Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸತತ 3ನೇ ಅವಧಿಗೆ ಒಂದೇ ಪಕ್ಷ ಅಧಿಕಾರಕ್ಕೇರಿದೆ, ಬಿಜೆಪಿ ಕೇಂದ್ರ ಕಚೇರಿ ಬಳಿ ಸಂಭ್ರಮಾಚರಣೆ

Team Udayavani, Oct 9, 2024, 8:00 AM IST

BJP-Head

ಹೊಸದಿಲ್ಲಿ: ನವರಾತ್ರಿಯ 6ನೇ ದಿನ ದೇವಿ ಕಾತ್ಯಾಯಿನಿಯ ಕೈಯಲ್ಲಿರುವ ಕಮಲ ಅರಳಿದೆ! ಹರ್ಯಾಣದ ಗೆಲುವಿನ ರೂಪದಲ್ಲಿ ದೇವಿಯ ಆಶೀರ್ವಾದ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹರ್ಷವ್ಯಕ್ತಪಡಿಸಿದ್ದಾರೆ.

ಸತತ ಮೂರನೇ ಬಾರಿಗೆ ರಾಜ್ಯದಲ್ಲಿ ಸರಕಾರ ಸ್ಥಾಪಿಸಲು ನೆರವಾಗಿದ್ದಕ್ಕಾಗಿ ರಾಜ್ಯದ ಜನತೆಗೆ ಧನ್ಯವಾದ ಅರ್ಪಿಸಿರುವ ಮೋದಿ, ಜಮ್ಮು ಕಾಶ್ಮೀರದಲ್ಲೂ ಬಿಜೆಪಿ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಬಹುನಿರೀಕ್ಷಿತ ಹರ್ಯಾಣ ಫಲಿತಾಂಶ ಹೊರಬೀಳುತ್ತಿದ್ದಂತೆ ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿ ಬಳಿ ಜನರನ್ನುದ್ದೇಶಿಸಿ ಪ್ರಧಾನಿ ವಿಜಯದ ಭಾಷಣ ಮಾಡಿದ್ದಾರೆ.

ಹರ್ಯಾಣದಲ್ಲಿ ಅಭಿವೃದ್ಧಿಯ ಗ್ಯಾರಂಟಿಗಳು ಸುಳ್ಳಿನ ಕಂತೆಯನ್ನು ನೆಲಕಚ್ಚಿಸಿವೆ. ಇದು ಪ್ರಜಾಪ್ರಭುತಕ್ಕೆ ಸಂದ ಜಯ. ಹರ್ಯಾಣ ರಚನೆಯಾದಾಗಿನಿಂದಲೂ ಜನರು ಸರಕಾರಗಳನ್ನು ಬದಲಿಸುತ್ತಾ ಬಂದಿದ್ದಾರೆ. ಆದರೆ ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸತತ 3ನೇ ಅವಧಿಗೆ ಒಂದೇ ಪಕ್ಷ ಅಧಿಕಾರಕ್ಕೇರಿದೆ. ಇದು ಜನರು ನಮ್ಮ ಮೇಲಿಟ್ಟಿರುವ ನಂಬಿಕೆಯ ಪ್ರತೀಕವಾಗಿದೆ ಎಂದಿದ್ದಾರೆ.

ಇದೇ ವೇಳೆ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದು ಸಮಾಜವನ್ನು ವಿಭಜಿಸಿ ಆರಾಜಕತೆ ತರಲು ಕಾಂಗ್ರೆಸ್‌ ಪ್ರಯತ್ನಗಳನ್ನು ಮಾಡಿದೆ. ರೈತರನ್ನು ಕೆರಳಿಸಿ, ಪ್ರಚೋದಿಸಿ ಬೆಂಕಿ ಹೊತ್ತಿಸಲು ಹೇಗೆಲ್ಲಾ ಪ್ರಯತ್ನಿಸಲಾಯಿತು ಎಂಬುದನ್ನು ಇಡೀ ದೇಶ ನೋಡಿದೆ. ರೈತರನ್ನು ಎತ್ತಿಕಟ್ಟಲು ನೋಡಿದ, ಪಿತೂರಿಗಳನ್ನು ಮಾಡಿದ ಕಾಂಗ್ರೆಸ್‌ಗೆ ಹರ್ಯಾಣ ರೈತರು ತಕ್ಕ ತಿರುಗೇಟು ನೀಡಿದ್ದಾರೆ ಎಂದು ಮೋದಿ ಹೇಳಿದ್ದಾರೆ. ಇದೇ ವೇಳೆ ಕಾಶ್ಮೀರದ ಕಾರ್ಯಕರ್ತರಿಗೂ ಧನ್ಯವಾದ ಸಲ್ಲಿಸಿ, ನ್ಯಾಶನಲ್‌ ಕಾನ್ಫರೆನ್ಸ್‌ ಪಕ್ಷದ ಅಭೂತಪೂರ್ವ ಪ್ರದರ್ಶನವನ್ನೂ ಶ್ಲಾಘಿಸಿದ್ದಾರೆ.


ಡೋಲು, ನೃತ್ಯದೊಂದಿಗೆ ಲಡ್ಡು ಹಂಚಿಕೆ
ಹರ್ಯಾಣದಲ್ಲಿ ಬಿಜೆಪಿ ಮೂರನೇ ಬಾರಿಗೆ ಗೆದ್ದು, ಹ್ಯಾಟ್ರಿಕ್‌ ಸಾಧಿಸುತ್ತಿದ್ದಂತೆ ದೇಶಾದ್ಯಂತ ಕೇಸರಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಹರ್ಯಾಣದಲ್ಲಿ ಕಳೆದ ಬಾರಿಗಿಂತಲೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಪಡೆದಿದ್ದು, ಜಮ್ಮು-ಕಾಶ್ಮೀರದಲ್ಲಿ ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಗೆಲುವನ್ನು ದೇಶಾದ್ಯಂತ ಬಿಜೆಪಿ ನಾಯಕರು ಸಿಹಿ ಹಂಚುವ ಮೂಲಕ ಆಚರಿಸಿದ್ದಾರೆ.

ದಿಲ್ಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದು ಪ್ರಧಾನಿ ಮೋದಿಯೂ ಇಲ್ಲಿ ಭಾಗಿಯಾಗಿದ್ದಾರೆ. ಇನ್ನು ಕರ್ನಾಟಕ, ಪಂಜಾಬ್‌ ಸೇರಿದಂತೆ ಎಲ್ಲ ರಾಜ್ಯಗಳಲ್ಲೂ ಸಿಹಿ ಹಂಚಿದ ಬಿಜೆಪಿ ಕಾರ್ಯಕರ್ತರು ಗೆಲುವನ್ನು ಸಂಭ್ರಮಿಸಿದ್ದಾರೆ. ಚಂಡೀಗಢದಲ್ಲಿರುವ ಪಂಜಾಬ್‌ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಡೋಲು, ಸಂಗೀತ-ನೃತ್ಯದೊಂದಿಗೆ ಲಡ್ಡು ಹಂಚಿ ಸಂಭ್ರಮಿಸಲಾಗಿದೆ. ಬಹುತೇಕ ರಾಜ್ಯಗಳ ಪ್ರಧಾನ ಕಚೇರಿಗಳಲ್ಲಿ ಪಕ್ಷದ ಪ್ರಮುಖ ನಾಯಕರೆಲ್ಲ ಸೇರಿ ಗೆಲುವನ್ನು ಆಚರಿಸಿದ್ದಾರೆ.

ಟಾಪ್ ನ್ಯೂಸ್

pramod madhwaraj

Ex-minister, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Rishab-Shetty

National Film Award: ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ

Haryana-JK Election: Exit poll failed in both states!

Haryana-JK Election: ಎರಡೂ ರಾಜ್ಯಗಳಲ್ಲಿ ಎಕ್ಸಿಟ್‌ ಪೋಲ್‌ ಫೇಲ್‌!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

pramod madhwaraj

Ex-minister, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

1-koppala

Koppala: ಉದ್ಯಮಿ ಅರ್ಜುನ್ ಸಾ ಕಾಟ್ವಾ ಶವ ಪತ್ತೆ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

Arif Khan

Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ

Omar Abdulla

Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.