Heavy Rain: ಬೆಳ್ತಂಗಡಿ-ಮೂಡುಬಿದಿರೆ ಮತ್ತೆ ನೆರೆ ಭೀತಿ

ಸುಳ್ಯ - ಕಾಸರಗೋಡು ರಸ್ತೆಯ ದೇವರಗುಂಡದಲ್ಲಿ ಮರ ಬಿದ್ದು ಸಂಚಾರಕ್ಕೆ ಅಡಚಣೆ

Team Udayavani, Aug 1, 2024, 2:43 AM IST

Flood

ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಬುಧವಾರ ಸಂಜೆಯಿಂದ ತಡರಾತ್ರಿ ವರೆಗೆ ಭಾರೀ ಮಳೆ ಸುರಿದಿದ್ದು, ಮತ್ತೆ ನೆರೆ ಭೀತಿ ಎದುರಾಗಿದೆ. ಸವಣಾಲು ಗ್ರಾಮದ ನಡ್ತಿಕಲ್ಲಿನಲ್ಲಿ ರವಿಚಂದ್ರ ಅವರ ಮಾಲಕತ್ವದ ಗುಡ್ಡ ವಸಂತ ಅವರ ಮನೆ ಪಕ್ಕ ಕುಸಿದು ಬಿದ್ದಿದ್ದು ಮನೆಯವರ ಸ್ಥಳಾಂತರಿಸಲಾಗಿದೆ.

ಗುರುವಾಯನಕೆರೆಯಲ್ಲಿ ಇತ್ತೀಚೆಗಷ್ಟೆ ನವೀಕರಣಗೊಳಿಸಿದ ಹಝರತ್‌ ಶೈಖ್‌ ಹಯಾತುಲ್‌ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್‌ನ ಮುಂಭಾಗ ಭಾರೀ ಮಣ್ಣು ಕುಸಿದು ಅಪಾಯ ಎದುರಾಗಿದೆ. ಗುರುವಾಯನಕೆರೆ ರಸ್ತೆಯಲ್ಲಿ ರಾತ್ರಿ ನೆರೆ ನೀರು ತುಂಬಿತ್ತು. ಬೆಳ್ತಂಗಡಿ ಚರ್ಚ್‌ ರಸ್ತೆ ಒಳಭಾಗದಲ್ಲಿ ರೆನಿಲ್ಡಾ ಜೋಯಿಸ್‌ ಮನೆಗೆ ಪಕ್ಕದ ಬರೆ ಕುಸಿದಿದೆ. ಕುತ್ಲೂರು-ಅತ್ರಿಜಾಲು ಸಂಪರ್ಕಿಸುವ ರಸ್ತೆ ಮಧ್ಯ ಭಾಗ ಬಿರುಕು ಬಿಟ್ಟಿದ್ದು ಸಂಚಾರ ಕಡಿತಗೊಂಡಿದೆ.

ಮೂಡುಬಿದಿರೆ: ಮುಳುಗಿದ 2 ಸೇತುವೆಗಳು
ಮೂಡುಬಿದಿರೆ: ಭಾರೀ ಮಳೆಯಿಂದಾಗಿ ಮೂಡುಬಿದಿರೆ ತಾಲೂಕಿನಾದ್ಯಂತ ನೆರೆ ಸ್ಥಿತಿ ಕಂಡು ಬಂದಿದೆ. ಪಣಪಿಲ ಗ್ರಾಮದ ಆಯರೆಗುಡ್ಡೆ ಮತ್ತು ಬೋರುಗುಡ್ಡೆ ಸಂಪರ್ಕಿಸುವ ಬಿರ್ಮೆರೆಬೈಲು ಸೇತುವೆ ಹಾಗೂ ಶಿರ್ತಾಡಿ-ಮರೋಡಿ ಸಂಪರ್ಕದ ದೋಣಿಬಾಗಿಲು ರಸ್ತೆ ನೀರಿನಲ್ಲಿ ಮುಳುಗಿವೆ. ರಾತ್ರಿ ವೇಳೆ ಮತ್ತೆ ಭಾರೀ ಮಳೆ ಸುರಿದು ಸೇತುವೆ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯಲಾರಂಭಿಸಿದೆ.

ದೇವರಗುಂಡ: ರಸ್ತೆಗೆ ಬಿದ್ದ ಮರ

ಸುಳ್ಯ: ಸುಳ್ಯ – ಕಾಸರಗೋಡು ರಸ್ತೆಯ ದೇವರಗುಂಡದಲ್ಲಿ ಬುಧವಾರ ಸಂಜೆ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಘಟನೆಯಿಂದ ಸ್ವಲ್ಪ ಹೊತ್ತು ಸಂಚಾರ ಸ್ಥಗಿತಗೊಂಡಿತು. ಬಳಿಕ ಮರವನ್ನು ತೆರವು ಮಾಡಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು.

ಸುಳ್ಯ-ಪಾನತ್ತೂರು ಅಂತರ್‌ರಾಜ್ಯ ಹೆದ್ದಾರಿಯ ಕಲ್ಲಪಳ್ಳಿ ಎಂಬಲ್ಲಿ ರಸ್ತೆಗೆ ಮಣ್ಣು ಕುಸಿದು ಸಂಚಾರಕ್ಕೆ ತಡೆ ಉಂಟಾಗಿತ್ತು, ಬಳಿಕ ಸ್ಥಳೀಯರ ಸಹಕಾರದಲ್ಲಿ ಮಣ್ಣು ತೆರವು ಮಾಡಿ ಸಂಚಾರ ಮುಕ್ತ ಮಾಡಲಾಯಿತು. ಈ ರಸ್ತೆಯ ಹಲವೆಡೆ ಮಣ್ಣು ಕುಸಿತದ ಭೀತಿ ಇದೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.