಹೋಗಿ ಸ್ಕಿಡ್ ಆಗಿ ಬಿದ್ದಿದ್ದಕ್ಕೆ ಪೊಲೀಸರು ತಕ್ಷಣ ಅವರ ರಕ್ಷಣೆಗೆ ಧಾವಿಸಿದ್ದಾರೆ. ರಕ್ಷಣೆಗೆ ಬಂದ ಪೊಲೀಸರು ಬುದ್ಧಿ ಹೇಳಲು ಮುಂದಾದಾಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಗಾಂಜಾ ಮತ್ತಿನಲ್ಲಿದ್ದ ಅರ್ಬಾಜ್ ಮತ್ತು ತಂಡ ಏಕಾಏಕಿ ಪೊಲೀಸರ ಮೇಲೆ ಹಲ್ಲೆ ನಡೆಸಿದೆ. ಅರ್ಬಾಜ್, ವೆಂಕಟೇಶ್, ಪಂಪನಗೌಡ, ಮೂವರು ಆರೋಪಿಗಳು ಪೊಲೀಸರ ವಶದಲ್ಲಿದ್ದು ಇನ್ನುಳಿದವರು ತಲೆ ಮರೆಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ

Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ

Congress: ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

Congress: ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Kasaragod: ಯುವಕನ ಕೊ*ಲೆ : ಜೀವಾವಧಿ ಸಜೆ, 3 ಲಕ್ಷ ರೂ. ದಂಡ

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

Bantwal: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಜೀಪು ಢಿಕ್ಕಿ; ಪಾರಾದ ಮಕ್ಕಳು

Bantwal: ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಜೀಪು ಢಿಕ್ಕಿ; ಪಾರಾದ ಮಕ್ಕಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

Janardhana-Reddy-Car

Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್‌ ರೋವರ್‌ ಕಾರು ವಶ

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

Udupi: ಉಚ್ಚಿಲ ದಸರಾ 2024: ಜನಮನ ಸೂರೆಗೊಳ್ಳುತ್ತಿರುವ ಸಾಂಸ್ಕೃತಿಕ ವೈವಿಧ್ಯ

Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ

Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ

Udupi: ಎದೆನೋವು; ಅಕೌಂಟೆಂಟ್‌ ಸಾವು

Udupi: ಎದೆನೋವು; ಅಕೌಂಟೆಂಟ್‌ ಸಾವು

Congress: ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

Congress: ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗೆ ಗೆಲುವು ಖಚಿತ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.