Government Employees; ಸರಕಾರದ ನಿಲುವುಗಳಿಗೆ ತಕ್ಕಂತೆ ಕೆಲಸ ಮಾಡಿ: ಸಿದ್ದರಾಮಯ್ಯ
7ನೇ ವೇತನ ಆಯೋಗದ ಶಿಫಾರಸು ಅಂಗೀಕಾರ ಹಿನ್ನೆಲೆ ಸರಕಾರಿ ನೌಕರರ ಸಂಘದಿಂದ ಅಭಿನಂದನೆ
Team Udayavani, Jul 17, 2024, 10:07 PM IST
ಬೆಂಗಳೂರು: ಸರಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಕಾರಿ ನೌಕರರಿಗೆ ತಿಳಿಸಿದರು.
ಸರಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರಕಾರ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗದಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜತೆಗೆ ಸರಕಾರದ ನಿಲುವುಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕೆಂದು ಕಿವಿಮಾತು ಹೇಳಿದರು. 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಪೂರ್ಣವಾಗಿ ಒಪ್ಪಿಕೊಂಡಿದೆ. ಇದರಿಂದ ಸರಕಾರಕ್ಕೆ 20 ಸಾವಿರ ಕೋಟಿ ರೂ. ಹೆಚ್ಚಿನ ಹೊರೆಯಾಗಲಿದೆ ಎಂದರು. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನೂ ಸಂಘದಿಂದ ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ
Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ FIR
Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು
Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್!
ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್ನಲ್ಲಿ ಘಟನೆ, ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.