Heat Wave: ರಾಜ್ಯ ರಾಜಧಾನಿ ಸೇರಿ ಹಲವು ಜಿಲ್ಲೆಗಳಲ್ಲಿ ಅಧಿಕ ತಾಪಮಾನ!
ಬಿಸಿಲ ಬೇಗೆಗೆ ಜನ ತತ್ತರ, ಹಾಸನದಲ್ಲಿ ರಾಜ್ಯದಲ್ಲೇ ಅತ್ಯಧಿಕ 4.8 ಡಿಗ್ರಿ ಸೆಲ್ಸಿಯಸ್ ಹೆಚ್ಚುವರಿ ಗರಿಷ್ಠ ಉಷ್ಣಾಂಶ ದಾಖಲು
Team Udayavani, Oct 2, 2024, 7:35 AM IST
ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ಕರ್ನಾಟಕದ ಮುಕ್ಕಾಲು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ ಏರಿಕೆಯಾಗಿದ್ದು ಬೇಗೆಗೆ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ.
ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಬೇಗೆಯ ವಾತಾವರಣ ಉಂಟಾಗಿದ್ದು ಗಾಳಿಯಲ್ಲೂ ನೀರಿನ ತೇವಾಂಶವಿಲ್ಲದೆ ಕೆಲವೆಡೆ ಬಿಸಿ ಗಾಳಿ ಬೀಸಲಾರಂಭಿಸಿವೆ. ಬೆಂಗಳೂರಿನಲ್ಲಿ ಮಂಗಳವಾರ ಗರಿಷ್ಠ ಉಷ್ಣಾಂಶ 32 ಡಿ.ಸೆ. ದಾಖಲಾಗಿದ್ದು ಇದು ವಾಡಿಕೆಗಿಂತ 3.2 ಡಿ.ಸೆ. ಹೆಚ್ಚಿನ ತಾಪಮಾನವಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಾಡಿಕೆಗಿಂತ 3.1 ಡಿ.ಸೆ. ಹೆಚ್ಚಿನ ತಾಪಮಾನ ಉಂಟಾಗಿದೆ.
ಹಾಸನದಲ್ಲಿ ರಾಜ್ಯದಲ್ಲೇ ಗರಿಷ್ಠ 4.8 ಡಿ.ಸೆ ಹೆಚ್ಚುವರಿ ಗರಿಷ್ಠ ಉಷ್ಣಾಂಶ ಕಂಡು ಬಂದಿದೆ. ಇದಲ್ಲದೆ ಹಾವೇರಿ 4.4, ಬಾಗಲಕೋಟೆ 5.1, ಮಂಗಳೂರು 2.3, ಮೈಸೂರು 2.5, ಮಂಡ್ಯ 2.4, ಕೊಪ್ಪಳ 2, ಧಾರವಾಡ 2.2 ಡಿ.ಸೆ. ವಾಡಿಕೆಗಿಂತ ಹೆಚ್ಚಿನ ಗರಿಷ್ಠ ತಾಪಮಾನವು ಉಂಟಾಗಿದೆ ಎಂದು ಐಎಂಡಿ ಪ್ರಕಟಿಸಿದೆ.
ನೀರಿನ ಕೊರತೆಯಿಂದ ಭೂಮಿಯಲ್ಲಿ ತೇವಾಂಶದ ಪ್ರಮಾಣ ಕಡಿಮೆಯಾಗಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ಉಂಟಾಗಿದೆ. ಮಳೆಯಾದರೆ ತಾಪಮಾನ ಕೊಂಚ ಇಳಿಕೆಯಾಗಲಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಾಪಮಾನವು ಇನ್ನಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನುತ್ತಾರೆ ಹವಾಮಾನ ತಜ್ಞರು.
ಟ್ರಫ್ ಹಿನ್ನೆಲೆಯಲ್ಲಿ ಹಗುರ ಮಳೆ
ಕರ್ನಾಟಕ ಒಳನಾಡಿನಲ್ಲಿ ಟ್ರಫ್ 0.9 ಕಿ.ಮೀ ಎತ್ತರದಲ್ಲಿ ಟ್ರಫ್ಯಿದ್ದು ಇದರ ಪ್ರಭಾವದಿಂದ ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅ. 7ರ ವರಗೆ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಹೆಚ್ಚಿನ ಸಾಧ್ಯತೆ. ಮುಂದಿನ 5 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶ 34 ಡಿ.ಸೆ. ವರೆಗೆ ಏರಿಕೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 31 ಡಿ.ಸೆ. ದಾಖಲಾಗುವ ಸಾಧ್ಯತೆಗಳಿವೆ ಎಂದು ಐಎಂಡಿ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Recruitment Test: ಪಿಎಸ್ಐ ಪರೀಕ್ಷೆ ಅಕ್ರಮ ತಡೆಗೆ ಇಎನ್ಟಿ ವೈದ್ಯರ ನಿಯೋಜನೆ!
D Notification: ಮುಡಾಕ್ಕಿಂತ ದೊಡ್ಡ ಅಕ್ರಮ ಎಸಗಿದ್ದಾರೆ ಸಿಎಂ: ಕೇಂದ್ರ ಸಚಿವ ಎಚ್ಡಿಕೆ
MUDA Case: ಲೋಕಾಯುಕ್ತದಿಂದ ಕೆಸರೆ ಗ್ರಾಮದ ವಿವಾದಿತ ಸ್ಥಳದಲ್ಲಿ ಮಹಜರು
Western Ghat: ಡಾ.ಕಸ್ತೂರಿ ರಂಗನ್ ವರದಿ ತಿರಸ್ಕಾರ: ನಿರ್ಣಯ ಕೇಂದ್ರ ಸರಕಾರಕ್ಕೆ ರವಾನೆ
MUDA Case: ಯಾವುದೇ ಕ್ಷಣ ಇ.ಡಿ. ದಾಳಿ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು
Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ
Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್ಗೆ ಅಮೆರಿಕ ಎಚ್ಚರಿಕೆ
Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್ ಟಿಕೆಟ್ ದರ ಬಲು ದುಬಾರಿ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.