Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!

ಬಿಹಾರ ಬಿಜೆಪಿ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್‌ ಗಂಭೀರ ಆರೋಪ, ಬಿಜೆಪಿಯಿಂದ ಸುಳ್ಳು ಆರೋಪವೆಂದ ಆರ್‌ಜೆಡಿ

Team Udayavani, Oct 8, 2024, 12:02 AM IST

Tejasvi

ಪಾಟ್ನಾ: ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ವಾಸಿಸುತ್ತಿದ್ದ ಸರಕಾರಿ ಬಂಗಲೆಯ ಇತ್ತೀಚೆಗೆ ಬಿಟ್ಟು ತೆರಳುವಾಗ  ದುಬಾರಿ ಬೆಲೆಯ ಪೀಠೋಪಕರಣ, ಸೋಫಾ ಸೆಟ್‌, ಹಾಸಿಗೆ, ಕೊಳಾಯಿಗಳು ಮತ್ತು ಹವಾನಿಯಂತ್ರಕ (ಎಸಿ) ಸೇರಿ ಇತರ ವಸ್ತುಗಳ ಹೊತ್ತುಕೊಂಡು ಹೋಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಬಿಹಾರದ ಬಿಜೆಪಿಯ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ಸೋಮವಾರ ಮಾತನಾಡಿ ಪಾಟ್ನಾದ 5ನೇ ದೇಶ್‌ರತ್ನಾ ರಸ್ತೆಯಲ್ಲಿನ ಸರಕಾರಿ ಬಂಗಲೆಯಲ್ಲಿ ವಾಸವಿದ್ದ ತೇಜಸ್ವಿ ಯಾದವ್ ಅಲ್ಲಿಂದ ತೆರಳಿದ ನಂತರ “ಹೈಡ್ರಾಲಿಕ್‌  ಬೆಡ್‌ಗಳು , ಎಸಿ ಮತ್ತು ದೀಪಗಳು, ಸ್ನಾನದ ಕೊಠಡಿಯಲ್ಲಿನ ನೀರಿನ ಕೊಳಾಯಿಗಳು, ಬ್ಯಾಡ್ಮಿಂಟನ್ ಕೋರ್ಟ್ ಮ್ಯಾಟ್ ,ಫೌಂಟೇನ್ ಲೈಟ್‌ಗಳು ಮತ್ತು ಸೋಫಾಗಳು ವಿವಿಧ ವಸ್ತುಗಳು ಮನೆಯಿಂದ ಕಾಣೆಯಾಗಿವೆ ಎಂದು ಆರೋಪಿಸಿದರು.

“ನಾನು ಅವರ ಮೇಲೆ ಆರೋಪ ಮಾಡುತ್ತಿಲ್ಲ, ಆದರೆ ಅದು ಸಂಪೂರ್ಣ ಸಾಬೀತಾಗಿದೆ. ತೇಜಸ್ವಿ ಯಾದವ್ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ ರೀತಿಯೇ ಸ್ವಭಾವದಿಂದಲೇ ಅವರು ಸರ್ಕಾರದ ಆಸ್ತಿ ಹೇಗೆ ಲೂಟಿ ಮಾಡಿದ್ದಾರೆ ಎಂಬುದನ್ನು ತೋರಿಸುತ್ತದೆ.  ಸರಕಾರಿ ನಿವಾಸದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳ ಹಾರ್ಡ್ ಡ್ರೈವ್ ಕೂಡ ಕಾಣೆಯಾಗಿದೆ” ಎಂದು ಇಕ್ಬಾಲ್ ಹೇಳಿದ್ದಾರೆ.   ಈ ಸರಕಾರಿ ಬಂಗಲೆಗೆ ನವರಾತ್ರಿ ವೇಳೆಯಲ್ಲಿ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ತೆರಳುವ ಬಗ್ಗೆ ನಿರ್ಧರವಾಗಿತ್ತು, ಆದರೆ ಅದಕ್ಕೂ ಮೊದಲೇ ವಿವಾದ ಹುಟ್ಟಿಕೊಂಡಿದೆ.

ತನಿಖೆಗೆ ಆಗ್ರಹಿಸಿದ ಕೇಂದ್ರ ಸಚಿವ  ಗಿರಿರಾಜ್ ಸಿಂಗ್
ಸಾರ್ವಜನಿಕ ಸ್ಥಾನದಲ್ಲಿರುವವರು ಇಂತಹ ಅವಹೇಳನಕಾರಿ ಚಟುವಟಿಕೆಗಳ ಮಾಡಬಾರದು. ತೇಜಸ್ವಿ ಯಾದವ್ ಬಂಗಲೆ ನವೀಕರಣಕ್ಕೆ ಎಷ್ಟು ಹಣ ಖರ್ಚಾಗಿದೆ ಎಂದು ವಿಚಾರಿಸಲು ತನಿಖಾ ಸಮಿತಿ ರಚಿಸಿ ಪ್ರಕರಣ ದಾಖಲಿಸಬೇಕು” ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಆಗ್ರಹಿಸಿದ್ದಾರೆ.

ಬಿಜೆಪಿಗೆ ಮಾಧ್ಯಮಗಳ ಹೆಡ್‌ಲೈನ್‌ಗಳ ನಿರ್ವಹಿಸುವುದು ಗೊತ್ತಿದೆ: ಆರ್‌ಜೆಡಿ
ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸರುವ ಆರ್‌ಜೆಡಿ ಸಂಸದ ಸುಧಾಕರ್‌ ಸಿಂಗ್‌  ಸರಕಾರಿ ಬಂಗಲೆಗೆ ನೀಡಿರುವ ವಸ್ತುಗಳ ಪಟ್ಟಿಯನ್ನು ತಕ್ಷಣವೇ ಬಿಡುಗಡೆಗೊಳಿಸಿದರೆ ಎಲ್ಲವೂ ಸ್ಪಷ್ಟವಾಗುತ್ತದೆ. ಬಿಜೆಪಿ ಸುಳ್ಳು ಆರೋಪಗಳ ಮಾಡುತ್ತಿದೆ ಮತ್ತು ಮಾಧ್ಯಮಗಳ ಹೆಡ್‌ಲೈನ್‌ಗಳ ನಿರ್ವಹಿಸುವುದಕ್ಕಾಗಿ ಬಿಜೆಪಿ ಇಂತಹ ಆರೋಪ ಮಾಡುತ್ತಿದೆ. ಲಂಚ ಪಡೆದಿದ್ದಕ್ಕಾಗಿ ಬಿಹಾರದ ಎನ್‌ಐಎಯ  ಡಿಎಸ್‌ಪಿಯೊಬ್ಬರನ್ನು ಸಿಬಿಐ ಬಂಧಿಸಿತ್ತು. ಆ ಡಿಎಸ್ಪಿ ಬಿಜೆಪಿಯ ಮಾಜಿ ಶಾಸಕರೊಬ್ಬರ ಅಳಿಯ. ಆದರೆ ಬಿಹಾರಿ ಮಾಧ್ಯಮಗಳಲ್ಲಿ ಇದು ಎಲ್ಲೂ ಪ್ರಕಟವಾಗಿಲ್ಲ. ಆ ಡಿಎಸ್ಪಿ ಬಿಹಾರದಲ್ಲಿ ನೂರಾರು ಜನರನ್ನು ಸುಲಿಗೆ ಮಾಡಿದ್ದಾನೆ. ಹಣ ಕೊಡಲು ನಿರಾಕರಿಸಿದರೆ ನಕ್ಸಲರ ಜೊತೆ ಸಂಬಂಧವಿದೆ ಎಂದು ಬಂಧಿಸುವ ಎಂದು ಬೆದರಿಕೆ ಹಾಕಿದ್ದಾನೆ…ದೇಶದಲ್ಲಿ ಸರ್ಕಾರ ಹೀಗೆ ನಡೆಸುತ್ತಿದೆ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

Tejasvi

Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

1-caa

Chennai air show ಅವಘಡ; ವಿಚಾರ ರಾಜಕೀಯ ಮಾಡಬೇಡಿ: ತಮಿಳುನಾಡು ಸರಕಾರ

manish sisodia

AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..

rape

Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.