![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, May 18, 2020, 8:45 PM IST
ವಾಷಿಂಗ್ಟನ್: ಭಾರತದ ಸಾಗರೋತ್ತರ ನಾಗರಿಕರ (ಒಸಿಐ) ವೀಸಾ ನಿಯಮಗಳ ಕುರಿತಂತೆ ಇರುವ ಸಮಸ್ಯೆಗಳ ನಿವಾರಣೆಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವಿದೇಶಾಂಗ ಖಾತೆಯ ಸಹಾಯಕ ಸಚಿವ ವಿ.ಮುರಳೀಧರನ್ ಭರವಸೆ ನೀಡಿದ್ದಾರೆ.
ಅಲ್ಲದೆ, ಭಾರತದಲ್ಲಿ ಬಂಡವಾಳ ಹೂಡುವಂತೆ ವಿದೇಶಗಳಲ್ಲಿ ನೆಲೆಸಿರುವ ಭಾರತೀಯರಿಗೆ ಆಹ್ವಾನ ನೀಡಿದ್ದಾರೆ. ಕೋವಿಡ್ ಕ್ಕೆ ಸಂಬಂಧಿಸಿದಂತೆ ಭಾರತೀಯ-ಅಮೆರಿಕನ್ನರ ಜತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಅವರು ಸಮಾಲೋಚನೆ ನಡೆಸಿದರು. ಈ ವೇಳೆ, ಒಸಿಐ ಕಾರ್ಡ್ಗಳಿಗೆ ಸಂಬಂಧಿಸಿದಂತೆ ಹಲವರು ಪ್ರಶ್ನೆಗಳನ್ನು ಕೇಳಿದರು.ಒಸಿಐ ಕಾರ್ಡ್ ಹೊಂದಿದ ಮಕ್ಕಳಿರುವ ಭಾರತೀಯ ಮೂಲದವರಿಗೆ ಹಾಗೂ ಒಸಿಐ ಕಾರ್ಡ್ ಹೊಂದಿದ ಭಾರತೀಯ ಸಂಜಾತರಿಗೆ ತುರ್ತು ಕಾರಣಗಳಿಗಾಗಿ ಸಹ ಭಾರತಕ್ಕೆ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಅವರ ದೀರ್ಘಕಾಲಿನ ವೀಸಾವನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಇದೊಂದು ಮಲತಾಯಿ ಧೋರಣೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದರು. ಅವರ ಸಮಸ್ಯೆಯನ್ನು ಆಲಿಸಿದ ಸಚಿವರು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅರಿವಿದೆ. ಅವರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
You seem to have an Ad Blocker on.
To continue reading, please turn it off or whitelist Udayavani.