![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 25, 2020, 3:09 PM IST
ಮೈಸೂರು : ಶಾಲಾ,ಕಾಲೇಜು, ಆಡಳಿತ ಮಂಡಳಿಯವರನ್ನ ಶಿಕ್ಷಣ ತಜ್ಣರು ಎಂದು ಭ್ರಮಿಸಬೇಡಿ. ಹೆಚ್ಚು ಶಾಲಾ ಕಾಲೇಜು ನಡೆಸುವವರು ಶಿಕ್ಷಣ ತಜ್ಞರಲ್ಲ. ಶಿಕ್ಷಣ ಜ್ಞಾನ ಇಲ್ಲದವರು ಸಮಿತಿಯಲ್ಲಿದ್ದಾರೆ. ಶಿಕ್ಷಣ ನೀತಿ ಸಮರ್ಪಕ ಜಾರಿಯಾಗಬೇಕಾದ್ರೆ ಸಮುದಾಯ ಎಲ್ಲರು ಸಮಿತಿಯಲ್ಲಿರಬೇಕು, ಶಿಕ್ಷಣ ಮಾರುವವರನ್ನ ಸಮಿತಿಗೆ ಕರೆಯಬೇಡಿ ಎಂದು ಮೈಸೂರಿನ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತು ಮಾತನಾಡಿದ ಅವರು ರಾಜ್ಯದಲ್ಲಿ ಶಿಕ್ಷಣ ನೀತಿ ಜಾರಿಗೆ ಸಮಿತಿ ರಚನೆ ಆಗುತ್ತಿದೆ, ಹಾಗಾಗಿ ಶಿಕ್ಷಣ ನೀತಿ ಜಾರಿ ಹಾಗೂ ಶಾಲೆ ಆರಂಭಕ್ಕೆ ಅವಸರ ಬೇಡ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಅವರಿಗೆ ವಿಶ್ವನಾಥ್ ಸಲಹೆ ನೀಡಿದ್ದಾರೆ.
ಅದೆ ರೀತಿ ಶಾಲೆ ಆರಂಭಕ್ಕು ಅವಸರ ಬೇಡ. ಶಾಲೆ ಪುನಾರರಂಭಕ್ಕೆ ಪೋಷಕರಾಗಲಿ ಮಕ್ಕಳಾಗಲಿ ಕೇಳುತ್ತಿಲ್ಲ. ಆಡಳಿತ ಮಂಡಳಿಯ ಒತ್ತಡಕ್ಕೆ ಮಣಿಯಬೇಡಿ. ಶಾಲೆಗಳು ಹಾಗೂ ಆಸ್ಪತ್ರೆಗೆ ನಡೆಸೋರು ನಮ್ಮ ರಾಜಕಾರಣಿಗಳೆ ಹೆಚ್ಚಾಗಿದ್ದಾರೆ ಆದುದರಿಂದ ಅವರ ಅಭಿಪ್ರಾಯ ಕೇಳಿದರೆ ಶಿಕ್ಷಣ ದುರಂತ ಕಾಣಬೇಕಾಗುತ್ತದೆ ಎಂದರು.
ಮೈಸೂರು ದಸರಾ ಸರಳವಾಗಿ ನಡೆಯಲಿ :
ಕೋವಿಡ್ ಕಾರಣದಿಂದ ಈ ಬಾರಿ ದಸರಾ ಸರಳವಾಗಿ, ಶಾಶ್ತ್ರೋತ್ರವಾಗಿ ನಡೆಯಲಿ ಇಂತಹ ಸಂದರ್ಭದಲ್ಲಿ ಹೆಚ್ಚು ಜನರು ಸೇರುವುದು ಒಳ್ಳೆಯದಲ್ಲ. ಹೆಚ್ಚು ಜನ ಸೇರಿದರೇ ನಾವೇ ಅದರ ದುಷ್ಪರಿಣಾಮ ಏದುರಿಸಬೇಕಾಗುತ್ತದೆ. ಚಾಮುಂಡೇಶ್ವರಿಯನ್ನ ಶ್ರದ್ಧಾಭಕ್ತಿಯಿಂದ ಆರಾಧಿಸಲಿ. ಆದ್ದರಿಂದ ಸರಳವಾಗಿ ಆಚರಣೆ ಮಾಡೊದೆ ಸೂಕ್ತ ಎಂದು ಹೇಳಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.