![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 22, 2021, 12:28 PM IST
ನವದೆಹಲಿ: ವಿಧಾನಸಭಾ ಕ್ಷೇತ್ರದ ಚುನಾವಣೆ ನಡೆಯಲಿರುವ ಉತ್ತರಾಖಂಡ್ ರಾಜ್ಯದಲ್ಲಿ, ಮನೆ,ಮನೆಗೆ ಬಿಜೆಪಿ ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಗೆ ಭೇಟಿ ನೀಡಿ ಬಿಜೆಪಿ ನೇತೃತ್ವದ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನದಟ್ಟು ಮಾಡಿಕೊಡಬೇಕಾಗಿದೆ.
“ಪ್ರತಿ ಮನೆಯೂ ಬಿಜೆಪಿ, ಮನೆ, ಮನೆಗೆ ಬಿಜೆಪಿ ಎಂಬ ಕಾರ್ಯಕ್ರಮದಡಿ ಪಕ್ಷದ ಕಾರ್ಯಕರ್ತರು ರಾಜ್ಯದಲ್ಲಿರುವ 11,000 ಚುನಾವಣಾ ಮತಗಟ್ಟೆಯ ವ್ಯಾಪ್ತಿಯಲ್ಲಿರುವ ಪ್ರತಿ ಮನೆ ಬಾಗಿಲ ಕದತಟ್ಟಬೇಕಾಗಿದೆ” ಎಂದು ವರದಿ ತಿಳಿಸಿದೆ.
ಪಕ್ಷದ ಹಿರಿಯ ಮುಖಂಡರೊಬ್ಬರ ಮಾಹಿತಿ ಪ್ರಕಾರ, ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಿಜೆಪಿ ಕಾರ್ಯಕರ್ತರು ಮನೆ, ಮನೆಗೆ ತೆರಳಿ ಮತದಾರರಿಗೆ ಮಾಹಿತಿ ನೀಡಬೇಕಾಗಿದೆ. ಪ್ರತಿ ಮನೆಯ ಭೇಟಿ ವೇಳೆಯೂ ಮನೆಯ ಗೋಡೆಗೆ ಬಿಜೆಪಿಯ ಸ್ಟಿಕ್ಕರ್ ಅಂಟಿಸಬೇಕಾಗಿದೆ ಎಂದು ವರದಿ ಹೇಳಿದೆ.
ಮನೆಯ ಮಾಲೀಕರ ಅನುಮತಿ ಮೇರೆಗೆ ಬಿಜೆಪಿ ಪಕ್ಷದ ಬಾವುಟವನ್ನು ಹಾರಿಸಲಾಗುವುದು. ಅಷ್ಟೇ ಅಲ್ಲದೇ ರಾಜ್ಯಾದ್ಯಂತ ಗೋಡೆ ಬರಹಗಳ ಅಭಿಯಾನ ಕೂಡಾ ಮುಂದುವರಿಯಲಿದೆ ಎಂದು ವರದಿ ತಿಳಿಸಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.