H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್
ದಾಖಲೆಗಳು ಇದ್ದರೆ ಕುಮಾರಸ್ವಾಮಿ ಬಿಡುಗಡೆ ಮಾಡಲಿ: ಉಪ ಮುಖ್ಯಮಂತ್ರಿ, ಕಾಂಗ್ರೆಸ್ನವರೇ ಎಡಿಜಿಪಿ ಮೂಲಕ ಪತ್ರ ಬರೆಸಿದ್ದಾರೆ': ನಿಖಿಲ್ ಕುಮಾರಸ್ವಾಮಿ
Team Udayavani, Sep 30, 2024, 12:54 AM IST
ನೆಲಮಂಗಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಏನು ಮಾತನಾಡುತ್ತಾರೆ ಎಂದು ಅವರಿಗೇ ಗೊತ್ತಿರುವುದಿಲ್ಲ, ಕೆಪಿಸಿಸಿ ಕಚೇರಿಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಗೂ ಏನು ಸಂಬಂಧ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ನೆಲಮಂಗಲದಲ್ಲಿ ರವಿವಾರ ಸುದ್ದಿಗಾರರ ಜತೆ ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಚಂದ್ರಶೇಖರ್ ಅವರಿಗೆ ಕೆಪಿಸಿಸಿ ಕಚೇರಿಯಿಂದ ಪತ್ರ ಬಂದಿದೆ ಎನ್ನುವ ಸಚಿವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ನಾನು ಊರಿನಲ್ಲೇ ಇರಲಿಲ್ಲ, ಸಾತನೂರು, ಕನಕಪುರದಲ್ಲಿ ಕ್ಷೇತ್ರದ ಕೆಲಸ ಕಾರ್ಯಗಳ ಕುರಿತು ಓಡಾಡುತ್ತಿದ್ದೇನೆ. ಕುಮಾರಸ್ವಾಮಿ ಅವರು ಕೆಪಿಸಿಸಿ ನೆನೆಸಿಕೊಂಡರೆ ನಾನು ಏನು ಮಾತನಾಡಲು ಸಾಧ್ಯ’ ಎಂದರು.
ಕುಮಾರಸ್ವಾಮಿ ಅವರ ಬಳಿ ದಾಖಲೆಗಳು ಇದ್ದರೆ ಬಿಡುಗಡೆ ಮಾಡಲಿ. ಚಂದ್ರಶೇಖರ್ ಅವರು ನನ್ನ ನೋಡಿಯೂ ಇಲ್ಲ, ಮಾತನಾಡಿಯೂ ಇಲ್ಲ, ನನಗೆ ಅವರು ಸಿಕ್ಕಿಲ್ಲ, ನನಗೆ ಗೊತ್ತೇ ಇಲ್ಲ ಎಂದರು.
“ಕಾಂಗ್ರೆಸ್ನವರೇ ಎಡಿಜಿಪಿ ಮೂಲಕ ಪತ್ರ ಬರೆಸಿದ್ದಾರೆ’: ನಿಖಿಲ್ ಕುಮಾರಸ್ವಾಮಿ
ರಾಮನಗರ: ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿದೆ. ಇದನ್ನು ಎಚ್.ಡಿ. ಕುಮಾರಸ್ವಾಮಿ ನೇರವಾಗಿ ಹೇಳಿದರೆ ಸರಕಾರಕ್ಕೆ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಈ ಕಾರಣದಿಂದಲೇ ಎಡಿಜಿಪಿಯಿಂದ ಆ ರೀತಿ ಪತ್ರ ಬಂದಿರುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಕನಕಪುರದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಎಡಿಜಿಪಿ ಚಂದ್ರಶೇಖರ್ ಪತ್ರ ಸಂಬಂಧ ಪ್ರತಿಕ್ರಿಯಿಸಿ, ಎಲ್ಲರೂ ಒಂದಷ್ಟು ಪತ್ರಗಳನ್ನು ಬರೆಸಿ, ರಾಜ್ಯಕ್ಕೆ ಸಂದೇಶ ಕೊಡಿಸುವಂತ ಕೆಲಸ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ
FIR Rigister: ಕೇಂದ್ರ ಸಚಿವೆ ನಿರ್ಮಲಾ, ಸಿದ್ದರಾಮಯ್ಯ ಪ್ರಕರಣ ಅಜಗಜಾಂತರ: ಆರ್. ಅಶೋಕ್
Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.