ಗಾಜಾ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಹಮಾಸ್ ಕಮಾಂಡರ್ ಸೇರಿ 50 ಜನರ ಮೃತ್ಯು
ಇಸ್ರೇಲ್ ಯುದ್ಧದ ಪರಿಣಾಮ ಜಬಾಲಿಯಾ ನಿರಾಶ್ರಿತರಿಗೆ ತವರು ಮನೆ ಇದ್ದಂತಾಗಿದೆ.
Team Udayavani, Nov 1, 2023, 11:35 AM IST
ಜೆರುಸಲೇಂ: ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಮುಂದುವರಿದಿದ್ದು, ಬುಧವಾರ (ನವೆಂಬರ್ 01) ಇಸ್ರೇಲ್ ಯುದ್ಧ ವಿಮಾನಗಳು ಗಾಜಾಪಟ್ಟಿಯಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿದ ಪರಿಣಾಮ ಹಮಾಸ್ ಕಮಾಂಡರ್ ಸೇರಿದಂತೆ ಕನಿಷ್ಠ 50 ಮಂದಿ ಪ್ಯಾಲೆಸ್ತೇನಿಯನ್ ಜನರು ಮೃತ್ಯುಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:Kalburgi: ಮತ್ತೆ ಪ್ರತ್ಯೇಕ ರಾಜ್ಯದ ಕೂಗು… ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ, ಹಲವರ ಬಂಧನ
ಯುದ್ಧ ತೀವ್ರ ಸ್ವರೂಪ ಪಡೆದಿದ್ದು, ಗಾಯಗೊಂಡವರಿಗೆ ಚಿಕಿತ್ಸೆಯೂ ದೊರಕದ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳಲ್ಲಿ ಇಂಧನ ಮತ್ತು ಔಷಧದ ಕೊರತೆ ತಲೆದೋರಿದೆ ಎಂದು ವರದಿ ವಿವರಿಸಿದೆ.
ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಸೇನೆ ವೈಮಾನಿ ದಾಳಿ ನಡೆಸುವ ಮೂಲಕ ಯುದ್ಧಕ್ಕೆ ನಾಂದಿ ಹಾಡಿತ್ತು.
ಹಮಾಸ್ ಮತ್ತು ಇಸ್ರೇಲ್ ಯುದ್ಧದಲ್ಲಿ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದು, ಸಾವಿರಾರು ಜನರು ಗಾಯಗೊಂಡು, ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಅಕ್ಟೋಬರ್ 7ರ ದಾಳಿಯ ರೂವಾರಿ ಹಮಾಸ್ ನ ಕಮಾಂಡರ್ ಇಬ್ರಾಹಿಂ ಬಿಯಾರಿ ವೈಮಾನಿಕ ದಾಳಿಯಲ್ಲಿ ಕೊನೆಯುಸಿರೆಳೆದಿರುವುದಾಗಿ ಇಸ್ರೇಲ್ ಡಿಫೆನ್ಸ್ ಫೋರ್ಸ್ (IDF) ತಿಳಿಸಿದೆ.
1948ರಿಂದ ಇಸ್ರೇಲ್ ಯುದ್ಧದ ಪರಿಣಾಮ ಜಬಾಲಿಯಾ ನಿರಾಶ್ರಿತರಿಗೆ ತವರು ಮನೆ ಇದ್ದಂತಾಗಿದೆ. ಗಾಜಾಪಟ್ಟಿಯಲ್ಲಿ ವಾಸ್ತವ್ಯ ಹೂಡಿರುವವರು ತಕ್ಷಣವೇ ಬೇರೆಡೆ ಸ್ಥಳಾಂತರಗೊಳ್ಳುವಂತೆ ಇಸ್ರೇಲ್ ಎಚ್ಚರಿಕೆ ನೀಡಿದ್ದರೂ ಕೂಡಾ ನೂರಾರು ಮಂದಿ ಗಾಜಾದಲ್ಲಿಯೇ ಉಳಿದಕೊಂಡಿದ್ದು, ಬಾಂಬ್ ದಾಳಿಯಲ್ಲಿ ನೂರಾರು ಕಟ್ಟಡಗಳು ಧ್ವಂಸಗೊಂಡಿರುವುದಾಗಿ ಹಮಾಸ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ
Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್ಗೆ ಪನ್ನು ದೂರು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.