Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

ಮೋದಿ, ಶಾ ತವರೂರಲ್ಲಿಮೋದಿ ಫ್ಯಾಕ್ಟರ್‌ ಬಿಟ್ಟರೆ ಬೇರೆ ಲೆಕ್ಕಕ್ಕಿಲ್ಲ...

Team Udayavani, Apr 19, 2024, 10:18 AM IST

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

ಗುಜರಾತ್‌… ಇದು ಸತತ 30 ವರ್ಷಗಳಿಂದ ಕೇಸರಿ ಪಾಳಯದ ಅಭೇದ್ಯ ಕೋಟೆಯೆಂದೇ ಪರಿಗಣಿಸಲ್ಪಟ್ಟ ರಾಜ್ಯ. ಬಿಜೆಪಿಯ
ಅತ್ಯುನ್ನತ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ತವರು ನೆಲ. 2024 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಇಲ್ಲಿನ ಎಲ್ಲ 26 ಕ್ಷೇತ್ರಗಳನ್ನೂ ಬಿಜೆಪಿ ಕ್ಲೀನ್‌ ಸ್ವೀಪ್‌ ಮಾಡಿವೆ. ಎರಡೂ ಚುನಾವಣೆಯಲ್ಲಿ ಶೇ.60ಕ್ಕೂ ಹೆಚ್ಚು ಮತಗಳನ್ನು ಗಳಿಸುವ ಮೂಲಕ “ಗುಜರಾತ್‌ ಬಿಜೆಪಿಯ ಭದ್ರಕೋಟೆ’ ಎಂಬುದನ್ನು
ಸಾಬೀತುಪಡಿಸಿದೆ. ಈ ಬಾರಿಯೂ ಇದೇ ಫ‌ಲಿತಾಂಶ ಮರುಕಳಿಸಲಿದೆ ಎನ್ನುವ ನಿರೀಕ್ಷೆಯಲ್ಲಿದೆ ಬಿಜೆಪಿ.

ಆದರೆ ಈ ಬಾರಿ ಬಿಜೆಪಿಯೊಳಗೆ ಕಾಣಿಸಿಕೊಂಡಿರುವ ಸಣ್ಣಪುಟ್ಟ ಆಂತರಿಕ ಕಲಹಗಳು ಪಕ್ಷಕ್ಕೆ ಡ್ಯಾಮೇಜ್‌ ಉಂಟುಮಾಡಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ರಾಜ್‌ಕೋಟ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪರುಷೋತ್ತಮ ರುಪಾಲಾ ಅವರು ಕ್ಷತ್ರಿಯ(ರಜಪೂತ)ರ ಬಗ್ಗೆ ನೀಡಿದ್ದಾರೆನ್ನಲಾದ ವಿವಾದಿತ ಹೇಳಿಕೆಯು ಆ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

ಅವರನ್ನು ಅಭ್ಯರ್ಥಿ ಸ್ಥಾನದಿಂದ ಕಿತ್ತುಹಾಕಬೇಕೆಂದು ಆಗ್ರಹಿಸಿ ಕೆಲವು ರಜಪೂತ ಮಹಿಳೆಯರು ಇತ್ತೀಚೆಗೆ ಜೋಹಾರ್‌ (ಬೆಂಕಿಹಚ್ಚಿಕೊಂಡು ಆತ್ಮಾಹುತಿ ಮಾಡಿಕೊಳ್ಳುವುದು) ಮಾಡಿಕೊಳ್ಳುವ ಬೆದರಿಕೆಯನ್ನೂ ಹಾಕಿದ್ದರು. ಆದರೆ ಬಿಜೆಪಿ ನಾಯಕತ್ವ ಇದಕ್ಕೆ ಕ್ಯಾರೇ ಎಂದಿಲ್ಲ. ಪರಿಣಾಮ ಕ್ಷತ್ರಿಯ ಸಮುದಾಯದ ನಾಯಕ ರಾಜ್‌ ಶೇಖಾವತ್‌ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ರಜಪೂತರು ಸೌರಾಷ್ಟ್ರ ಪ್ರದೇಶದ ಪ್ರಭಾವಿ ಸಮುದಾಯವಾಗಿದ್ದು, ಹಿಂದಿನಿಂದಲೂ ಇದು ಬಿಜೆಪಿಯ
ಮತಬ್ಯಾಂಕ್‌ ಆಗಿದೆ. ರೂಪಾಲ ಹೇಳಿಕೆಯು ಬಿಜೆಪಿಯ ಮತ ಹಂಚಿಕೆಯ ಮೇಲೆ ಸಣ್ಣಮಟ್ಟಿಗೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯೂ ಇದೆ. ಹಾಗಂತ ರುಪಾಲರನ್ನು ಬದಲಿಸಲು ಹೊರಟರೆ ಬಿಜೆಪಿಯ ಭದ್ರ ವೋಟ್‌ಬ್ಯಾಂಕ್‌ ಆಗಿರುವ ಪಾಟೀದಾರ ಸಮುದಾಯ ತಿರುಗಿಬೀಳುವ ಆತಂಕವೂ ಇದೆ. ಹೀಗಾಗಿ ಈ ವಿವಾದವು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿರುವುದಂತೂ ನಿಜ.

ಇದಲ್ಲದೇ, ಪೋರಬಂದರ್‌ನ ವಸೋಯಾ ಕ್ಷೇತ್ರದಲ್ಲಿ ಕೇಂದ್ರ ಸಚಿವ ಮನ್‌ಸುಖ್‌ ಮಾಂಡವೀಯ ಅವರಿಗೆ ಟಿಕೆಟ್‌ ನೀಡಿರು
ವುದು ಸ್ಥಳೀಯ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸಿದೆ. ಇನ್ನು, ಕಾರ್ಯಕರ್ತರು ಹಾಗೂ ಸ್ಥಳೀಯ ನಾಯಕರ ತೀವ್ರ ಪ್ರತಿರೋಧ, ಅಭ್ಯರ್ಥಿಗಳ ವಿರುದ್ಧದ ಪೋಸ್ಟರ್‌ಗಳ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ವಡೋದರಾದ 2 ಬಾರಿ ಸಂಸದೆ ರಂಜನ್‌ ಬೆನ್‌ ಭಟ್‌ ಮತ್ತು ಸಬರಕಾಂತ ಕ್ಷೇತ್ರದ ಅಭ್ಯರ್ಥಿ ಭಿಖಾಜಿ ಠಾಕೂರ್‌ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.

ಪಕ್ಷದ ಕಾರ್ಯಕರ್ತರನ್ನು ನಿರ್ಲಕ್ಷಿಸಿ, ವಲಸಿಗರಿಗೆ ಆದ್ಯತೆ ನೀಡಲಾಗುತ್ತಿದೆ ಎಂಬ ಆರೋಪವೂ ಬಿಜೆಪಿಯೊಳಗೆ ಅಸಮಾಧಾನ ಹೊಗೆ ಮೂಡಿಸಿದೆ. ಇನ್ನೊಂದೆಡೆ ಈ ಬಾರಿ ಕಾಂಗ್ರೆಸ್‌ ಮತ್ತು ಆಮ್‌ ಆದ್ಮಿ ಪಕ್ಷಗಳು “ಇಂಡಿಯಾ’ ಒಕ್ಕೂಟದ ಹೆಸರಿನಲ್ಲಿ ಕೇಸರಿ ಕೋಟೆಗೆ ಲಗ್ಗೆ ಹಾಕಲು ಸಜ್ಜಾಗಿ ನಿಂತಿವೆ. ಬಿಜೆಪಿಗೆ ಟಫ್ ಫೈಟ್‌ ಕೊಟ್ಟು, ಬಿಜೆಪಿ ವಿರೋಧಿ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳುವ ಗುರಿ ಹಾಕಿಕೊಂಡು ಅಖಾಡಕ್ಕಿಳಿದಿವೆ. ಕಾಂಗ್ರೆಸ್‌ 24 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಆಪ್‌ಗೆ ಭರೂಚ್‌ ಮತ್ತು ಭಾವನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ.

ಈಗಾಗಲೇ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷವು ಗುಜರಾತ್‌ನ ಬುಡಕಟ್ಟು ನೆಲೆಯೊಳಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದೆ. ಅದರ ಫಲವೆಂಬಂತೆ, 2022ರ ವಿಧಾನಸಭೆ ಚುನಾವಣೆಯಲ್ಲಿ ದೇಡಿಯಾಪಾದ(ಎಸ್ಟಿ) ಕ್ಷೇತ್ರವು ಆಪ್‌ನ ತೆಕ್ಕೆಗೆ ಬಂದಿತ್ತು. ಇನ್ನು, ಒಂದು ಕಾಲದಲ್ಲಿ ಗುಜರಾತ್‌ನ ಬುಡಕಟ್ಟು ಪ್ರದೇಶದಲ್ಲಿ ಪ್ರಾಬಲ್ಯ ಹೊಂದಿದ್ದ ಕಾಂಗ್ರೆಸ್‌ ಈಗ ಮತ್ತೆ ಅದೇ ಪ್ರದೇಶದಲ್ಲಿ ಕಳೆದುಕೊಂಡ ನೆಲೆಯನ್ನು ಹುಡುಕತೊಡಗಿದೆ.

ರಾಹುಲ್‌ ಗಾಂಧಿಯವರ ಭಾರತ್‌ ಜೋಡೋ ನ್ಯಾಯ ಯಾತ್ರೆ ಕೂಡ ಇದೇ ಪ್ರದೇಶಗಳಿಂದ ಹಾದು ಬಂದಿರುವುದು ಅದಕ್ಕೆ ಸಾಕ್ಷಿ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಇಲ್ಲಿನ ಬಿಜೆಪಿ ವಿರೋಧಿ ಮತಗಳೆಲ್ಲ ಆಪ್‌, ಕಾಂಗ್ರೆಸ್‌ ಮತ್ತು ಭಾರತೀಯ ಟ್ರೆ„ಬಲ್‌ ಪಾರ್ಟಿ ನಡುವೆ ಹರಿದುಹಂಚಿ ಹೋಗಿದ್ದವು. ಆದರೆ ಈ ಬಾರಿ ಆಪ್‌ ಮತ್ತು ಕಾಂಗ್ರೆಸ್‌ ಇಂಡಿಯಾ ಒಕ್ಕೂಟದ ಭಾಗವಾಗಿ ಸ್ಪರ್ಧಿಸುತ್ತಿರುವ ಕಾರಣ ಮತ ವಿಭಜನೆ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

ಆದರೆ ನಲ್‌ ಸೆ ಜಲ್‌, ಗೃಹ ನಿರ್ಮಾಣ ಯೋಜ ನೆಗಳು, ಆರೆಸ್ಸೆಸ್‌ ನಡೆಸಿರುವ ತಳಮಟ್ಟದ ಪಕ್ಷ ಸಂಘಟನ ಕಾರ್ಯಗಳೆಲ್ಲ ಬುಡಕಟ್ಟು ಬಾಹುಳ್ಯದ ಪ್ರದೇಶ ಗಳಲ್ಲಿ ಬಿಜೆಪಿ ಪರ ವಾತಾವರಣ ಸೃಷ್ಟಿಸಿದ್ದು, ಅದನ್ನು ಅಷ್ಟು ಸುಲಭವಾಗಿ ತೆಗೆದುಹಾಕಲು ಇಂಡಿಯಾ ಒಕ್ಕೂಟಕ್ಕೆ ಸಾಧ್ಯವಿಲ್ಲ. ಅಲ್ಲದೇ, ಕಾಂಗ್ರೆಸ್‌ ನಲ್ಲಿ ಪ್ರಭಾವಿ ಬುಡಕಟ್ಟು ನಾಯಕ ಎನಿಸಿಕೊಂಡವರು ಯಾರೂ ಇಲ್ಲ. ಪ್ರಭಾವಿಗಳೆನಿಸಿಕೊಂಡ ಅನೇಕ ನಾಯಕರು ಈ ಹಿಂದೆಯೇ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹೀಗಾಗಿ, ಟ್ರೈಬಲ್‌ ಬೆಲ್ಟ್‌ ನಲ್ಲಿ ಖಾತೆ ತೆರೆಯುವ ಇಂಡಿಯಾ ಒಕ್ಕೂಟದ ಕನಸು ನನಸಾಗುವುದು ದೂರದ ಮಾತು ಎಂದು ಹೇಳಲಾಗುತ್ತಿದೆ.

ಯಾವ ಪಕ್ಷಗಳು ಮೈತ್ರಿ ಮಾಡಿಕೊಂಡರೂ ಬಿಜೆಪಿಯ ಭದ್ರ ಮತಬ್ಯಾಂಕ್‌ ಅನ್ನು ಘಾಸಿಗೊಳಿಸಲು ಸಾಧ್ಯವಿಲ್ಲ ಎಂಬ ವಿಶ್ವಾಸ
ಬಿಜೆಪಿಯದ್ದು. ಮತ್ತೊಂದೆಡೆ, 2022ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸೋಲಲು ಆಪ್‌ ಮತ್ತು ಕಾಂಗ್ರೆಸ್‌ನ ಮತಗಳು ವಿಭಜನೆ ಯಾಗಿದ್ದೇ ಕಾರಣ. ಹೀಗಾಗಿ, ಈ ಬಾರಿ ಮತಗಳು ಚದುರಿ ಹೋಗದೇ ಇದ್ದರೆ ಇಂಡಿಯಾ ಒಕ್ಕೂಟಕ್ಕೆ ಲಾಭವಾ ಗುವ ಸಾಧ್ಯತೆ ಯಿದೆ ಎನ್ನುವುದು ವಿಪಕ್ಷಗಳ ಲೆಕ್ಕಾಚಾರ. ಆದರೆ ಗುಜ ರಾತ್‌ನಲ್ಲಿ “ಮೋದಿ ಫ್ಯಾಕ್ಟರ್‌’ ಬಿಟ್ಟು ಬೇರೇನೂ ಲೆಕ್ಕಕ್ಕೇ ಬರದ ಕಾರಣ, ಬಿಜೆಪಿ ಪ್ರಾಬಲ್ಯವನ್ನು ತಗ್ಗಿಸುವುದು ಸುಲಭದ ಮಾತಲ್ಲ.

*ಹಲೀಮತ್‌ ಸಅದಿಯ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.