Heavy Rain: ನಿರಂತರ ಮಳೆಗೆ ಸೈದೂರು, ಕಾನ್ಲೆಯಲ್ಲಿ ಕೃಷಿ ಜಮೀನು ಜಲಾವೃತ 

ಮಳೆ ಹಾನಿ ಪ್ರದೇಶಗಳಿಗೆ ಸಂಸದ ಬಿ.ವೈ.ರಾಘವೇಂದ್ರ, ಕುಮಾರ್‌ ಬಂಗಾರಪ್ಪ ಭೇಟಿ

Team Udayavani, Jul 18, 2024, 6:21 PM IST

BY-Raghavendra

ಸಾಗರ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ತಾಲೂಕಿನ ಹಳ್ಳ-ಕೊಳ್ಳಗಳು ತುಂಬಿ ಪ್ರವಾಹ ಸೃಷ್ಟಿಸಿದೆ. ವಿಶೇಷವಾಗಿ ತಾಳಗುಪ್ಪ ಹೋಬಳಿಯ ಸೈದೂರು ಮತ್ತು ಕಾನ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 3 ಸಾವಿರ ಎಕರೆಗೂ ಹೆಚ್ಚಿನ ಕೃಷಿ ಜಮೀನು ಜಲಾವೃತಗೊಂಡಿದೆ.

ಸೈದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ನಹೊಳೆಯ ಸೈದೂರು ಸೇತುವೆಯ ಮೇಲೆ ನೀರು ಉಕ್ಕಿ ರಭಸದಿಂದ ಹರಿಯುತ್ತಿರುವ ಪರಿಣಾಮ ಸಂಪರ್ಕ ಕೂಡ ಕಡಿತವಾಗಿದೆ.  ಈಗಾಗಲೇ ಬಿತ್ತನೆ ಮಾಡಿದ ಭತ್ತ, ಕಬ್ಬು, ಶುಂಠಿ ಬೆಳೆಗಳು ನೀರಿನಲ್ಲಿ ಸಂಪೂರ್ಣ ಮುಳುಗಿ ಹಾನಿ ಉಂಟಾಗಿದೆ.

ಅಧಿಕಾರಿಗಳು ತಕ್ಷಣ ಹಾನಿ ವರದಿ ಸಿದ್ಧಪಡಿಸಿ:
ಜಲಾವೃತ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಇಂದು ಬೇರೆ ಬೇರೆ ಹತ್ತು ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ನೆರೆ ಬರುತ್ತದೆ ಎನ್ನುವುದರ ಅರಿವಿಲ್ಲದ ರೈತರು ಭತ್ತವೂ ಸೇರಿದಂತೆ ಕಬ್ಬು, ಶುಂಠಿ, ಅನಾನಸ್, ಜೋಳ ಮತ್ತಿತರ ಬೆಳೆ ಬೆಳೆದಿದ್ದರು. ಆದರೆ ನೆರೆಯಿಂದಾಗಿ ಕೊಳೆತು ಅಪಾರ ನಷ್ಟ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ತಕ್ಷಣ ಗಮನಹರಿಸಿ ಸಕಾಲದಲ್ಲಿ ಅಧಿಕಾರಿಗಳ ಕಳಿಸಿ ಹಾನಿಯ ವರದಿ ಸಿದ್ಧಪಡಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದರು.

ಮಾಜಿ ಶಾಸಕ ಕುಮಾರ ಬಂಗಾರಪ್ಪ ಮಾತನಾಡಿ, ಈ ಭಾಗದ ಜನರು ವರ್ಷವೂ ನೆರೆಯಿಂದ ಸಂಕಷ್ಟಕ್ಕೆ ಒಳಗಾಗುತ್ತಿದ್ದು ಅದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಿಯಾಯೋಜನೆ ಮಾಡಿಸಲಾಗಿತ್ತು. ನೀರನ್ನು ದಂಡಾವತಿ ಮತ್ತು ಮಾವಿನಹೊಳೆಗೆ ಪ್ರತ್ಯೇಕಿಸುವ ಯೋಜನೆ ಆಗಿದ್ದು ಹೀಗೆ ನೆರೆ ಇರುತ್ತಿರಲಿಲ್ಲ. ಆದರೆ ಈಗಿನ ರಾಜ್ಯ ಸರ್ಕಾರ ಹಣ ನೀಡಿಲ್ಲ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ಸಂಸದರ ಮೂಲಕ ಮನವಿ ಮಾಡಲಾಗುತ್ತಿದೆ ಎಂದರು.

ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ದೇವೇಂದ್ರಪ್ಪ ಯಲಕುಂದ್ಲಿ, ಪ್ರಕಾಶ್ ತಲಕಾಲಕೊಪ್ಪ, ವೀರುಪಾಕ್ಷಪ್ಪ, ಜಿತೇಂದ್ರ ಮತ್ತು ಗ್ರಾಮಸ್ಥರಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.