ರಾಜ್ಯದಲ್ಲಿನ್ನು ಒಂದೇ ಭುವನೇಶ್ವರಿ ಭಾವಚಿತ್ರ?


Team Udayavani, Nov 22, 2022, 6:45 AM IST

bhuvaneshwari

ಬೆಂಗಳೂರು: ರಾಜ್ಯದಲ್ಲಿ ನಾಡದೇವಿ ಭುವನೇಶ್ವರಿಯ ಏಕರೂಪದ ಭಾವಚಿತ್ರ ಬಳಕೆಗೆ ರಾಜ್ಯ ಸರ್ಕಾರ ನೇಮಿಸಿದ್ದ ತಜ್ಞರ ತಂಡ ಶಿಫಾರಸು ಮಾಡಿದೆ.

ನೂತನ ಭಾವಚಿತ್ರವು ಹಲವು ವಿಶೇಷತೆಗಳನ್ನು ಹೊಂದಿದ್ದು, ಕರ್ನಾಟಕ ನಕ್ಷೆ ಹಿನ್ನೆಲೆ, ರಾಜ್ಯವನ್ನಾಳಿದ ಎಲ್ಲ ರಾಜವಂಶಸ್ಥರ ವೈಭವ ಸಾರುವ ಆಭರಣ ಹಾಗೂ ನಾಡಿನ ವೈಶಿಷ್ಟéವನ್ನು ಒಳಗೊಂಡಿದೆ.

ಲಲಿತಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಮಹೇಂದ್ರ ನೇತೃತ್ವದ ಸಮಿತಿಯು ಈ ಭಾವಚಿತ್ರದ ಶಿಫಾರಸು ಮಾಡಿದೆ. ಸರ್ಕಾರ ಇದಕ್ಕೆ ಬಹುತೇಕ ಒಪ್ಪಿಗೆ ನೀಡಿದ್ದು, ಇದೇ ಮಾದರಿಯ ಪ್ರತಿಮೆಯನ್ನು ಕಲಾಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಹೇಳಲಾಗಿದೆ.

ಸುದ್ದಿಗಾರರ ಜತೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ಕುಮಾರ್‌, ನಾಡಗೀತೆಗೆ ಒಂದು ಚೌಕಟ್ಟು ರೂಪಿಸಿದ ಹಾಗೆ ಏಕರೂಪದ ನಾಡದೇವಿ ಭುವನೇಶ್ವರಿ ಭಾವಚಿತ್ರ ಬಳಕೆ ಬಗ್ಗೆ ಸರ್ಕಾರ ತಜ್ಞರ ಸಮಿತಿ ರಚಿಸಿತ್ತು. ಸಮಿತಿ ಅತ್ಯುತ್ತಮ ಭಾವಚಿತ್ರವನ್ನು ಶಿಫಾರಸು ಮಾಡಿದೆ. ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಮಿತಿ ಶಿಫಾರಸು ಮಾಡಿರುವ ಭಾವಚಿತ್ರದ ಮುಖದಲ್ಲಿ ಸ್ವಾಭಾವಿಕ ಸೌಂದರ್ಯ ಮತ್ತು ದೈವಿಕ ಭಾವ ಕಂಗೊಳಿಸಿದೆ. ಧ್ವಿಭುಜ ವಾಸ್ತವಿಕತೆಗೆ ಹತ್ತಿರವಾಗಿದೆ. ಬಲಗೈಯಲ್ಲಿ ಅಭಯ ಮುದ್ರೆ ಸಾಂಕೇತಿಕವಾಗಿ ರಕ್ಷಣೆ ನೀಡುತ್ತಿದ್ದರೆ, ಎಡಗೈಯಲ್ಲಿರುವ ತಾಳೆಗರಿ ಕನ್ನಡ ಭಾಷಾ ಸಂಪತ್ತು, ಜ್ಞಾನ ಸಮೃದ್ಧಿ ಪ್ರವಹಿಸುವ ನಿಟ್ಟನ್ನು ಸೂಚಿಸುತ್ತಿದೆ. ನಾಡದೇವತೆಯು ಕುಳಿತಿರುವ ಭಂಗಿಯು ಭವ್ಯತೆ ಹಾಗೂ ಸಾಕ್ಷ್ಯತೆ ಪ್ರತಿಬಿಂಬಿಸುತ್ತಿದೆ. ಕರ್ನಾಟಕದ ಧ್ವಜ ಕನ್ನಡಾಭಿಮಾನದ ಸಂಕೇತವಾಗಿ ರಾರಾಜಿಸುತ್ತಿದೆ. ಹಸಿರು ಸೀರೆಯು ಸಿರಿ ಸಂಪದ ಸಮೃದ್ಧಿ ಸೂಚಿಸುತ್ತದೆ.

ಚಾಲುಕ್ಯರ ಕಾಲದ ಕರಂಡ ಮಕುಟೋಪಾದಿಯಲ್ಲಿ ಕಿರೀಟ, ಕಿವಿಯಲ್ಲಿ ಸುಂದರ ಕೌಶಲ್ಯ ಕರ್ಣಪರ್ಯಗಳು, ಭುಜದ ಮೇಲೆ ಕರ್ನಾಟಕದ ವೈಶಿಷ್ಟéದ ಸಿಂಹ ಲಾಂಛನ ಭುಜಕೀರ್ತಿಗಳು, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ, ಹಾರಗಳು, ಕರ್ನಾಟಕ ಲಾಂಛನ-ಗಂಡ ಭೇರುಂಡ ಪದಕ, ಕಟಿಯ ಆಭರಣವಾದ ಬೆಳ್ಳಿಯ ಡಾಬು, ಕಟಿಯಲ್ಲಿ ಕೀರ್ತಿ ಮುಖ ಲಾಂಛನದ ವಡ್ಯಾಣ, ಉದ್ದನೆಯ ವೈಜಯಂತಿ ಹಾರ, ನಡುವೆ ಹೊಯ್ಸಳ ಲಾಂಛನದ ಪದಕ ನಾಡದೇವಿಯನ್ನು ಅಲಂಕರಿಸಿದೆ. ಕಾಲಿನಲ್ಲಿ ಕಡಗ, ಋಳಿ ಮತ್ತು ಕಾಲುಂಗುರಗಳು, ಹಣೆಯ ಲಲಾಟ, ತಿಲಕ, ಶಿರದಲ್ಲಿ ಮುಡಿದಿರುವ ಹೂವು ಸೌಭಾಗ್ಯದ ದ್ಯೋತಕಗಳಾಗಿವೆ.

ಕೆಳಗೆ ಸುಂದರ ಸದೃಢ ತಾವರೆ ಹೂವು ದೇವಿಯ ಮೃದುವಾದ ಕಾಲುಗಳಿಗೆ ಆಸರೆ ನೀಡಿದೆ. ಒಟ್ಟಾರೆ ನಾಡದೇವಿಯ ಈ ಚಿತ್ರವು ಸುಲಕ್ಷಣವಾಗಿ ಕರ್ನಾಟಕದ ಅಭಿಮಾನ, ಜ್ಞಾನ ಸಂಪತ್ತು, ಸಸ್ಯ ಸಮೃದ್ಧಿ, ಸಿರಿ ಸಂಪದ ಪ್ರತಿಬಿಂಬಿಸುವ ನೈಜ ಸ್ವರೂಪವಾಗಿದೆ ಎಂದು ತಿಳಿಸಲಾಗಿದೆ.

 

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.