Hearing of cases: ಪೊಲೀಸ್‌ ಇಲಾಖಾ ವಿಚಾರಣೆ ನಿವೃತ್ತ ನ್ಯಾಯಾಧೀಶರ ಹೆಗಲಿಗೆ!

ವಿಚಾರಣೆಗೆ 135 ನಿವೃತ್ತ ನ್ಯಾಯಾಧೀಶರ ಪಟ್ಟಿ ಬಿಡುಗಡೆ, ಮೇಲಧಿಕಾರಿಗಳ ಹೆಚ್ಚುವರಿ ಭಾರ ಇಳಿಸಲು ಮುಂದಾದ ಗೃಹ ಇಲಾಖೆ

Team Udayavani, Sep 2, 2024, 7:35 AM IST

Police

ಬೆಂಗಳೂರು: ಶಿಸ್ತಿನ ಇಲಾಖೆ ಎಂದೇ ಹೆಸರಾದ ಪೊಲೀಸ್‌ ಇಲಾಖೆಯಲ್ಲಿ “ಇಲಾಖಾ ವಿಚಾರಣೆ’ ಎಂಬ ಹೆಚ್ಚುವರಿ ಭಾರದಿಂದ ಮೇಲಧಿಕಾರಿಗಳಿಗೆ ಮುಕ್ತಿ ನೀಡಲು ಮುಂದಾಗಿರುವ ಗೃಹ ಇಲಾಖೆ, ಅದಕ್ಕಾಗಿ ನಿವೃತ್ತ ನ್ಯಾಯಾಧೀಶರ ಸೇವೆ ಪಡೆದುಕೊಳ್ಳಲು ಮುಂದಾಗಿದೆ.

ಇನ್ನು ಮುಂದೆ ಪೊಲೀಸ್‌ ಇಲಾಖೆಯಲ್ಲಿ ಯಾವುದೇ ಅಕ್ರಮಗಳು, ಕರ್ತವ್ಯ ಲೋಪ, ಭ್ರಷ್ಟಾಚಾರ, ಮೇಲಧಿಕಾರಿಗಳಿಂದ ಕಿರುಕುಳ ಇತ್ಯಾದಿ ಇಲಾಖಾ ವಿಚಾರಣೆಯ ವ್ಯಾಪ್ತಿಗೊಳಪಡುವ ಪ್ರಕರಣಗಳ ವಿಚಾರಣೆಯ ಜವಾಬ್ದಾರಿ ನಿವೃತ್ತ ನ್ಯಾಯಾಧೀಶರ ಹೆಗಲಿಗೆ ಬೀಳಲಿದೆ. ಈ ಮೂಲಕ ಪೊಲೀಸ್‌ ಮೇಲಧಿಕಾರಿಗಳಿಗಿದ್ದ ಇಲಾಖಾ ವಿಚಾರಣೆಯ ಹೊರೆ ತಪ್ಪಿದಂತಾಗಿದೆ.

ರಾಜ್ಯ ಸರಕಾರವು ಇಲಾಖಾ ವಿಚಾರಣೆಗಳಲ್ಲಿ ಕರ್ತವ್ಯ ನಿರತ ಅಧಿಕಾರಿಗಳನ್ನು ವಿಚಾರಣಾಧಿಕಾರಿ ಯಾಗಿ ನೇಮಕ ಮಾಡುವು ದರಿಂದ ಅವರು ದಿನ ನಿತ್ಯದ ಕರ್ತವ್ಯದ ಜತೆಗೆ ಅಪರಾಧ, ಕಾನೂನು ಸುವ್ಯವಸ್ಥೆ, ತನಿಖೆ, ಮೇಲ್ವಿಚಾರಣೆ ಮತ್ತು ಇತರ ಕರ್ತವ್ಯಗಳಿಗೆ ಅಡಚಣೆ ಉಂಟಾಗುತ್ತಿತ್ತು. ಜತೆಗೆ ಆದೇಶಿಸಲಾದ ಇಲಾಖಾ ವಿಚಾ ರಣೆಗಳು ಸಹ ತ್ವರಿತವಾಗಿ ಪೂರ್ಣಗೊಳ್ಳುತ್ತಿರಲಿಲ್ಲ. ಇದನ್ನು ಮನಗಂಡಿದ್ದ ಸರ್ಕಾರವು ನಿವೃತ್ತ ನ್ಯಾಯಾಧೀಶರನ್ನು ವಿಚಾರ ಣಾಧಿಕಾರಿಯಾಗಿ ನೇಮಿಸಿಕೊಳ್ಳಲು ಪೊಲೀಸ್‌ ಇಲಾಖೆಗೆ ಅವಕಾಶ ಕಲ್ಪಿಸಿಕೊಟ್ಟಿದೆ.

ಜತೆಗೆ ಇಲಾಖಾ ವಿಚಾರಣೆಗೆ ಸಮ್ಮತಿಸಿದ 135 ನಿವೃತ್ತ ನ್ಯಾಯಾ ಧೀಶರ ಪಟ್ಟಿಯನ್ನು ಸಹ ಪ್ರಕಟಿಸಿದ್ದು ಶಿಸ್ತು ಪ್ರಾಧಿಕಾರವು ಕಾನೂನು ಇಲಾಖೆಯು ಸೂಚಿಸಿರುವ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಲು ಇಚ್ಚಿಸಿದ್ದಲ್ಲಿ ಈ ಬಗ್ಗೆ ಆದೇಶ ಹೊರಡಿಸಿ ನೇಮಕ ಮಾಡಿಕೊಳ್ಳಲು ಪೊಲೀಸ್‌ ಇಲಾಖೆಗೆ ಸ್ಪಷ್ಟಿಕರಣವನ್ನೂ ನೀಡಿದೆ.

ಇದೀಗ ಸೇವೆ ಸಲ್ಲಿಸಲು ಇಚ್ಛೆ ವ್ಯಕ್ತಪಡಿಸಿರುವ ನಿವೃತ್ತ ನ್ಯಾಯಾಧೀಶರ ಹೆಸರುಗಳನ್ನು ಪೊಲೀಸ್‌ ವಲಯವಾರು ಪ್ರಕಟಿಸಲಾಗಿದೆ. ಅದರಂತೆ, ತಮ್ಮ ಘಟಕಗಳಲ್ಲಿ ಆದೇಶಿಸಲಾಗುವ ಇಲಾಖಾ ವಿಚಾರಣೆಗಳಲ್ಲಿ ನಿವೃತ್ತ ನ್ಯಾಯಾಧೀಶರನ್ನು ವಿಚಾರಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಿ ಕೊಳ್ಳುವಂತೆ ಎಲ್ಲ ಘಟಕಾಧಿಕಾರಿಗಳಿಗೆ ಡಿಜಿಪಿ ಕಚೇರಿಯಿಂದ ಹಿಂಬರಹ ಹೊರಡಿಸಲಾಗಿದೆ.

ಹೇಗಿರಲಿದೆ ಇಲಾಖಾ ವಿಚಾರಣೆ?
ಪೊಲೀಸ್‌ ಇಲಾಖೆಯಲ್ಲಿ ಇದುವರೆಗೆ ಕಾನ್‌ಸ್ಟೆಬಲ್‌, ಎಎಸ್‌ಐ, ಪಿಎಸ್‌ಐ, ಇನ್‌ಸ್ಪೆಕ್ಟರ್‌ಗಳ ವಿರುದ್ಧ ಆರೋಪಗಳು ಕೇಳಿಬಂದರೆ ಎಸಿಪಿ ಮಟ್ಟದ ಅಧಿಕಾರಿಗಳು ಇಲಾಖಾ ವಿಚಾರಣೆ ನಡೆಸಿ ಪೊಲೀಸ್‌ ಆಯುಕ್ತರು ಅಥವಾ ಎಸ್‌.ಪಿ. ಹಂತದ ಅಧಿಕಾರಿಗಳಿಗೆ ವರದಿ ನೀಡುತ್ತಿದ್ದರು.

ಇನ್ನು ಎಸ್‌.ಪಿ. ಮಟ್ಟದ ಐಪಿಎಸ್‌ ಅಧಿಕಾರಿಗಳ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಐಜಿಪಿ, ಎಡಿಜಿಪಿ ಹಾಗೂ ಅದರಿಂದ ಮೇಲ್ಪಟ್ಟ ರ್‍ಯಾಂಕ್‌ನ ಅಧಿಕಾರಿಗಳು ಇಲಾಖಾ ವಿಚಾರಣೆ ನಡೆಸಿ ಅವರ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತಿದ್ದರು. ಇದೀಗ ಪೊಲೀಸ್‌ ಇಲಾಖೆಯ ಎಲ್ಲ ಹಂತದ ಸಿಬಂದಿ ಅಥವಾ ಅಧಿಕಾರಿಗಳ ವಿರುದ್ಧದ ಪ್ರಕರಣಗಳ ಇಲಾಖಾ ವಿಚಾರಣೆಯನ್ನು ನಿಯೋಜಿತ ನಿವೃತ್ತ ನ್ಯಾಯಾಧೀಶರೇ ನಿರ್ವಹಿಸಲಿದ್ದಾರೆ.

ವಿಚಾರಣಾಧಿಕಾರಿಗಳಾಗಿ ನಿವೃತ್ತ ನ್ಯಾಯಾಧೀಶರು ಪೊಲೀಸ್‌ ಆಧಿಕಾರಿ ಅಥವಾ ಸಿಬಂದಿಯ ಖುದ್ದು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡು ವರದಿ ತಯಾರಿಸಿ ಅವರ ಮೇಲಧಿಕಾರಿಗಳಿಗೆ ಸಲ್ಲಿಸಲಿದ್ದಾರೆ. ಇದರ ಆಧಾರದ ಮೇಲೆ ಆರೋಪಿತ ಪೊಲೀಸ್‌ ಸಿಬಂದಿಯ ಭವಿಷ್ಯ ನಿರ್ಧಾರವಾಗಲಿದೆ.

ವರ್ಷದಲ್ಲಿ ನೂರಾರು ವಿಚಾರಣೆ
ಶಿಸ್ತಿನ ಇಲಾಖೆ ಎಂದು ಗುರುತಿಸಿಕೊಂಡಿರುವ ಪೊಲೀಸ್‌ ಇಲಾಖೆಯ ಅಧಿಕಾರಿ, ಸಿಬಂದಿಗಳ ಮೇಲೆ ಭ್ರಷ್ಟಾಚಾರ, ಕರ್ತವ್ಯ ಲೋಪ, ದುರ್ನಡತೆಯ ಆರೋಪಗಳು ಹೆಚ್ಚಾಗುತ್ತಿದೆ. ಕಳೆದ 1 ವರ್ಷಗಳಲ್ಲಿ ಕರ್ನಾಟಕದಲ್ಲಿ ಸುಮಾರು 80ಕ್ಕೂ ಹೆಚ್ಚಿನ ಪೊಲೀಸ್‌ ಸಿಬಂದಿ ವಿರುದ್ಧ ಇಲಾಖಾ ವಿಚಾರಣೆ ನಡೆದಿರುವುದು ಮೇಲಿನ ಅಂಶಗಳಿಗೆ ಪುಷ್ಠಿ ನೀಡುತ್ತದೆ. ಈ ಪೈಕಿ ಕೆಲವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

“ಪೊಲೀಸ್‌ ಇಲಾಖೆಯಲ್ಲಿ ಇನ್ನು ಮುಂದೆ ನಿವೃತ್ತ ನ್ಯಾಯಾಧೀಶರು ವಿಚಾರಣಾಧಿಕಾರಿಯಾಗಿ ಇಲಾಖಾ ವಿಚಾರಣೆ ನಡೆಸಲಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿಗಳಿಗೆ ಇತರ ಪ್ರಕರಣಗಳ ನಡುವೆ ಇಲಾಖಾ ವಿಚಾರಣೆ ನಡೆಸುವುದು ಹೊರೆಯಾಗಬಾರದು ಎಂಬ ಕಾರಣಕ್ಕೆ ಈ ವ್ಯವಸ್ಥೆ ಜಾರಿಗೆ ತರಲಾಗಿದೆ.”
– ಕಲಾ ಕೃಷ್ಣಸ್ವಾಮಿ, ಎಐಜಿಪಿ (ಆಡಳಿತ), ರಾಜ್ಯ ಪೊಲೀಸ್‌ ಇಲಾಖೆ

-ಅವಿನಾಶ್‌ ಮೂಡಂಬಿಕಾನ 

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.