Guru Poornime: ವಿವಿಧೆಡೆ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತ

ಶೃಂಗೇರಿಯಲ್ಲಿ ಉಭಯ ಶ್ರೀಗಳಿಂದ ವ್ಯಾಸಪೂಜೆ, ಗೋಕರ್ಣದಲ್ಲಿ ರಾಘವೇಶ್ವರ ಶ್ರೀ ವ್ರತ ಸಂಕಲ್ಪ

Team Udayavani, Jul 22, 2024, 7:15 AM IST

Raghaveshwar-Sri

ಗೋಕರ್ಣದಲ್ಲಿ ಶ್ರೀರಾಘವೇಶ್ವರ ಸ್ವಾಮೀಜಿ ವ್ರತಾರಂಭ 
ಗೋಕರ್ಣ: ಅಜ್ಞಾನವೇ ಆವರಣ. ಸುಜ್ಞಾನವೇ ಅನಾವರಣ. ಅರಿವಿನ ಪ್ರಾಪ್ತಿಯೇ ನಿಜವಾದ ಅನಾವರಣ ಎಂದು ಶ್ರೀರಾಮಚಂದ್ರಾಪುರ ಮಠದ  ಶ್ರೀ ರಾಘವೇಶ್ವಭಾರತೀ ಸ್ವಾಮೀಜಿ ನುಡಿದರು. ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿಶ್ವ ವಿದ್ಯಾಪೀಠದ ಆವರಣದಲ್ಲಿ ರವಿವಾರ ಅನಾವರಣ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.
ಪ್ರತಿಯೊಬ್ಬರ ಹೃದಯವೂ ಒಂದು ಅಮೂಲ್ಯ ರತ್ನ. ಆದರೆ ಅದರ ಕಲ್ಪನೆ ನಮಗಿಲ್ಲ. ರತ್ನಕ್ಕೆ ಮುಚ್ಚಿರುವ ಆವರಣವನ್ನು ಸುಜ್ಞಾನದ ಮೂಲಕ ಸರಿಸುವುದೇ ಅನಾವರಣ ಎಂದರು. ಇದಕ್ಕೂ ಮುನ್ನ ಶ್ರೀಸಂಸ್ಥಾನದವರು ಸಾಂಪ್ರದಾಯಿಕ ವ್ಯಾಸಪೂಜೆ ನೆರವೇರಿಸುವ ಮೂಲಕ ಶ್ರೀಗಳು ಚಾತುರ್ಮಾಸ್ಯ ವ್ರತಾರಂಭ ಮಾಡಿದರು.

ಶೃಂಗೇರಿ: ಉಭಯ ಶ್ರೀಗಳಿಂದ ವ್ಯಾಸಪೂಜೆ
ಶೃಂಗೇರಿ: ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ರವಿವಾರ ಚಾತುರ್ಮಾಸ್ಯ ವ್ರತ ಆರಂಭಿಸಿದರು. ಶ್ರೀ ಭಾರತೀತೀರ್ಥ ಸ್ವಾಮೀಜಿ 50ನೇ ಹಾಗೂ ಅವರ ಉತ್ತರಾಧಿ ಕಾರಿ ಕಿರಿಯ ಸ್ವಾಮೀಜಿಗಳಾದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ತಮ್ಮ 10 ನೇ ಚಾತುರ್ಮಾಸ್ಯ ವೃತದ ಸಂಕಲ್ಪ ಕೈಗೊಂಡರು. ಶ್ರೀಮಠದ ಎಲ್ಲ ದೇವಾಲಯಗಳಿಗೂ ಭೇಟಿ ನೀಡಿ ದೇವರ ದರ್ಶನ ಪಡೆದು, ಶ್ರೀ ಶಾರದಾಂಬೆಗೆ ಪೂಜೆ ಸಲ್ಲಿಸಿ ಗುರುಭವನದಲ್ಲಿ ವ್ಯಾಸಪೂಜೆ ನೆರವೇರಿಸಿದರು.

ಸ್ವರ್ಣವಲ್ಲೀ ಶ್ರೀಗಳ ಸಂಕಲ್ಪ
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ಉಭಯ ಶ್ರೀಗಳು ಚಾತುರ್ಮಾಸ್ಯ ವ್ರತಾಚರಣೆಗೆ ಸಂಕಲ್ಪಿಸಿದರು. ಮಠದ ಹಿರಿಯ ಯತಿಗಳಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹಾಗೂ ಕಿರಿಯ ಸ್ವಾಮೀಜಿ ಶ್ರೀ ಆನಂದಭೋದೇಂದ್ರ ಸರಸ್ವತೀ ಸ್ವಾಮೀಜಿ ವ್ಯಾಸ ಪೂಜೆ ನಡೆಸಿ ವ್ರತ ಸಂಕಲ್ಪಿಸಿದರು. ಹಿರಿಯ ಶ್ರೀಗಳ 34ನೇ ಚಾತುರ್ಮಾಸ್ಯ ವ್ರತ ಮತ್ತು ಕಿರಿಯ ಶ್ರೀಗಳ ಮೊದಲನೆಯ ಚಾತುರ್ಮಾಸ್ಯ ವ್ರತ ಇದಾಗಿದೆ.

ಸೋದೆಯಲ್ಲಿ ವಿಶ್ವವಲ್ಲಭ ಶ್ರೀ
ಶಿರಸಿ: ಇಲ್ಲಿನ ಸೋದೆ ವಾದಿರಾಜ ಮಠದಲ್ಲಿ ಶ್ರೀವಿಶ್ವವಲ್ಲಭ ತೀರ್ಥರು ರವಿವಾರ ಚಾತುರ್ಮಾಸ್ಯ ವ್ರತ ಸಂಕಲ್ಪ ಮಾಡಿದರು. ಅವರು ತಮ್ಮ 19ನೇ ಚಾತುರ್ಮಾಸ್ಯ ವ್ರತವನ್ನು ಭಾವಿಸಮೀರ ಶ್ರೀವಾದಿರಾಜ ಗುರು ಸಾರ್ವಭೌಮರ ಪಂಚ ವೃಂದಾವನದ ಸನ್ನಿ ಧಿಯಲ್ಲಿ ಸಂಕಲ್ಪ ನಡೆಸಿದರು. ಸಂಸ್ಥಾನದ ಪ್ರತಿಮೆಗಳಿಗೆ, ಪಟ್ಟದ ದೇವರುಗಳಿಗೆ ಮಹಾಭಿಷೇಕ ನಡೆಸಿದರು. ಭೂತರಾಜರು, ವಾದಿರಾಜರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಭಟ್ಕಳದಲ್ಲಿ ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿ ಚಾತುರ್ಮಾಸ್ಯ
ಭಟ್ಕಳ : ತಾಲೂಕಿನ ಕರಿಕಲ್‌ ಶ್ರೀರಾಮ ಧ್ಯಾನ ಮಂದಿರದ ಆವರಣದಲ್ಲಿ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಐದನೇ ವರ್ಷದ ಚಾತುರ್ಮಾಸ್ಯ ಕಾರ್ಯಕ್ರಮ ರವಿವಾರ ಆರಂಭವಾಯಿತು. ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಸ್ವಾಮೀಜಿ, ನಾವು ಧರ್ಮ ಮಾರ್ಗದಿಂದ ನಡೆದಾಗ ಮಾತ್ರ ಸುಖ ಪ್ರಾಪ್ತಿಯಾಗುವುದು. ಮೊದಲು ನಾವು ಬದಲಾಗಬೇಕು, ನಮ್ಮ ಬದುಕು ಮೌಲ್ಯಗಳೊಂದಿಗೆ ಬದುಕುವಂತಾಗಬೇಕು ಎಂದರು. ಶಾಸಕ ಹರೀಶ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.