ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಮೈನ್‌ ಪುರಿಯಲ್ಲಿರುವ ಫೈವ್‌ ಸ್ಟಾರ್‌ ಆಶ್ರಮ ಅರಮನೆಯಂತಿದೆ.

Team Udayavani, Jul 5, 2024, 1:10 PM IST

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಲಕ್ನೋ(ಉತ್ತರಪ್ರದೇಶ): ಇತ್ತೀಚೆಗೆ ಉತ್ತರಪ್ರದೇಶದ ಹಾಥ್ರಸ್‌ ನಲ್ಲಿ ಭೋಲೆ ಬಾಬಾನ ಸತ್ಸಂಗ ಕಾರ್ಯಕ್ರಮದ ವೇಳೆ ನಡೆದ ಕಾಲ್ತುಳಿತದ ದುರಂತದಲ್ಲಿ 121 ಮಂದಿ ಸಾವಿಗೀಡಾದ ಘಟನೆ ನಂತರ ಬಾಬಾ ತಲೆಮರೆಸಿಕೊಂಡಿದ್ದು, ಏತನ್ಮಧ್ಯೆ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಭೋಲೆ ಬಾಬಾನ ಐಶಾರಾಮಿ ಜೀವನದ ಅಂಶಗಳು ಒಂದೊಂದಾಗಿಯೇ ಬಹಿರಂಗಪಡಿಸುತ್ತಿದ್ದಾರೆ.

ಇದನ್ನೂ ಓದಿ:9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

ಭೋಲೆ ಬಾಬಾ ಅಲಿಯಾಸ್‌ ನಾರಾಯಣ್‌ ಹರಿ ಸಕಾರ್‌ ಕಳೆದ ಎರಡು ದಶಕಗಳಲ್ಲಿ ನೂರಾರು ಕೋಟಿ ರೂಪಾಯಿ ಆಸ್ತಿಯನ್ನು ಸಂಪಾದಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಹಾಥ್ರಸ್‌ ನಲ್ಲಿ ಕಾಲ್ತುಳಿತ ದುರಂತ ಸಂಭವಿಸಿದ ನಂತರ ಭೋಲೆ ಬಾಬಾ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಬಾಬಾನ ಮಂತ್ರಗಳು ತಮ್ಮ ಮನೆಯ ಜಗಳವನ್ನು ದೂರ ಮಾಡುತ್ತದೆ ಎಂಬ ನಂಬಿಕೆ ಆತನ ಭಕ್ತರದ್ದಾಗಿದೆ.

ಕಾನ್ಪುರದ ನಗರದಿಂದ 25 ಕಿಲೋ ಮೀಟರ್‌ ದೂರದಲ್ಲಿ ವಾರಾಣಸಿಯ ಕಾಶಿ ವಿಶ್ವನಾಥ್‌ ದೇವಾಲಯವನ್ನು ಹೋಲುವ ಬೃಹತ್‌ ಮೂರು ಗುಮ್ಮಟಗಳ ಆಶ್ರಮ ಇದ್ದು, ಭಾರೀ ಗಾತ್ರದ ಗೇಟ್‌ ಗಳನ್ನು ಅಳವಡಿಸಲಾಗಿದೆ.

ಅದೇ ರೀತಿ ಮೈನ್‌ ಪುರಿಯಲ್ಲಿರುವ ಫೈವ್‌ ಸ್ಟಾರ್‌ ಆಶ್ರಮ ಅರಮನೆಯಂತಿದೆ. ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಈ ಆಶ್ರಮ ನಿರ್ಮಾಣ ಮಾಡಿರುವುದಾಗಿ ಅಂದಾಜಿಸಲಾಗಿದೆ. ಬಾಬಾನ ಭಕ್ತರೊಬ್ಬರು ಈ ಭೂಮಿಯನ್ನು ದೇಣಿಗೆಯಾಗಿ ನೀಡಿದ್ದರಂತೆ. ಆಶ್ರಮದ ಸಮೀಪದಲ್ಲೇ ಈತನ ವಾಸ್ತವ್ಯದ ಬೃಹತ್‌ ಮನೆ ಇದ್ದು, ಇಲ್ಲಿ ಕಾರ್ಯನಿರ್ವಹಿಸಲು ಹಲವು ಮಂದಿ ಸೇವಕರಿದ್ದಾರೆ ಎಂದು ವರದಿ ತಿಳಿಸಿದೆ.

ಬಾಬಾನ ಟ್ರಸ್ಟ್‌ ಸದಸ್ಯರಿಗಾಗಿ ಸ್ವಂತ ಆಶ್ರಮವಿದ್ದು, ಕಾಸ್‌ ಗಂಜ್‌, ಆಗ್ರಾ, ಕಾನ್ಪುರ್‌ ಮತ್ತು ಗ್ವಾಲಿಯರ್‌ ನಲ್ಲಿ ನೂರಾರು ಬಿಘಾಸ್‌ ಆಸ್ತಿಯನ್ನು ಹೊಂದಿರುವುದಾಗಿ ಮೂಲಗಳು ಹೇಳಿವೆ.

1999ರಲ್ಲಿ ಕಾನ್ಸ್‌ ಟೇಬಲ್‌ ಹುದ್ದೆ ತ್ಯಜಿಸಿದ್ದ ಸತ್ಯಪಾಲ್‌ ಪ್ರವಚನ ಆರಂಭಿಸುವ ಮೂಲಕ ಭೋಲೆ ಬಾಬಾ ಎಂದು ಪ್ರಸಿದ್ಧಿಯಾಗಿದ್ದ. ಈತ ತನ್ನ ಭಕ್ತರ ಹೆಸರಿನಲ್ಲಿ ಐಶಾರಾಮಿ ಕಾರುಗಳನ್ನು ಖರೀದಿಸಿದ್ದಾನೆ.

ಆಶ್ರಮದ ಹೊರಗೆ ಭೋಲೆ ಬಾಬಾ ಮತ್ತು ಪತ್ನಿ ದೇವಿ ಮಾ ಜತೆಗಿದ್ದ ಬೃಹತ್‌ ಫೋಟೋ ಇದ್ದು, ಹೂವುಗಳಿಂದ ಫೋಟೊವನ್ನು ಅಲಂಕರಿಸಿದ್ದು, ಗೇಟ್‌ ನ ಹೊರಭಾಗದಲ್ಲಿ ಜನರನ್ನು ಸೆಳೆಯಲು ಧಾರ್ಮಿಕ ಉಕ್ತಿಗಳನ್ನು ಬರೆಯಿಸಲಾಗಿದೆ ಎಂದು ವರದಿ ತಿಳಿಸಿದೆ.

ಆಶ್ರಮದ ಒಳಗೆ ಬೃಹತ್‌ ಉದ್ಯಾನವನ, ತರಕಾರಿ, ಹೂಗಳನ್ನು ಬೆಳೆಸಿದ್ದು, ದನಗಳ ಶೆಡ್‌ ಕೂಡಾ ಇದೆ. ಆಶ್ರಮ ಐಶಾರಾಮಿ ಪಂಚತಾರಾ ಹೋಟೆಲ್‌ ನಂತಿದ್ದು, ಎಲ್ಲಾ ಕೋಣೆಗಳಲ್ಲೂ ಹವಾನಿಯಂತ್ರಿತ, ದೊಡ್ಡ, ದೊಡ್ಡ ಕೂಲರ್‌ ಗಳನ್ನು ಅಳವಡಿಸಲಾಗಿದೆ. ಆಶ್ರಮದ ಮಧ್ಯಭಾಗದಲ್ಲಿ ಐಶಾರಾಮಿ ಸತ್ಸಂಗ ಭವನ ಇದ್ದು, ಇಲ್ಲಿ ಬೃಹತ್‌ ಕೂಲರ್‌, ಸ್ಪೀಕರ್‌ ಗಳನ್ನು ಅಳವಡಿಸಲಾಗಿದೆ ಎಂದು ವರದಿ ಹೇಳಿದೆ.

ಭಕ್ತರಿಗೆ ಅವತಾರ ಪುರುಷ…ಸ್ಥಳೀಯರಿಗೆ ವಂಚಕ!

ಭೋಲೆ ಬಾಬಾ ಲಕ್ಷಾಂತರ ಅನುಯಾಯಿಗಳನ್ನು ಹೊಂದಿದ್ದು, ಭಕ್ತರ ಪಾಲಿಗೆ ಬಾಬಾ ದೇವರ ಸ್ವರೂಪ. ಆದರೆ ಕಸುಯಿ ಗ್ರಾಮಸ್ಥರು ಹೇಳುವ ಪ್ರಕಾರ, ಭೋಲೆ ಬಾಬಾ ಅವತಾರ ಪುರುಷ ಅಲ್ಲ, ಆತ ವಂಚಕ ಎಂದು ಆರೋಪಿಸುತ್ತಾರೆ. ಆತ ಜನರನ್ನು ಮೂರ್ಖರನ್ನಾಗಿ ಮಾಡಿ ಆಶ್ರಮ ಕಟ್ಟಿಕೊಂಡಿದ್ದಾನೆ. ಒಂದು ವೇಳೆ ಬಾಬಾ ಅವತಾರ ಪುರುಷನೇ ಆಗಿದ್ದರೆ ಹಾಥ್ರಸ್‌ ನಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿರುವ ಅಮಾಯಕ ಜನರನ್ನು ಮತ್ತೆ ಬದುಕಿಸಲಿ ಎಂದು ಗ್ರಾಮಸ್ಥರೊಬ್ಬರು ಸವಾಲು ಹಾಕಿರುವುದಾಗಿ ವರದಿ ತಿಳಿಸಿದೆ.

ಸತ್ಸಂಗ ಪ್ರಕರಣದಲ್ಲಿ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ. ಆದರೆ ಎಫ್‌ ಐಆರ್‌ ನಲ್ಲಿ ಭೋಲೆ ಬಾಬಾನ ಹೆಸರು ನಮೂದಿಸಿಲ್ಲ. ಏತನ್ಮಧ್ಯೆ ಭೋಲೆ ಬಾಬಾನನ್ನು ವಶಕ್ಕೆ ಪಡೆಯುವುದಿಲ್ಲ ಎಂಬುದನ್ನು ತಳ್ಳಿಹಾಕಿಲ್ಲ. ಈ ಬಗ್ಗೆ ಈಗಾಗಲೇ ಏನು ಹೇಳಲು ಸಾಧ್ಯವಿಲ್ಲ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Darshan-case

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ

ASF

ASF; ಕೇರಳದಲ್ಲಿ ಹಂದಿ ಜ್ವರ ಉಲ್ಬಣ: 310 ಹಂದಿಗಳ ಹತ್ಯೆಗೈದ ಸರ್ಕಾರ!

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

C-V-Anand

Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್‌ ವಿರುದ್ಧ ಶಿಸ್ತು ಕ್ರಮ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.