Haryana: ಪ.ಜಾತಿಗೆ ಸರಕಾರಿ ಕೆಲಸದಲ್ಲಿ ಶೇ.20ರಷ್ಟು ಮೀಸಲು?
Team Udayavani, Aug 19, 2024, 1:41 AM IST
ಚಂಡೀಗಢ: ಹರಿಯಾಣ ಪರಿಶಿಷ್ಠ ಜಾತಿ ಆಯೋಗದ ವರದಿಯನ್ನು ರಾಜ್ಯ ಸರಕಾರ ಅಂಗೀಕರಿಸಿದ್ದು, ಪರಿಶಿಷ್ಟ ಜಾತಿಗೆ ಸರಕಾರಿ ಕೆಲಸಗಳನ್ನು ಶೇ.20ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ರವಿವಾರ ಹೇಳಿದ್ದಾರೆ.
ಅಲ್ಲದೇ ಈ ಪೈಕಿ ಅವಕಾಶ ವಂಚಿತ ಪರಿಶಿಷ್ಟ ಜಾತಿಗೆ ಶೇ.10ರಷ್ಟು ಮೀಸಲಾತಿ ನೀಡಲಾಗುವುದು ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯ ಬಳಿಕ ಈ ನಿಯಮವನ್ನು ಜಾರಿ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆ ಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಚುನಾವಣೆ ಘೋಷಣೆಯ ಬಗ್ಗೆ ಮಾತನಾಡಿ, ಬಿಜೆಪಿ ಚುನಾವಣೆಗೆ ಸಿದ್ಧವಾಗಿದ್ದು, ಸತತ 3ನೇ ಬಾರಿ ಅಧಿಕಾರಕ್ಕೇರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಹರಿಯಾಣದಲ್ಲಿ ಅತಂತ್ರ ವಿಧಾನಸಭೆ: ಟೈಮ್ಸ್ ನೌ, ಮ್ಯಾಟ್ರೈಜ್ ಸಮೀಕ್ಷೆ
ಹರಿಯಾಣದಲ್ಲಿ ವಿಧಾನಸಭೆ ಚುನಾ ವಣೆ ಘೋಷಣೆಯಾಗುತ್ತಿದ್ದಂತೆ ಟೈಮ್ಸ್ ನೌ ಹಾಗೂ ಮ್ಯಾಟ್ರೈಜ್ ಸಮೀಕ್ಷೆ ನಡೆಸಿದ್ದು, ರಾಜ್ಯದಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂದು ಭವಿಷ್ಯ ನುಡಿದಿದೆ.
ಬಿಜೆಪಿ ಹಾಗೂ ಮಿತ್ರಪಕ್ಷಗಳು 37-42 ಸ್ಥಾನಗಳಲ್ಲಿ, ಕಾಂಗ್ರೆಸ್ 33-38, ಜೆಜೆಪಿ 3-8 ಹಾಗೂ ಇತರರು 7-12 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ತಿಳಿಸಿದೆ. 90 ಕ್ಷೇತ್ರಗಳನ್ನು ಹೊಂದಿರುವ ರಾಜ್ಯದಲ್ಲಿ ಬಹುಮತಕ್ಕೆ 45 ಸ್ಥಾನಗಳ ಆವಶ್ಯಕತೆ ಇದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 41 ಸ್ಥಾನ ಹಾಗೂ ಮಿತ್ರಪಕ್ಷಗಳು ಸೇರಿ 43 ಸ್ಥಾನಗಳನ್ನು ಗೆದ್ದುಕೊಂಡಿತ್ತು.
ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು 32 ಸ್ಥಾನಗಳನ್ನು ತಮ್ಮದಾಗಿಸಿಕೊಂಡಿದ್ದವು. ರಾಜಕೀಯ ಬಿಕ್ಕಟ್ಟುಗಳ ನಡುವೆಯೂ ಬಿಜೆಪಿ 5 ವರ್ಷ ಆಡಳಿತ ನಡೆಸುವಲ್ಲಿ ಯಶಸ್ವಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.