Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಅತ್ಯಂತ ಕಿರಿಯ ವಯಸ್ಸಿನಲ್ಲಿ ಅಸಾಧಾರಣ ಆಟವನ್ನು ಆಡುತ್ತಿದ್ದಾರೆ

Team Udayavani, Apr 23, 2024, 12:23 PM IST

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

ಕೆನಡಾದ ಟೊರಂಟೊದಿಂದ ಸೋಮವಾರ ಬೆಳಗ್ಗೆ ಭಾರತಕ್ಕೊಂದು ಶುಭ ಸಮಾಚಾರ ಬಂತು. ಡಿ.ಗುಕೇಶ್‌ ಕ್ಯಾಂಡಿಡೇಟ್ಸ್‌ ಚೆಸ್‌ ಪ್ರಶಸ್ತಿಯನ್ನು ಗೆದ್ದು, ವಿಶ್ವಚಾಂಪಿಯನ್‌ಶಿಪ್‌ ಫೈನಲ್‌ಗೇರಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ. 2023ರಲ್ಲಿ ಆರ್‌.ಪ್ರಜ್ಞಾನಂದ ಚೆಸ್‌ ವಿಶ್ವಕಪ್‌ ಫೈನಲ್‌ಗೇರಿದ, ಭಾರತದ ಕೇವಲ 2ನೇ ಆಟಗಾರ ಎನಿಸಿಕೊಂಡಿದ್ದರು. ಆಗವರು ಫೈನಲ್‌ನಲ್ಲಿ ಚೆಸ್‌ ದಂತಕಥೆ ಮ್ಯಾಗ್ನಸ್‌ ಕಾರ್ಲ್ಸ್ ನ್ ವಿರುದ್ಧ ಸೋತಿದ್ದರು.‌

ಈ ವರ್ಷ ಗುಕೇಶ್‌ ಇನ್ನೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಚೆಸ್‌ ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ಗೇರಿದ ಅತ್ಯಂತ ಕಿರಿಯ ಎಂಬ ಸಾಧನೆ ಅವರದ್ದು. ಜೊತೆಗೆ ಭಾರತದ ಚೆಸ್‌ ದಂತಕಥೆ ವಿಶ್ವನಾಥನ್‌ ಆನಂದ್‌ ನಂತರ, ಫೈನಲ್‌ಗೇರಿದ ಮೊದಲನೇ ಆಟಗಾರನೂ ಹೌದು. ಪ್ರಜ್ಞಾನಂದ (ವಿಶ್ವಕಪ್‌) ಮತ್ತು ಗುಕೇಶ್‌ (ವಿಶ್ವಚಾಂಪಿಯನ್‌ಶಿಪ್‌) ಇಬ್ಬರೂ ತಮ್ಮದೇ ರೀತಿಯಲ್ಲಿ ಅಸಾಮಾನ್ಯ ಸಾಧನೆ ಮಾಡಿ, ಭಾರತದ ಚೆಸ್‌ ಜಗತ್ತನ್ನು ಬೆಳಗಿದ್ದಾರೆ.

ಪ್ರಜ್ಞಾನಂದ ಕೇವಲ 18ನೇ ವಯಸ್ಸಿನಲ್ಲಿ, ಗುಕೇಶ್‌ 17ನೇ ವಯಸ್ಸಿನಲ್ಲಿ ಇಡೀ ವಿಶ್ವವನ್ನು ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇದರ ನಡುವೆ 29 ವರ್ಷದ ವಿದಿತ್‌ ಗುಜ್ರಾತಿ ಎಂಬ ಇನ್ನೊಬ್ಬ ಆಟಗಾರನೂ ತಮ್ಮ ಪ್ರತಿಭೆಯಿಂದ ಮಿಂಚಿದ್ದಾರೆ. ಇನ್ನು ಮಹಿಳಾ ಕ್ಯಾಂಡಿಡೇಟ್ಸ್‌ ಚೆಸ್‌ನಲ್ಲೂ ಭಾರತಕ್ಕೆ ಅತ್ಯಂತ ಭರವಸೆಯ ಸುದ್ದಿಗಳು ಬಂದಿವೆ. ಕೊನೆರು ಹಂಪಿ 2ನೇ ಸ್ಥಾನಿಯಾಗಿ ಕೂಟ ಮುಗಿಸಿದ್ದರೆ, ಪ್ರಜ್ಞಾನಂದ ಅವರ ಸಹೋದರಿ ಆರ್‌.ವೈಶಾಲಿ ಸತತ 5 ಜಯ ಪಡೆದಿದ್ದಾರೆ.

ಈ ಅಷ್ಟೂ ಸಾಧನೆಗಳು ಭಾರತದಲ್ಲಿ ಚೆಸ್‌ ಕ್ರೀಡೆಯನ್ನು ಯುವಕರು ಗಂಭೀರವಾಗಿ ತೆಗೆದುಕೊಂಡಿದ್ದರ ಸಂಕೇತವಾಗಿದೆ. ಹಾಗೆಯೇ ಎಲ್ಲ ರೀತಿಯ ಕ್ರೀಡೆಗಳೂ ಭಾರತದಲ್ಲಿ ಬೆಳೆಯುತ್ತಿವೆ ಎನ್ನುವುದನ್ನೂ ಖಾತ್ರಿಪಡಿಸಿವೆ. ಈ ಹಿಂದೆ ಚೆಸ್‌ ಅಂದರೆ ವಿಶ್ವನಾಥನ್‌ ಆನಂದ್‌ ಎನ್ನುವ ಕಾಲವಿತ್ತು. ಪ್ರಸ್ತುತ ಅಂತಹ ಪರಿಸ್ಥಿತಿಯಿಲ್ಲ. ನೂರಾರು ಪ್ರತಿಭಾವಂತ ಆಟಗಾರರ ಹೆಸರು ಈ ವಿಭಾಗದಲ್ಲಿ ಕೇಳಿ ಬರುತ್ತಿದೆ. ಇವರೆಲ್ಲ ಅತ್ಯಂತ ಕಿರಿಯ ವಯಸ್ಸಿನಲ್ಲಿ ಅಸಾಧಾರಣ ಆಟವನ್ನು ಆಡುತ್ತಿದ್ದಾರೆ.

ಚೆಸ್‌ನಲ್ಲಿ ಭಾರತಕ್ಕೆ ಅದ್ಭುತ ಭವಿಷ್ಯವಿದೆ ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಗುಕೇಶ್‌ ಮಾಡಿರುವ ಸಾಧನೆ ಸಾಮಾನ್ಯವಾದದ್ದಲ್ಲ. ಅವರ ವಯಸ್ಸನ್ನು ಪರಿಗಣಿಸಿದರೆ, ಈ ಸಾಧನೆಗೆ ಮತ್ತಷ್ಟು ತೂಕ ಬರುತ್ತದೆ. ಈ ವರ್ಷಾಂತ್ಯದಲ್ಲಿ ನಡೆಯುವ ವಿಶ್ವ ಚಾಂಪಿಯನ್‌ ಶಿಪ್‌ನಲ್ಲಿ ಅವರು ಚೀನಾದ ಡಿಂಗ್‌ ಲಿರೆನ್‌ರನ್ನು ಸೋಲಿಸಿದರೆ, ವಿಶ್ವವಿಜೇತರೇ ಆಗಲಿದ್ದಾರೆ! ಎಲ್ಲಕ್ಕಿಂತ ಮುಖ್ಯವಾಗಿ 17ನೇ ವರ್ಷದಲ್ಲಿ ಕ್ಯಾಂಡಿಡೇಟ್ಸ್‌ ಚೆಸ್‌ ಪ್ರಶಸ್ತಿಯನ್ನು ಗೆಲ್ಲುವಾಗ ಅವರು, ಫ್ಯಾಬಿ ಯಾನೊ ಕರುವಾನ (ವಿಶ್ವ ನಂ.2), ಹಿಕಾರು ನಕಮುರ (ವಿಶ್ವ ನಂ.3) ಎದುರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಈ ಎಲ್ಲ ಮಾಹಿತಿಗಳು ಗುಕೇಶ್‌ ಹಾದಿ ಸಲೀಸಾಗಿರಲಿಲ್ಲ ಎನ್ನುವುದನ್ನು ಸೂಚಿಸುತ್ತವೆ. ಪ್ರಶಸ್ತಿ ಜಯಕ್ಕೂ ಮುನ್ನ ದೊಡ್ಡ ಸವಾಲುಗಳನ್ನು ಅವರು
ದಾಟಿರುವುದು, ಭಾರತದ ಯುವಶಕ್ತಿಯ ಸಂಕೇತವಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.