Gurantee Scheme: ಗೃಹಜ್ಯೋತಿ: ಸರಾಸರಿ ಬಳಕೆ ಪರಿಷ್ಕರಣೆ ಸದ್ಯಕ್ಕಿಲ್ಲ?

ಪ್ರತಿ ವರ್ಷ ಪರಿಷ್ಕರಿಸುವುದಾಗಿ ಹೇಳಿದ್ದ ರಾಜ್ಯ ಸರಕಾರ, ಆರ್ಥಿಕ ಹೊರೆ ಹಿನ್ನೆಲೆಯಲ್ಲಿ ಹಿಂದೇಟು

Team Udayavani, Aug 8, 2024, 7:15 AM IST

Grhajyothi

ಬೆಂಗಳೂರು: ರಾಜ್ಯದ ಪ್ರತಿ ಗೃಹ ಬಳಕೆದಾರರಿಗೆ ಮಾಸಿಕ ತಲಾ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಕಲ್ಪಿಸುವ ಮಹತ್ವಾಕಾಂಕ್ಷಿ “ಗೃಹಜ್ಯೋತಿ’ ಗ್ಯಾರಂಟಿ ಯೋಜನೆಗೆ 1 ವರ್ಷ ತುಂಬಿದೆ. ಆರಂಭದಲ್ಲಿ ಸರಕಾರ ಹೇಳಿದಂತೆ ಬಳಕೆಯ ಸರಾಸರಿ ಪರಿಷ್ಕರಣೆ ಆಗಬೇಕಿತ್ತು. ಆದರೆ, ಈಗ ಈ ನಿಟ್ಟಿನಲ್ಲಿ ಸರಕಾರ ಮೀನಮೇಷ ಎಣಿಸುತ್ತಿದೆ.

ಗೃಹಜ್ಯೋತಿ ಅಡಿ ರಾಜ್ಯದ ಸರಾಸರಿ ಗೃಹಬಳಕೆ ಪ್ರಮಾಣ 56 ಯೂನಿಟ್‌ ಇದೆ. ಈ ನಿಗದಿತ ಸರಾಸರಿ ಮೇಲೆ 10 ಯೂನಿಟ್‌ವರೆಗೆ ಹೆಚ್ಚುವರಿಯಾಗಿ ಬಳಸಲು ಅವಕಾಶ ಕಲ್ಪಿಸಲಾಗಿದೆ. ಈ ಪ್ರಮಾಣವನ್ನು 1 ವರ್ಷ ತುಂಬಿದ ಅನಂತರ ಪರಿಷ್ಕರಿಸಲಾಗುವುದು ಎಂದು ಯೋಜನೆಗೆ ಚಾಲನೆ ನೀಡುವ ಸಂದರ್ಭ ಇಂಧನ ಸಚಿವ ಕೆ.ಜೆ. ಜಾರ್ಜ್‌ ಪ್ರಕಟಿಸಿದ್ದರು. ಅದರಂತೆ ಜುಲೈ ಅಂತ್ಯಕ್ಕೇ ವರ್ಷ ಪೂರ್ಣಗೊಂಡಿದ್ದರೂ, ಈ ಬಗ್ಗೆ ಸರಕಾರ ಚಕಾರ ಎತ್ತುತ್ತಿಲ್ಲ.

ಸಾಮಾನ್ಯವಾಗಿ ವಿದ್ಯುತ್‌ ಬಳಕೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಏರಿಕೆ ಕ್ರಮದಲ್ಲೇ ಸಾಗುತ್ತಿದ್ದು, ಕೆಇಆರ್‌ಸಿ ಮೂಲಗಳ ಪ್ರಕಾರವೇ ಬೇಡಿಕೆ ಸರಾಸರಿ ಶೇ. 10ರಷ್ಟು ಹೆಚ್ಚಳ ಆಗುತ್ತಿದೆ. ಈ ಮಧ್ಯೆ ಉಚಿತ ವ್ಯವಸ್ಥೆ ಪರಿಚಯಿಸಿದ ಬಳಿಕ ಪ್ರತಿ ಗ್ರಾಹಕರ ಮಾಸಿಕ ಬಳಕೆಯಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಡಿ-ಲಿಂಕ್‌ ವ್ಯವಸ್ಥೆ ಕಲ್ಪಿಸಿದ್ದರಿಂದ ಹಿಂದಿನ ಸರಾಸರಿ ಬಳಕೆ ಮುಂದುವರಿಸಲು ಅವಕಾಶ ದೊರಕಿದೆ. ಈ ಸಂದರ್ಭದಲ್ಲಿ ಬಳಕೆ ಪ್ರಮಾಣ ಪರಿಷ್ಕರಿಸಿದರೆ, ಸಹಜವಾಗಿ ಇನ್ನಷ್ಟು ಆರ್ಥಿಕ ಹೊರೆ ಆಗಲಿದೆ. ಹಾಗಾಗಿ, ಪರಿಷ್ಕರಿಸುವ ಸಾಹಸದಿಂದ ಸರಕಾರ ದೂರ ಉಳಿಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಲೆಕ್ಕಾಚಾರ ಹೀಗಿದೆ: 
ಯೋಜನೆ ಆರಂಭದಲ್ಲಿ ನೋಂದಣಿಯಾದವರ ಸಂಖ್ಯೆ 1.60 ಕೋಟಿ ಇತ್ತು. ಈಗ ಅದು 1.70 ಕೋಟಿ ತಲುಪಿದೆ. ಇನ್ನು ಕಳೆದ ಡಿಸೆಂಬರ್‌ ಮತ್ತು 2024ರ ಮೇನಲ್ಲಿಯ “ಶೂನ್ಯ’ ಬಿಲ್‌ ಪಡೆದವರ ಸಂಖ್ಯೆಯಲ್ಲಿ 10 ಲಕ್ಷ ಕಡಿಮೆಯಾಗಿದೆ. ಅಂದರೆ ಯೋಜನೆ ಫ‌ಲಾನುಭವಿಗಳು ನಿಗದಿತ ಪ್ರಮಾಣ ಮೀರಿ ಬಳಕೆ ಮಾಡುತ್ತಿರುವುದು ಸ್ಪಷ್ಟ. 2023ರ ಆಗಸ್ಟ್‌ನಿಂದ 2024ರ ಜೂನ್‌ವರೆಗೆ ಯೋಜನೆ ಅಡಿ ಸರಕಾರ ಬಿಡುಗಡೆ ಮಾಡಿದ ಸಬ್ಸಿಡಿ ಮೊತ್ತ 8,239 ಕೋಟಿ ರೂ. ಆಗಿದೆ. ಇನ್ನು ವಾರ್ಷಿಕ ಬೇಡಿಕೆ ವೃದ್ಧಿ ಶೇ. 10ರಷ್ಟಿದ್ದು, ಇದಕ್ಕೆ ಅನುಗುಣವಾಗಿಯೇ ಲೆಕ್ಕಹಾಕಿದರೂ ಈ ಪರಿಷ್ಕರಣೆಯಿಂದ ಸರಕಾರಕ್ಕೆ ಕನಿಷ್ಠ 100 ಕೋಟಿ ರೂಪಾಯಿಗಳಿಗೂ ಅಧಿಕ ಹೊರೆಬೀಳಲಿದೆ.

” ಗೃಹಜ್ಯೋತಿ ಅಡಿ ಫ‌ಲಾನುಭವಿಗಳ ಸರಾಸರಿ ಬಳಕೆ ಪ್ರಮಾಣವನ್ನು ಪರಿಷ್ಕರಿಸುವ ಪ್ರಸ್ತಾವನೆ ಸದ್ಯಕ್ಕೆ ನಮ್ಮ ಮುಂದಿಲ್ಲ. ಇದರ ಬಗ್ಗೆ ಚರ್ಚೆಯೂ ನಡೆದಿಲ್ಲ. ಇದೆಲ್ಲವೂ ಸರಕಾರದ ಮಟ್ಟದಲ್ಲಿ ತೀರ್ಮಾನ ಆಗುವಂಥದ್ದು. ಒಂದು ವೇಳೆ ಪರಿಷ್ಕರಣೆ ಅಗತ್ಯವೆನಿಸಿ, ಸರಕಾರ ನಿರ್ಧಾರ ಕೈಗೊಂಡರೆ ಆಗ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.”  -ಗೌರವ್‌ ಗುಪ್ತ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ

– ವಿಜಯ ಕುಮಾರ ಚಂದರಗಿ

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.