Heavy Rain: ಉತ್ತರ ಕರ್ನಾಟಕದಲ್ಲಿ ಮತ್ತೆ ನೆರೆ ಭೀತಿ

ಬೆಳಗಾವಿಯಲ್ಲಿ 22, ಮಹಾಲಿಂಗಪುರದಲ್ಲಿ 3 ಸೇತುವೆಗಳು ಮುಳುಗಡೆ

Team Udayavani, Jul 25, 2024, 6:15 AM IST

Heavy-Rain

ಹುಬ್ಬಳ್ಳಿ/ಬೆಂಗಳೂರು: ಎಡೆಬಿಡದೆ ಸುರಿಯುತ್ತಿರುವ ಪುಷ್ಯ ಮಳೆಯಿಂದ ಕೃಷ್ಣಾ, ದೂಧಗಂಗಾ, ವೇದಗಂಗಾ, ತುಂಗಭದ್ರಾ, ವರದಾ ನದಿಗಳು ಅಪಾಯದ ಮಟ್ಟ ಮೀರಿ ಆರ್ಭಟಿಸುತ್ತಿವೆ. ಮುಂಜಾಗ್ರತೆ ಕ್ರಮವಾಗಿ ನದಿ ತೀರದಲ್ಲಿ ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಮಳೆ ಅನಾಹುತಕ್ಕೆ ಮೂವರು ಮೃತಪಟ್ಟಿದ್ದಾರೆ.

ಯಲ್ಲಾಪುರ ತಾಲೂಕಿನ ಕಬ್ಬಿನಗದ್ದೆಯ ವಿನಯ ಮಂಜುನಾಥ ಗಾಡಿಗ (25) ಮರ ಬಿದ್ದು ಮೃತಪಟ್ಟಿದ್ದಾರೆ. ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಡ್ಯಾಂನಲ್ಲಿ ಈಜಲು ಹೋಗಿದ್ದ ಮುಡಸಾಲಿ ಗ್ರಾಮದ ಶ್ರೀಕಾಂತ ಹರಿಜನ (20) ನೀರು ಪಾಲಾಗಿದ್ದರೆ ಮುದ್ದೇಬಿಹಾಳ ತಾಲೂಕಿನ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದಿದ್ದ ಕುರಿಗಾಹಿ ಮಂಜುನಾಥ ಮಾದರ (28) ಮೃತದೇಹ ಯಾದಗಿರಿ ಜಿಲ್ಲೆ ಹೊರಟ್ಟಿ ಗ್ರಾಮದ ಕಾಲುವೆಯಲ್ಲಿ ಬುಧವಾರ ದೊರಕಿದೆ.

ಬೆಳಗಾವಿ ಜಿಲ್ಲೆಯಲ್ಲಿ 22, ಮಹಾಲಿಂಗಪುರ ತಾಲೂಕಿನಲ್ಲಿ 3 ಸೇತುವೆಗಳು ಮುಳುಗಡೆಯಾಗಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ನದಿ ತೀರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳು ಜನವಸತಿ ಪ್ರದೇಶಗಳಿಗೆ ನುಗ್ಗಿದೆ.

ಮೂಡಲಗಿ ತಾಲೂಕಿನ ಘಟಪ್ರಭಾ ನದಿ ಪಾತ್ರದ ಗ್ರಾಮಗಳ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಿದೆ. ಬೆಳಗಾವಿ ಜಿಲ್ಲೆಯಲ್ಲಿ 427 ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಬೋಟ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ 2.02 ಲಕ್ಷ ಕ್ಯೂಸೆಕ್‌ ನೀರು ಹರಿಬಿಟ್ಟಿದ್ದರಿಂದ ಗಡ್ಡೆಗೊಳ್ಳಿ ಬಸವೇಶ್ವರ ದೇವಸ್ಥಾನ ಮುಳಗಿದೆ.

ಕಾವೇರಿ ಕೊಳ್ಳದಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೆಆರ್‌ಎಸ್‌ ಜಲಾಶಯ ಪೂರ್ಣ ಭರ್ತಿಯಾಗಿದೆ. ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮೂಲ ಸೌಕರ್ಯಗಳಿಗೆ ಹಾನಿ ಮತ್ತು ಬೆಳೆಹಾನಿ ಸಂಭವಿಸುತ್ತಿದೆ. ಶಿರಾಡಿಘಾಟ್‌ನಲ್ಲಿ ಭೂ ಕುಸಿತ ಭೀತಿಯಿದೆ. ಇದರಿಂದ ವಾಹನ ಸವಾರರು ಭಯದಿಂದಲೇ ಓಡಾಡುವಂತಾಗಿದೆ.

ಉತ್ತರ ಕನ್ನಡದಲ್ಲಿ ನಿಲ್ಲದ ಭೂಕುಸಿತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಜತೆ ಗಾಳಿಯೂ ಜೋರಾ ಗಿದೆ. ಶಿರಸಿ-ಮತ್ತಿಘಟ್ಟ ಮಾರ್ಗವಾಗಿ ಅಂಕೋಲಾಕ್ಕೆ ತೆರಳುವ ಮಾರ್ಗದಲ್ಲಿ ಭೂಕುಸಿತವಾಗಿ ಸಂಚಾರ ಸ್ಥಗಿತವಾಗಿದೆ. ಹಲವೆಡೆ ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದೆ. ಅಘನಾಶಿನಿ, ಗಂಗಾವಳಿ, ವರದಾ ಉಕ್ಕೇರಿದ್ದು, ತೀರ ಪ್ರದೇಶದಲ್ಲಿ ನೆರೆ ಭೀತಿ ಎದುರಾಗಿದೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆ ಕಡಿಮೆಯಾದರೂ ನದಿಗಳ ಅಬ್ಬರ ಇನ್ನೂ ತಗ್ಗಿಲ್ಲ.

ಕೆಆರ್‌ಎಸ್‌ ಗೇಟ್‌ ಮುಂದಿನ ತಡೆಗೋಡೆ ಕುಸಿತ
ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಿಂದ ಕಾವೇರಿ ನದಿಗೆ ನೀರು ಹರಿಸುವ ಗೇಟ್‌ಗಳ ಮುಂಭಾಗದಲ್ಲಿದ್ದ ತಡೆಗೋಡೆ ಕುಸಿದಿದೆ. ಜಲಾಶಯದ ಬಳಿಯ ನಗುವನ ತೋಟಕ್ಕೆ ನೀರು ನುಗ್ಗದಂತೆ ತಡೆಗೋಡೆ ನಿರ್ಮಿಸಲಾಗಿತ್ತು. ಇತ್ತೀಚೆಗಷ್ಟೇ ಮತ್ತೆ ನವೀಕರಿಸಲಾಗಿತ್ತು. ಆದರೆ ನೀರಿನ ರಭಸಕ್ಕೆ ತಡೆಗೋಡೆ ಕೊಚ್ಚಿ ಹೋಗಿದೆ.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.