ಉಡುಪಿ ತಾಲೂಕಿನಾದ್ಯಂತ ಉತ್ತಮ ಮಳೆ: ಮೆಸ್ಕಾಂಗೆ 36 ಲ.ರೂ. ನಷ್ಟ


Team Udayavani, Jun 13, 2021, 8:23 PM IST

ಉಡುಪಿ ತಾಲೂಕಿನಾದ್ಯಂತ ಉತ್ತಮ ಮಳೆ: ಮೆಸ್ಕಾಂಗೆ 36 ಲ.ರೂ. ನಷ್ಟ

ಉಡುಪಿ : ಕಳೆದ ಎರಡು ದಿನಗಳಿಂದ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ರವಿವಾರ ಮಳೆ ಬಿರುಸುಗೊಂಡಿದ್ದು, ಜನರ ಸಂಚಾರ ಅಸ್ತವ್ಯಸ್ಥಗೊಂಡಿದೆ.

ಶನಿವಾರದ ಮುಂಜಾನೆಯಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕೃತಕ ನೆರೆ ನಿರ್ಮಾಣವಾಗಿದ್ದು, ರಸ್ತೆಗಳಲ್ಲಿ ನಿಂತ ನೀರಿನಿಂದಾಗಿ ವಾಹನ ಸಂಚಾರರಿಗೆ ತೊಂದರೆ ಸಿಲುಕಿಕೊಂಡರು.ಇನ್ನೊಂದೆಡೆ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ನಾಟಿ ಸೇರಿದಂತೆ ಇತರೆ ಕೆಲಸಗಳು ಭರದಿಂದ ಸಾಗುತ್ತಿದೆ. ಜೂ.13ರ ಬೆಳಗ್ಗೆ 8.30ರ ಹಿಂದಿನ 24 ಗಂಟೆಯಲ್ಲಿ ಉಡುಪಿ 30.2 ಮಿ.ಮೀ , ಕಾರ್ಕಳ 58.3 ಮಿ.ಮೀ., ಬ್ರಹ್ಮಾವರ 51.1 ಮಿ.ಮೀ., ಕಾಪು 36.9 ಮಿ.ಮೀ., ಕುಂದಾಪುರ 36.2ಮಿ.ಮೀ., ಬೈಂದೂರು 56.1ಮಿ.ಮೀ., ಹೆಬ್ರಿ 46.7 ಮಿ.ಮೀ. ಮಳೆಯಾಗಿದ್ದು ಜಿಲ್ಲೆಯಾದ್ಯಂತ ಒಟ್ಟು 83.3 ಮಿ.ಮೀ. ಮಳೆಯಾಗಿದೆ.

ಮೆಸ್ಕಾಂಗೆ 36 ಲ.ರೂ. ನಷ್ಟ
ಶನಿವಾರ ನಿರಂತರವಾದ ಗಾಳಿ ಮಳೆಯಿಂದಾಗಿ ಜಿಲ್ಲೆಯಲ್ಲಿ 107 ವಿದ್ಯುತ್‌ ಕಂಬ, 23 ಟ್ರಾನ್ಸ್‌ಫಾರ್ಮರ್‌, ವಿದ್ಯುತ್‌ ತಂತಿಗಳು ನೆಲಕ್ಕೆ ಉರುಳಿದೆ. ಏಕಕಾಲದಲ್ಲಿ ವಿವಿಧೆಡೆಯಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯದಲ್ಲಿ ವಿಳಂಬವಾಗಿದ್ದು, ಇದರಿಂದಾಗಿ ವಿವಿಧ ತಾಲೂಕಿನಲ್ಲಿ ರವಿವಾರ ಮುಂಜಾನೆಯಿಂದ ವಿದ್ಯುತ್‌ ವ್ಯತ್ಯಯವಾಗಿದೆ. ನಗರದಲ್ಲಿ ಶನಿವಾರ ಅಲಂಕಾರ ಚಿತ್ರಮಂದಿರ ಹಿಂಭಾಗದ ರಸ್ತೆಯಲ್ಲಿ ಸೇರಿದಂತೆ ವಿವಿಧೆಡೆಯಲ್ಲಿ ವಿದ್ಯುತ್‌ ತಂತಿ ಹಾಗೂ ಕಂಬಗಳು ಗಾಳಿ ಮಳೆಗೆ ಧರೆಗುರುಳಿವೆ. ಇದರಿಂದಾಗಿ ಈ ಭಾಗದಲ್ಲಿ ರವಿವಾರ ಮುಂಜಾನೆಯವರೆಗೆ ವಿದ್ಯುತ್‌ ವ್ಯತ್ಯಯವಾಗಿದೆ. ಜಿಲ್ಲೆಯಲ್ಲಿ ಶನಿವಾರ ಸುರಿದ ಮಳೆಗೆ ಒಟ್ಟು 36 ಲ.ರೂ. ಮೆಸ್ಕಾಂಗೆ ಹಾನಿಯಾಗಿದೆ.

ಗಾಳಿ ಮಳೆ – ಆಸ್ತಿ ಹಾನಿ
ನಿರಂತರವಾಗಿ ಸುರಿಯುವ ಮಳೆಯೊಂದಿಗೆ ಗಾಳಿಯು ಬೀಸುತ್ತಿರುವುದರಿಂದ ಜಿಲ್ಲೆಯಾದ್ಯಂತ ವಿವಿಧ ಕಡೆಯಲ್ಲಿ ಆಸ್ತಿ ಹಾನಿಯಾಗಿದೆ. ವಿವಿಧ ಪ್ರದೇಶವನ್ನು ಸಂಪರ್ಕಿಸುವ ರಸ್ತೆಯಲ್ಲಿ ಮರ ಬಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ರವಿವಾರ ಬೆಳಗ್ಗೆ ಮರದ ತೆರವು ಕಾರ್ಯ ಪ್ರಾರಮಬಗೊಂಡಿತು. ಒಳಕಾಡುವಿನ ಮನೆಯೊಂದರ ಮೇಲೆ ಮರ ಬಿದ್ದು ಹಾನಿಯಾಗಿದೆ. ಇದೇ ಪ್ರದೇಶದಲ್ಲಿ ವಿದ್ಯುತ್‌ ಕಂಬವೊಂದು ಬಿದ್ದು, ತಂತಿಗಳು ರಸ್ತೆಯೂದ್ದಕ್ಕೂ ಆವರಿಸಿಕೊಂಡಿದೆ. ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಈ ಪ್ರದೇಶದಲ್ಲಿ ವಿದ್ಯುತ್‌ ಉಂಟಾಗಿದೆ.

ತಗ್ಗು ಪ್ರದೇಶ ಜಲಾವೃತ
ಬೇಸಗೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಇಂದ್ರಾಣಿಯ ಎರಡು ಬದಿಯನ್ನು ತಡೆಗೋಡಿ ನಿರ್ಮಿಸಲಾಗಿದೆ. ಇದರಿಂದಾಗಿ ಇಂದ್ರಾಣಿಯಲ್ಲಿ ಮಳೆಯ ನೀರು ಯಾವುದೇ ಅಡೆತಡೆಯಿಲ್ಲದೆ ಸರಾಗವಾಗಿ ಹರಿಯುತ್ತಿದೆ. ನಗರದ ತಗ್ಗು ಪ್ರದೇಶದಲ್ಲಿ ಕೃತಕ ನೆರೆಯುಂಟಾಗಿದೆ. ಗೆದ್ದೆಯಲ್ಲಿ ನೀರು ನಿಂತು ಕೊಂಡ ದೃಶ್ಯಗಳ ಗ್ರಾಮೀಣಭಾಗದಲ್ಲಿ ಕಂಡು ಬಂತು. ನದಿಗಳು ತುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟವನ್ನು ತುಂಬಿಲ್ಲ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.