Guidlines: ಗ್ರಾಮಸಭೆಗೆ ಮಾರ್ಗಸೂಚಿ ಉತ್ತರದಾಯಿತ್ವ ಅಗತ್ಯ


Team Udayavani, Oct 9, 2024, 6:00 AM IST

vidhana-Soudha

ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ ವರ್ಷಕ್ಕೆ 2 ಬಾರಿ ಕಡ್ಡಾಯವಾಗಿ ಗ್ರಾಮಸಭೆ ನಡೆಸುವುದು, ಗ್ರಾಮಸಭೆ ಸಹಿತ ಗ್ರಾಮೀಣ ಪ್ರದೇಶಗಳಲ್ಲಿ ಪಂಚಾಯತ್‌ ವತಿ­ಯಿಂದ ನಡೆಸಲಾಗುವ ವಿವಿಧ ಸಭೆಗಳಿಗಾಗಿ ವರ್ಷದ ನಿರ್ದಿಷ್ಟ ದಿನಗಳ ನಿಗದಿ, ಈ ಸಭೆಗಳಲ್ಲಿ ಚರ್ಚಿಸಿ, ಕೈಗೊಳ್ಳಬಹುದಾದ ನಿರ್ಣಯಗಳ ಕುರಿತಂತೆ ನಿರ್ದೇಶನ, ಗ್ರಾಮಸಭೆಗಳಲ್ಲಿ ಹಾಜರಿರಬೇಕಾದ ಇಲಾಖಾಧಿಕಾರಿಗಳು ಮತ್ತು ನೌಕರರ ವಿವರ ಸಹಿತ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ನಡೆಯುವ ವಿವಿಧ ಸಭೆಗಳ ಕುರಿತಂತೆ ಸ್ಪಷ್ಟ ಕಾರ್ಯಾಚರಣೆ ಮಾರ್ಗಸೂಚಿಯನ್ನು ರಾಜ್ಯದ ಗ್ರಾಮೀ­ಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಬಿಡುಗಡೆಗೊಳಿಸಿದೆ.ಈ ಮೂಲಕ ಗ್ರಾಮಸಭೆ­ಗೊಂದು ನಿರ್ದಿಷ್ಟ ಚೌಕಟ್ಟು ರೂಪಿಸಿರುವ ಇಲಾಖೆ, ಈ ಗ್ರಾಮಸಭೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಆಯೋಜಿಸಲು ಮುಂದಾಗಿದೆ.

ಪಂಚಾಯತ್‌ ರಾಜ್‌ ಇಲಾಖೆ ಹೊರಡಿಸಿರುವ ಹೊಸ ಮಾರ್ಗಸೂಚಿಯ ಪ್ರಕಾರ ಗ್ರಾಮಸಭೆ ಸೇರುವ 1 ತಿಂಗಳು ಮುನ್ನ ಗ್ರಾಮ ಪಂಚಾಯತ್‌ ಅಧ್ಯಕ್ಷರು ಜನವಸತಿ ಸಭೆ ಮತ್ತು ವಾರ್ಡ್‌ ಸಭೆ ನಡೆಸಿ ಸ್ಥಳೀಯರ ಅಹವಾಲುಗಳನ್ನು ಆಲಿಸಬೇಕು ಎಂದು ತಿಳಿಸಲಾಗಿದೆ. ಇನ್ನು ವರ್ಷಕ್ಕೊಮ್ಮೆ ವಿಶೇಷ ಮಹಿಳಾ ಗ್ರಾಮ ಸಭೆ ಮತ್ತು ಒಂದು ಮಕ್ಕಳ ಗ್ರಾಮಸಭೆ ನಡೆಸಬೇಕೆಂದು ನಿರ್ದೇಶನ ನೀಡಲಾಗಿದೆ. ಗ್ರಾಮ ಪಂಚಾಯತ್‌ ಮಟ್ಟದಲ್ಲಿ ನಡೆಯುವ ಈ ಎಲ್ಲ ಸಭೆಗಳಲ್ಲಿ ಪಾಲ್ಗೊಳ್ಳಬೇಕಾದ ಇಲಾಖಾಧಿಕಾರಿಗಳು ಮತ್ತು ನೌಕರರ ವಿವರಗಳನ್ನೂ ಈ ಕಾರ್ಯಾಚರಣೆ ಮಾರ್ಗಸೂಚಿ ಹೊಂದಿದೆ.

ಇದೇ ವೇಳೆ ಈ ಗ್ರಾಮಸಭೆಗಳಲ್ಲಿ ಪ್ರಸ್ತಾವಿಸಬಹುದಾದ ಮತ್ತು ಚರ್ಚಿಸಬಹುದಾದ ವಿಷಯಗಳು ಮತ್ತು ಕೈಗೊಳ್ಳಬಹುದಾದ ನಿರ್ಣ­ಯಗಳ ಕುರಿತಂತೆಯೂ ಮಾರ್ಗದರ್ಶನ ನೀಡಲಾಗಿದೆ. ಒಟ್ಟಿನಲ್ಲಿ ಪಂಚಾಯತ್‌ ರಾಜ್‌ ಇಲಾಖೆ ಗ್ರಾಮಸಭೆಗಳಿಗೆ ಒಂದು ಆಯಾಮವನ್ನು ನೀಡಿ, ಈ ಸಭೆಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೈಗೊಳ್ಳಲಾಗುವ ಅಭಿವೃದ್ಧಿ ಯೋಜನೆಗಳು, ಅವುಗಳ ಅನುಷ್ಠಾನ, ಸರಕಾರದ ನೀಡಲಾಗುತ್ತಿರುವ ವಿವಿಧ ಸವಲತ್ತುಗಳು ನೈಜ ಫ‌ಲಾನುಭವಿಗಳಿಗೆ ತಲುಪುವುದನ್ನು ಖಾತರಿಪಡಿಸಲು ಹಾಗೂ ಜನತೆಯ ಬೇಡಿಕೆ, ಕುಂದುಕೊರತೆ ಮತ್ತಿತರ ವಿಷಯಗಳ ಬಗೆಗೆ ಈ ಹೆಚ್ಚಿನ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳಲು ಈ ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ. ತನ್ಮೂಲಕ ಗ್ರಾಮ ಪಂಚಾಯತ್‌ ಆಡಳಿತದಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಲು ಸರಕಾರ ಉದ್ದೇಶಿಸಿದೆ.

ಹಾಲಿ ಜಾರಿಯಲ್ಲಿರುವ ವ್ಯವಸ್ಥೆಯಲ್ಲಿ ಸದ್ಯ ನಡೆಸಲಾಗುತ್ತಿರುವ ಬಹುತೇಕ ಗ್ರಾಮಸಭೆಗಳು ಕಾಟಾಚಾರದಂತಾಗಿದ್ದು, ಅಷ್ಟೊಂದು ಪರಿಣಾಮಕಾರಿಯಾಗಿಲ್ಲ ಎಂಬುದನ್ನು ಇಲಾಖೆ ಕೊನೆಗೂ ಅರ್ಥೈಸಿಕೊಂಡಂತೆ ತೋರುತ್ತಿದೆ. ಈ ಕಾರಣದಿಂದಾಗಿಯೇ ಗ್ರಾಮಸಭೆಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ­ಯನ್ನು ರೂಪಿಸಿ ಬಿಡುಗಡೆ ಮಾಡಿದ್ದು ಇದು ಸದುದ್ದೇಶದಿಂದ ಕೂಡಿದ್ದಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಸದ್ಯ ನಡೆಯುತ್ತಿರುವ ಗ್ರಾಮಸಭೆಗಳ ಮಾದರಿಯಲ್ಲಿಯೇ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ನಡೆಯುವ ಎಲ್ಲ ಸಭೆಗಳೂ ಸ್ಥಳೀಯ ರಾಜಕಾರಣದ ಜಂಗೀಕುಸ್ತಿಗೆ ಕಾರಣವಾಗುತ್ತಿರುವುದನ್ನು ಕೂಡ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು.

ವೈಯಕ್ತಿಕ ಪ್ರತಿಷ್ಠೆ, ರಾಜಕೀಯ ದ್ವೇಷದಂತಹ ಕ್ಷುಲ್ಲಕ ವಿಷಯಗಳು ಗ್ರಾಮಸಭೆಯ ಮಹತ್ವವನ್ನೇ ಹಾಳುಗೆಡವದಂತೆ ಎಚ್ಚರ ವಹಿಸಬೇಕು. ಇನ್ನು ಗ್ರಾಮಸಭೆಗಳು ನಡೆಯುವ ಸಂದರ್ಭದಲ್ಲಿ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇವೆಲ್ಲವುಗಳಿಗಿಂತ ಮುಖ್ಯವಾಗಿ ಗ್ರಾಮಸಭೆಯಲ್ಲಿ ಕೈಗೊಳ್ಳಲಾಗುವ ನಿರ್ಣಯಗಳ ಅನುಷ್ಠಾನ ಮತ್ತು ಚರ್ಚಿಸಲ್ಪಟ್ಟ ವಿಷಯಗಳ ಬಗೆಗೆ ನಿರ್ದಿಷ್ಟ ಕಾಲಮಿತಿಯಲ್ಲಿ ಸೂಕ್ತ ಪರಿಹಾರ ಕ್ರಮಕೈಗೊಳ್ಳುವುದರತ್ತಲೂ ಇಲಾಖೆ ಗಂಭೀರ ಲಕ್ಷ್ಯ ಹರಿಸಬೇಕು. ಗ್ರಾಮಸಭೆಯ ನಿರ್ಣಯಗಳ ಅನುಷ್ಠಾನ ಮತ್ತು ಜನರ ಸಮಸ್ಯೆ, ಬೇಡಿಕೆಗಳಿಗೆ ಸ್ಪಂದಿಸುವ ವಿಚಾರದಲ್ಲಿ ಗ್ರಾಮ ಪಂಚಾಯತ್‌ ಆಡಳಿತವನ್ನು ಉತ್ತರದಾಯಿಯನ್ನಾಗಿ ಮಾಡಿದಾಗಲಷ್ಟೇ ಗ್ರಾಮಸಭೆಯ ನೈಜ ಉದ್ದೇಶ ಈಡೇರಲು ಸಾಧ್ಯ.

ಟಾಪ್ ನ್ಯೂಸ್

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Janardhana-Reddy-Car

Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್‌ ರೋವರ್‌ ಕಾರು ವಶ

Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ

Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ

Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ

Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ

BJP-Camp

Internal Reservation: ಬಸವರಾಜ್‌ ಬೊಮ್ಮಾಯಿ ಅವಧಿಯ ಒಳಮೀಸಲಿಗೆ ಬಿಜೆಪಿ ಒತ್ತಡ

Train: ಉಡುಪಿ-ಕುಂದಾಪುರದಿಂದ ತಿರುಪತಿಗೆ ನೇರ ರೈಲು

Train: ಉಡುಪಿ-ಕುಂದಾಪುರದಿಂದ ತಿರುಪತಿಗೆ ನೇರ ರೈಲು

BJP-celebration

Haryana Election Result: ಹರ್ಯಾಣ ಹ್ಯಾಟ್ರಿಕ್‌ ಗೆಲುವು: ರಾಜ್ಯ ಬಿಜೆಪಿ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirupathi-Laddu

Precaution: ದೇವಾಲಯಗಳ ನಿರ್ವಹಣೆ ಏಕರೂಪದ ನೀತಿ ಅನಿವಾರ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

TREKKING: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

supreme-Court

Encroachment: ಅಕ್ರಮ ನಿರ್ಮಾಣಗಳ ತೆರವು: ಸುಪ್ರೀಂಕೋರ್ಟ್‌ ನಿಲುವು ಸ್ವಾಗತಾರ್ಹ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Dasara: ಅತಿಥಿ ಶಿಕ್ಷಕರಿಗಿಲ್ಲ ಸಂಭ್ರಮ; “ನಿಧಿ’ ಬಿಡುಗಡೆಯಾಗಿದ್ದರೂ ಸಿಗದ ಸಂಬಳ

Janardhana-Reddy-Car

Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್‌ ರೋವರ್‌ ಕಾರು ವಶ

Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ

Rain Effects: ಮತ್ತಾವು ಮರದ ಸೇತುವೆ: 12 ತಾಸಿನೊಳಗೆ ಸ್ಥಳೀಯ ನಿವಾಸಿಗಳಿಂದ ಮರು ಸ್ಥಾಪನೆ

Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ

Kukke Shri Subrahmanya Temple: ಅನ್ನ ಪ್ರಸಾದಕ್ಕೆ ವೈವಿಧ್ಯಮಯ ಪಾಯಸ

BJP-Camp

Internal Reservation: ಬಸವರಾಜ್‌ ಬೊಮ್ಮಾಯಿ ಅವಧಿಯ ಒಳಮೀಸಲಿಗೆ ಬಿಜೆಪಿ ಒತ್ತಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.