![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Mar 30, 2022, 6:12 PM IST
ಕೊಟ್ಟಿಗೆಹಾರ: ಬಣಕಲ್ ಕೊಟ್ಟಿಗೆಹಾರ ಸುತ್ತಮುತ್ತ ಬುಧವಾರ ಧಾರಾಕಾರ ಮಳೆಯಾಗಿದ್ದು ಬಣಕಲ್ನಲ್ಲಿ ಹೆದ್ದಾರಿ ಬದಿಯಲ್ಲಿ ಹಾಕಿದ ವಿದ್ಯುತ್ ಕಂಬ ಮನೆಯೊಂದರ ಮೇಲೆ ಬಾಗಿ ಬೀಳುವ ಸ್ಥಿತಿಯಲ್ಲಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನಲೆಯಲ್ಲಿ ಬಣಕಲ್ ಭಾಗದಲ್ಲಿ ರಸ್ತೆ ಬದಿಯಲ್ಲಿ ಹೊಸದಾಗಿ ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ಅವೈಜ್ಞಾನಿಕವಾಗಿ ವಿದ್ಯುತ್ ಕಂಬ ಅಳವಡಿಸಿರುವುದರಿಂದ ಕಂಬವೊಂದು ರಸ್ತೆ ಬದಿಯ ಪೌಲ್ಸನ್ ಎಂಬುವವರ ಮನೆಯ ಮೇಲೆ ಬಾಗಿ ನಿಂತು ಅಪಾಯ ಆಹ್ವಾನಿಸುವಂತಿದೆ.
ಈ ಭಾಗದಲ್ಲಿ ಮಳೆ ಹೆಚ್ಚು ಬೀಳುವುದರಿಂದ ಮಣ್ಣು ಸಡಿಲಗೊಂಡು ವಿದ್ಯುತ್ ಕಂಬಗಳು ಧರೆಗುರುಳುವ ಸಾಧ್ಯತೆಗಳು ಹೆಚ್ಚಿದ್ದು ವಿದ್ಯುತ್ ಕಂಬವನ್ನು ಅಳವಡಿಸುವಾಗ ಕಂಬದ ಕೆಳಭಾಗದಲ್ಲಿ ಸುತ್ತ ಕಾಂಕ್ರೇಟ್ ಹಾಕಿ ಕಂಬ ಅಳವಡಿಸಿದರೇ ಕಂಬ ಧರೆಗುರುಳುವುದು ತಪ್ಪುತ್ತದೆ. ಕೆಲ ಕಡೆಗಳಲ್ಲಿ ರಸ್ತೆ ಪಕ್ಕದ ದಿಬ್ಬದ ಮೇಲೆ ಕಂಬಗಳನ್ನು ಹಾಕಲಾಗಿದ್ದುಯ ತಗ್ಗಿನಲ್ಲಿರುವ ಮನೆ, ತೋಟಗಳ ಮೇಲೆ ಕಂಬ ಉರುಳುವ ಸಾಧ್ಯತೆ ಇರುವುದರಿಂದ ಹೆದ್ದಾರಿ ಬದಿಯಲ್ಲಿ ಹಾಕಿರುವ ಕಂಬಗಳನ್ನು ವೈಜ್ಞಾನಿಕವಾಗಿ ಅಳವಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : “ದಿ ಕಾಶ್ಮೀರಿ ಫೈಲ್ಸ್” ಚಿತ್ರಕ್ಕೆ ನೀಡಿದ ಪ್ರೋತ್ಸಾಹ “ದಂಡಿ”ಗೂ ನೀಡಿ: ವಿಶಾಲ್ ರಾಜ್
ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟ್, ಬಾಳೂರು ಸೇರಿದಂತೆ ಹಲವು ಕಡೆ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಬೇಸಿಗೆಯ ತಾಪ ಜೋರಾಗಿದ್ದು ಮಳೆಯಿಂದ ತಂಪಿನ ವಾತಾವರಣ ಕಂಡು ಬಂತು. ಕಾಫಿ,ಕಾಳು ಮೆಣಸು, ಮತ್ತಿತರ ವಾಣಿಜ್ಯ ಬೆಳೆಗಳಿಗೆ ಮಳೆಯಿಂದ ಅನುಕೂಲವಾಗಿದ್ದು ರೈತರು ಮಳೆಯಿಲ್ಲದೇ ಕಂಗಾಲಾಗಿ ಬೆಳೆಗೆ ನೀರಾಯಿಸಲು ಪರದಾಡಿ ಸ್ಪ್ರಿಂಕ್ಲರ್ ಮೊರೆ ಹೋಗಿದ್ದರು. ಬುಧವಾರ ಸುರಿದ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿತು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.