ತೆನೆಯ ಹೊರೆ ಇಳಿಸಿದ ಹಳ್ಳಿಹಕ್ಕಿ

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟ ವಿಶ್ವನಾಥ್‌

Team Udayavani, Jun 5, 2019, 6:00 AM IST

e-36

ಬೆಂಗಳೂರು: ಹಿರಿಯ ರಾಜಕಾರಣಿ ಎಚ್.ವಿಶ್ವನಾಥ್‌ ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷ ಹಾಗೂ ಪ್ರಭುತ್ವ ಜೋಡೆತ್ತಿನಂತೆ ಕೆಲಸ ಮಾಡಬೇಕಿತ್ತು. ಅದು ಸಾಧ್ಯವಾಗದ ಕಾರಣ ನಾನು ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದರೂ ಪ್ರಯೋಜನವಾಗದು ಎಂಬ ಕಾರಣಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

ಜತೆಗೆ, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಮನ್ವಯ ಸಮಿತಿಯು ಸಿದ್ದರಾಮಯ್ಯ ಅವರ ಕೈ ಗೊಂಬೆಯಾಗಿದೆ ಎಂದು ಕಿಡಿ ಕಾರಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಮೃದು ಧೋರಣೆ ತೋರುತ್ತಲೇ ಜೆಡಿಎಸ್‌ನ ವಿದ್ಯಮಾನಗಳ ಬಗ್ಗೆ ಬೇಸರ ಹೊರಹಾಕಿದ್ದಾರೆ. ತುಮಕೂರಿನ ಖೆಡ್ಡಾಗೆ ಕೆಡವಿ ಗೌಡರನ್ನು ತಂತ್ರಗಾರಿಕೆಯಿಂದ ಸೋಲಿಸಲಾಯಿತು ಎಂದೂ ‘ಬಾಂಬ್‌’ ಸಿಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಾಜೀನಾಮೆ ಪ್ರಕಟಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಬರೆದ ಪತ್ರದ ಪ್ರತಿ ಬಿಡುಗಡೆ ಮಾಡಿದರು. ಇನ್ಮುಂದೆ ಪಕ್ಷಕ್ಕೂ ನನ್ನ ಮತದಾರರಿಗೂ ನಿಷ್ಠನಾಗಿ ಪಕ್ಷ ಒಪ್ಪಿಸಿದ ಜವಾಬ್ದಾರಿಗಳನ್ನು ಮನಸ್ಸಿಟ್ಟು ನಿರ್ವಹಿಸುತ್ತೇನೆ ಎಂದು ಅದರಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿ ನಂತರ ಅಲ್ಲಿಂದ ನೇರವಾಗಿ ಜೆಡಿಎಸ್‌ ಕಚೇರಿಗೆ ಹೋಗಿ ಅಲ್ಲಿನ ವ್ಯವಸ್ಥಾಪಕರಿಗೆ ರಾಜೀನಾಮೆ ಪತ್ರ ಹಾಗೂ ಪಕ್ಷದ ವತಿಯಿಂದ ನೀಡಲಾಗಿದ್ದ ಕಾರಿನ ಕೀ ನೀಡಿ ನಿರ್ಗಮಿಸಿದರು.

ವಿಶ್ವನಾಥ್‌ ಅವರ ಮನವೊಲಿಕೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ನಿರಂತರ ಪ್ರಯತ್ನಿಸುತ್ತಿದ್ದಾರೆ. ನನ್ನ ನಿರ್ಧಾರ ಅಚಲ ಎಂದೂ ವಿಶ್ವನಾಥ್‌ ಹೇಳಿದ್ದಾರೆ. ರಾಜೀನಾಮೆ ಅಂಗೀಕಾರವಾಗುತ್ತಾ ಇಲ್ಲವಾ ಎಂಬುದು ಕಾದು ನೋಡಬೇಕಾಗಿದೆ.

ಪಕ್ಷದ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸುತ್ತಿದ್ದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೂರವಾಣಿ ಕರೆ ಮಾಡಿದ್ದರು. ಆದರೆ, ಮೊದಲಿಗೆ ಕರೆ ಸ್ವೀಕರಿಸಲು ನಿರಾಕರಿಸಿದ ವಿಶ್ವನಾಥ್‌ ಅವರು ನಂತರ ಸ್ವೀಕರಿಸಿ, ಬೇಸರ ಮಾಡಿಕೊಳ್ಳಬೇಡಿ ಸರ್‌, ದಯವಿಟ್ಟು ನನ್ನ ರಾಜೀನಾಮೆ ಅಂಗೀಕರಿಸಿ ಎಂದು ಮನವಿ ಮಾಡಿದರು.

ಸ್ವಲ್ಪ ಹೊತ್ತಲೇ ಸಚಿವ ಎಚ್.ಡಿ. ರೇವಣ್ಣ ಅವರು ದೂರವಾಣಿ ಕರೆ ಮಾಡಿ, ರಾಜೀನಾಮೆ ಕೊಡಬೇಡಿ. ವ್ಯತ್ಯಾಸ ಆಗಿದ್ದರೆ ಸರಿಪಡಿಸೋಣ, ನಿಮ್ಮ ರಾಜೀ ನಾಮೆ ಪತ್ರದಲ್ಲೂ ನಮ್ಮ ಕುಟುಂಬದ ಬಗ್ಗೆ ಒಳ್ಳೆಯ ಮಾತ ನಾಡಿದ್ದೀರಿ. ನಿಮ್ಮ ಮಾರ್ಗದರ್ಶನದಲ್ಲೇ ಪಕ್ಷ ಕಟ್ಟೋಣ ಎಂದು ಹೇಳಿದರು. ನಂತರ ಸಂಸದ ಪ್ರಜ್ವಲ್ ದೂರವಾಣಿ ಕರೆ ಮಾಡಿ, ಅಂಕಲ್ ಪ್ಲೀಸ್‌ ರಾಜೀನಾಮೆ ಕೊಡಬೇಡಿ ಎಂದು ಮನವಿ ಮಾಡಿದರು. ಇಬ್ಬರಿಗೂ ಬೇಸರ ಮಾಡಿಕೊಳ್ಳಬೇಡಿ ಎಂದು ವಿಶ್ವನಾಥ್‌ ಹೇಳಿದರು. ಇಷ್ಟೆಲ್ಲದರ ನಂತರವೂ ಜೆಡಿಎಸ್‌ ನಾಯಕರು ವಿಶ್ವನಾಥ್‌ ಅವರ ಮನವೊಲಿಸುವ ವಿಶ್ವಾಸ ಹೊಂದಿದ್ದಾರೆ. ಈ ಮಧ್ಯೆ, ವಿಧಾನಸೌಧದಲ್ಲಿ ಮಾತ ನಾಡಿದ ಎಚ್.ವಿಶ್ವನಾಥ್‌, ದೇವೇಗೌಡರ ಫೋಟೋ ದೇವಸ್ಥಾನದಲ್ಲಿಟ್ಟು ಪೂಜೆ ಮಾಡುತ್ತೇನೆ. ಅವರು ದೊಡ್ಡವರು ಬೇಸರ ಮಾಡಿಕೊಳ್ಳಬಾರದು. ನನ್ನ ರಾಜೀನಾಮೆ ಅಂಗೀಕರಿಸುವ ವಿಶ್ವಾಸವಿದೆ. ನಾನು ಅವರಿಗೆ ಪ್ರತಿ ಹೇಳಲು ಆಗುವುದಿಲ್ಲ ಎಂದು ಹೇಳಿದರು.

ಮಂತ್ರಿಯಾಗ್ತಾರಾ?
ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್.ವಿಶ್ವನಾಥ್‌ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಕೇಳಿದಾಗ, ಮಂತ್ರಿ ಮಾಡಿದರೆ ಬೇಡ ಎನ್ನಲ್ಲ. ಆದರೆ, ಮಂತ್ರಿಗಿರಿಗಾಗಿ ಯಾರ ಮನೆ ಬಾಗಿಲಿಗೂ ಹೋಗಲ್ಲ ಎಂದು ಹೇಳಿದರು. ಬಿಜೆಪಿ ಸೇರ್ಪಡೆ ಕುರಿತು ವದಂತಿಗೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಗ್ಗಾಮುಗ್ಗಾ ಹೊಡೆಸಿಕೊಂಡಿರುವ ಬಿಜೆಪಿಗೆ ನಾನ್ಯಾಕೆ ಹೋಗಲಿ ಎಂದು ಚಟಾಕಿ ಹಾರಿಸಿದರು. ದೇಶವ್ಯಾಪಿ ಬಿಜೆಪಿ ಅಲೆ ಇದ್ದರೆ ಒಡಿಶಾದಲ್ಲಿ ಬಿಜೆಡಿ ಐದನೇ ಬಾರಿ ಅಧಿಕಾರಕ್ಕೆ ಬರುತ್ತಿತ್ತಾ? ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

10-panaji

Panaji: ದೀಪಾವಳಿಗೆ ಸಿಗಲಿದೆ ಗೋವಾ ಜನರಿಗೆ ಗಿಫ್ಟ್‌

SC-Meet-CM

Valmiki Nigama: ಹಣ ದುರ್ಬಳಕೆಯಾದರೂ ಈ ವರ್ಷದ ಅನುದಾನ ಕೊಡಲು ಸೂಚಿಸಿರುವೆ: ಸಿದ್ದರಾಮಯ್ಯ

Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ

Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

By-election: ಚನ್ನಪಟ್ಟಣಕ್ಕೆ ಇದು 3ನೇ ಉಪಚುನಾವಣೆ

By-election: ಚನ್ನಪಟ್ಟಣಕ್ಕೆ ಇದು 3ನೇ ಉಪಚುನಾವಣೆ

Bhagamandala: ಕಾಡಾನೆ ದಾಳಿಗೆ ಓರ್ವ ಬಲಿ, ಇಬ್ಬರು ಪಾರು

Bhagamandala: ಕಾಡಾನೆ ದಾಳಿಗೆ ಓರ್ವ ಬಲಿ, ಇಬ್ಬರು ಪಾರು

PAKvsENG: Kamran Ghulam’s century that troubled Babar Azam

PAKvsENG: ಬಾಬರ್‌ ಅಜಂಗೆ ಸಂಕಷ್ಟ ತಂದ ಕಮ್ರಾನ್‌ ಘುಲಾಂ ಶತಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SC-Meet-CM

Valmiki Nigama: ಹಣ ದುರ್ಬಳಕೆಯಾದರೂ ಈ ವರ್ಷದ ಅನುದಾನ ಕೊಡಲು ಸೂಚಿಸಿರುವೆ: ಸಿದ್ದರಾಮಯ್ಯ

Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ

Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ

Possibility of five days of heavy rain on the coast due to the fall in atmospheric pressure

Rain; ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ

Santhebennur: Demand for Rs 2 thousand bribe; Deputy Tahsildar Lokayukta trap

Santhebennur: 2 ಸಾವಿರ ರೂ ಲಂಚಕ್ಕೆ ಬೇಡಿಕೆ; ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Yadagiri: ಸಿಡಿಲು ಬಡಿದು ರೈತ ಸಾವು

Yadagiri: ಸಿಡಿಲು ಬಡಿದು ರೈತ ಸಾವು

10-panaji

Panaji: ದೀಪಾವಳಿಗೆ ಸಿಗಲಿದೆ ಗೋವಾ ಜನರಿಗೆ ಗಿಫ್ಟ್‌

SC-Meet-CM

Valmiki Nigama: ಹಣ ದುರ್ಬಳಕೆಯಾದರೂ ಈ ವರ್ಷದ ಅನುದಾನ ಕೊಡಲು ಸೂಚಿಸಿರುವೆ: ಸಿದ್ದರಾಮಯ್ಯ

Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ

Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ

9-gangavathi

Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.