Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

ಮನೆ ಬಾಗಿಲಿಗೇ ಆರೋಗ್ಯ ಸೇವೆ, ಕೋಲಾರದಲ್ಲಿ ಜಾರಿ, ಮಧುಮೇಹ, ರಕ್ತದೊತ್ತಡ ರೋಗಿಗಳಿಗೆ ಉಚಿತ ಔಷಧ ವಿತರಣೆ

Team Udayavani, Oct 24, 2024, 7:45 AM IST

Dinesh-gundurao

ಬೆಂಗಳೂರು: ಗ್ರಾಮೀಣ ಭಾಗದವರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಹಾಗೂ ಅಸಾಂಕ್ರಾಮಿಕ ರೋಗಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಗುರುವಾರ “ಗೃಹ ಆರೋಗ್ಯ’ ಯೋಜನೆಗೆ ಬೆಂಗಳೂರಿನಲ್ಲಿ ಚಾಲನೆ ನೀಡಲಿದೆ.

ಗೃಹ ಆರೋಗ್ಯ ಯೋಜನೆಯು ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಗೊಂಡು, ಜನವರಿ ಅಂತ್ಯದೊಳಗೆ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಕರ್ನಾಟಕದಲ್ಲಿ ಶೇ. 26.9ರಷ್ಟು ಮಂದಿ ಅಧಿಕ ರಕ್ತದೊತ್ತಡ, ಶೇ. 15.6ರಷ್ಟು ಮಂದಿ ಮಧುಮೇಹದಿಂದ ಬಳಲುತ್ತಿದ್ದಾರೆ. ಇದರಿಂದ ಉಂಟಾಗುತ್ತಿರುವ ಮರಣ ಹಾಗೂ ಅನಾರೋಗ್ಯ ತೊಡಕುಗಳನ್ನು ತಡೆಗಟ್ಟಲು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುತ್ತಿದ್ದಾರೆ. ಯೋಜನೆಯ ಭಾಗವಾಗಿ ಗ್ರಾಮೀಣ ಭಾಗ ಜನರ ಮನೆ ಬಾಗಿಲಿಗೆ ಸಮುದಾಯ ಆರೋಗ್ಯ ಕೇಂದ್ರ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರ ತಂಡ ತೆರಳಿ ತಪಾ ಸಣೆ ನಡೆಸಲಿದೆ.

ಮೊದಲ ಹಂತದ ತಪಾಸಣೆ
ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಮೊದಲ ಹಂತದಲ್ಲಿ ಗ್ರಾಮೀಣ ಭಾಗದ ಪ್ರತೀ ಮನೆಗೆ ಭೇಟಿ ನೀಡಲಿದ್ದಾರೆ. ಪ್ರತೀ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ದಿನಕ್ಕೆ ತಲಾ 15 ಮನೆಗಳಂತೆ ಭೇಟಿ ನೀಡಿ ತಪಾಸಣೆ ನಡೆಸಲಿದ್ದಾರೆ. ಈ ವೇಳೆ ಅಧಿಕ ರಕ್ತದೊತ್ತಡ (ಬಿಪಿ) ಹಾಗೂ ಮಧುಮೇಹ (ಡಯಾಬಿಟೀಸ್‌)ದಿಂದ ಬಳಲುವವರು ಮತ್ತು ಇತರರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಜತೆಗೆ ಮಾನಸಿಕ ಆರೋಗ್ಯ, ಸ್ತನ, ಬಾಯಿ ಹಾಗೂ ಗರ್ಭಕಂಠದ ಕ್ಯಾನ್ಸರ್‌ ತಪಾಸಣೆ ಮಾಡಲಾಗುತ್ತದೆ.

ಕನಿಷ್ಠ ಮೂರು ತಿಂಗಳು
ರಾಜ್ಯ ಗ್ರಾಮೀಣ ಭಾಗದಲ್ಲಿ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲು ಕನಿಷ್ಠ 3 ತಿಂಗಳು ಬೇಕಾಗುತ್ತದೆ. ಪ್ರಸ್ತುತ ರಾಜ್ಯದಲ್ಲಿ ಶೇ. 11.5ರಷ್ಟು ಮಂದಿ ಬಾಯಿ, ಶೇ. 26ರಷ್ಟು ಸ್ತನ ಹಾಗೂ ಶೇ. 18.3ರಷ್ಟು ಜನರು ಗರ್ಭ ಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಈ ರೋಗಗಳಿಗೂ ಪರಿಹಾರ ಒದಗಿಸಲು ಗೃಹ ಆರೋಗ್ಯ ಯೋಜನೆಯಲ್ಲಿ ರೂಪುರೇಷೆ ಸಿದ್ಧಪಡಿಸಲಾಗಿದೆ.

ಉಚಿತ ಔಷಧ ಕಿಟ್‌
ರಕ್ತದೊತ್ತಡ ಹಾಗೂ ಮಧುಮೇಹ ಸ್ಕ್ರೀನಿಂಗ್‌ ವೇಳೆ ಅಗತ್ಯವಿದ್ದವರಿಗೆ ವೈದ್ಯರ ಮೇಲ್ವಿಚಾರಣೆಯಲ್ಲಿ ಔಷಧವನ್ನು ಬದಲಾಯಿಸಲಾಗುತ್ತದೆ. ಅವರಿಗೆ ಒಂದು ತಿಂಗಳ ಅವಧಿಗೆ ಅಗತ್ಯವಿರುವ ಮಾತ್ರೆಗಳ ಕಿಟ್‌ ಪೂರೈಸಲಾಗುತ್ತದೆ. ಈ ಮಾಹಿತಿಯನ್ನು ಎನ್‌ಸಿಡಿ ಆ್ಯಪ್‌ನಲ್ಲಿ ಭರ್ತಿ ಮಾಡಲಾಗುತ್ತದೆ. ಕ್ಯಾನ್ಸರ್‌ ಹಾಗೂ ಇತರ ಕಾಯಿಲೆಗಳ ತಪಾಸಣೆ ವೇಳೆ ಅಪಾಯದ ಮುನ್ಸೂಚನೆ ಅಥವಾ ಲಕ್ಷಣಗಳು ವರದಿಯಾದರೆ ತತ್‌ಕ್ಷಣ ಟೆಲಿ ಕಾಲ್‌ ಮೂಲಕ ವೈದ್ಯರ ಅಭಿಪ್ರಾಯ ಪಡೆದು, ಹೆಚ್ಚಿನ ತಪಾಸಣೆಗಾಗಿ ಸಮೀಪದ ಆಯುಷ್ಮಾನ್‌ ಆರೋಗ್ಯ ಮಂದಿರಕ್ಕೆ (ಹಿಂದಿನ ಉಪ ಆರೋಗ್ಯ ಕೇಂದ್ರ) ಶಿಫಾರಸು ಮಾಡಲಾಗುತ್ತದೆ.

ಇಂದು ಚಾಲನೆ
ಗೃಹ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅ. 24ರಂದು ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಸಂಜೆ 4ಕ್ಕೆ ಚಾಲನೆ ನೀಡಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌, ಸಭಾಪತಿ ಬಸವರಾಜ್‌ ಹೊರಟ್ಟಿ, ಸ್ಪೀಕರ್‌ ಯು.ಟಿ. ಖಾದರ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮತ್ತಿತರ ಸಚಿವರು ಭಾಗವಹಿಸಲಿದ್ದಾರೆ.

“ಗ್ರಾಮೀಣ ಭಾಗದ ಜನರು ರಕ್ತದೊತ್ತಡ, ಮಧುಮೇಹ ರೋಗಗಳ ತಪಾಸಣೆ ವಿಚಾರದಲ್ಲಿ ನಿರ್ಲ ಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಈಗ ಆರೋಗ್ಯ ಇಲಾಖೆಯನ್ನು ಜನರ ಮನೆ ಬಳಿಗೆ ಕಳುಹಿಸುತ್ತಿದ್ದೇವೆ. ಪ್ರಾರಂಭಿಕ ಹಂತದಲ್ಲಿ ರಕ್ತದೊತ್ತಡ, ಮಧುಮೇಹವನ್ನು ಜನರು ನಿರ್ಲಕ್ಷಿಸಿದರೆ ದೀರ್ಘಾವಧಿಯಲ್ಲಿ ಕಿಡ್ನಿ ವೈಫಲ್ಯ, ಹೃದಯಾಘಾತಗಳಿಗೆ ಕಾರಣವಾಗುತ್ತದೆ. ಗೃಹ ಆರೋಗ್ಯದ ಮುಖಾಂತರ ನಾವು ಈಗಲೇ ತಪಾಸಣೆ ನಡೆಸಿ ಔಷಧಗಳನ್ನು ಕೊಟ್ಟರೆ ಮುಂದೆ ಆಗುವ ಪ್ರಾಣಾಪಾಯಗಳನ್ನು ತಡೆಗಟ್ಟಬಹುದಾಗಿದೆ.” -ದಿನೇಶ್‌ ಗುಂಡೂರಾವ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000ಗ್ರಾಮಗಳು

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Nikhil

Chennapattana By Poll: ಕಣಕ್ಕೆ ನಿಖಿಲ್‌, ಜಯಮುತ್ತು? ಇನ್ನೂ ಗೊಂದಲದಲ್ಲಿ ಜೆಡಿಎಸ್‌

Bengaluru: ಕಂಬಳ ಆಯೋಜನೆ; ನ. 5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

Bengaluru: ಕಂಬಳ ಆಯೋಜನೆ; ನ. 5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

Exclusive Interview: ನಾನೇ ಕಟ್ಟಿದ ಮನೆಯಲ್ಲಿ ಇರಲಾಗಲಿಲ್ಲ: ಯೋಗೇಶ್ವರ್‌

Exclusive Interview: ನಾನೇ ಕಟ್ಟಿದ ಮನೆಯಲ್ಲಿ ಇರಲಾಗಲಿಲ್ಲ: ಯೋಗೇಶ್ವರ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.