Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

ನಗರದ ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತ

Team Udayavani, Oct 8, 2024, 1:53 AM IST

Manipal-Rain

ಉಡುಪಿ: ಜಿಲ್ಲಾ ಕೇಂದ್ರದಲ್ಲಿ ಸೋಮವಾರ ಸಂಜೆ-ರಾತ್ರಿ ಧಾರಾಕಾರ ಮಳೆಯ ಜತೆಗೆ ಗುಡುಗು, ಸಿಡಿಲು ಜನ ಸಾಮಾನ್ಯರಲ್ಲಿ ಆತಂಕ ಸೃಷ್ಟಿಸಿದೆ. ತಗ್ಗು ಪ್ರದೇಶದಲ್ಲಿ ನೀರು ನಿಂತು ಸಮಸ್ಯೆ ಉಂಟಾಯಿತು.

ರವಿವಾರ ಪಶ್ಚಿಮಘಟ್ಟದ ತಪ್ಪಲು ಆಗುಂಬೆ ಭಾಗದಲ್ಲಿ ಮೇಘನ್ಪೋಟ ರೀತಿಯಲ್ಲಿ ಮಳೆ ಸುರಿದ ಪರಿಣಾಮ ಹೆಬ್ರಿ ಸುತ್ತಮುತ್ತಲಿನ ಪರಿಸರದಲ್ಲಿ ಧಾರಾಕಾರ ಮಳೆಯಾಗಿತ್ತು. ಇದೇ ರೀತಿ ಉಡುಪಿ, ಮಣಿಪಾಲ ಸುತ್ತಮುತ್ತಲೂ ರಾತ್ರಿ 7.30ರಿಂದ 10 ಗಂಟೆವರೆಗೆ ಮಳೆ ಬಂದಿದೆ.

ನಿರಂತರ ಗುಡುಗು, ಸಿಡಿಲಿನ ಪರಿಣಾಮ ಜನರು ಬೆಚ್ಚಿ ಬಿದ್ದಿದ್ದು, ಹಲವೆಡೆ ಮನೆಗಳಲ್ಲಿ ವಿದ್ಯುತ್‌ ಪರಿಕರಗಳಿಗೆ ಹಾನಿ ಸಂಭವಿಸಿದೆ. ಒಂದು ಗಂಟೆಗೂ ಅಧಿಕ ನಿರಂತರ ಮಳೆ ಸುರಿದ ಪರಿಣಾಮ ಚರಂಡಿ ತುಂಬಿ ರಸ್ತೆಯ ಮೇಲೆ ನದಿಯಂತೆ ನೀರು ಹರಿದಿದೆ. ಸಂಜೆ ವೇಳೆ ಮನೆಯಿಂದ ಹೊರಗಡೆ ಹೋದವರು, ಕಚೇರಿ ಕಾರ್ಯ ಮುಗಿಸಿ ಮನೆಗೆ ಹೋಗುತ್ತಿರುವವರು ಮಳೆಯಲ್ಲಿ ಸಿಲುಕಿದ್ದು, ಮಾತ್ರವಲ್ಲದೆ ಗುಡುಗು, ಸಿಡಿಲಿಗೆ ನಲುಗಿ ಹೋಗಿದ್ದರು.

ಗಾಳಿ, ಸಿಡಿಲಿನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಹಠಾತ್‌ ಸುರಿದ ಮಳೆಯಿಂದಾಗಿ ರಾತ್ರಿ ಹೆದ್ದಾರಿ ಸಹಿತ ನಗರದ ಮುಖ್ಯರಸ್ತೆಯಲ್ಲಿಯೂ ಟ್ರಾಫಿಕ್‌ ಜಾಮ್‌ ಉಂಟಾಗಿ ಸುಗಮ ಸಂಚಾರಕ್ಕೆ ತೊಡಕುಂಟಾಗಿತ್ತು.

ನಿರೀಕ್ಷೆಯೇ ಇರಲಿಲ್ಲ
ಕೆಲವು ದಿನದಿಂದ ಮಳೆ ಇಲ್ಲದೇ ಇರುವುದರಿಂದ ಈ ರೀತಿ ಒಂದೇ ದಿನ ಇಷ್ಟು ಮಳೆ ಸುರಿಯಬಹುದು ಎಂಬ ನಿರೀಕ್ಷೆ ಯಾರಲ್ಲೂ ಇರಲಿಲ್ಲ. ಅಲ್ಲದೆ, ಹವಾಮಾನ ಇಲಾಖೆಯಿಂದಲೂ ಮುನ್ಸೂಚನೆ ಇರಲಿಲ್ಲ. ಕೆಲವು ಗಂಟೆಗಳ ಕಾಲ ಸುರಿದ ಧಾರಾಕಾರ ಮಳೆಯು ಅಲ್ಲಲ್ಲಿ ಸಣ್ಣಪುಟ್ಟ ಹಾನಿಯನ್ನು ಉಂಟು ಮಾಡಿದೆ. ಒಟ್ಟಾರೆ ಸೋಮವಾರ ರಾತ್ರಿ ಸುರಿದ ಭಾರೀ ಮಳೆ ಜನರನ್ನು ಕಂಗೆಡಿಸಿದೆ.

ಕುಂದಾಪುರ, ಕಾರ್ಕಳ ಸುತ್ತಮುತ್ತಲೂ ತಡರಾತ್ರಿ ಗುಡುಗು ಸಹಿತ ಬಿಟ್ಟುಬಿಟ್ಟು ಮಳೆ ಸುರಿದಿದೆ. ಉಡುಪಿ ಸಹಿತ ಹಲವೆಡೆ ಬೆಳಗ್ಗೆನಿಂದ ಸಂಜೆವರೆಗೆ ಬಿಸಿಲು-ಮೋಡ ಕವಿದ ವಾತಾವರಣವಿದ್ದು, ಸಂಜೆ ಅನಂತರ ಬಿರುಸಿನ ಮಳೆ ಆರಂಭಗೊಂಡಿದೆ. ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತ ರಾತ್ರಿ 7ರ ಅನಂತರ ಮಳೆ ಸುರಿಯಲಾರಂಬಿಸಿತು. ದ.ಕ.ದ ಪುತ್ತೂರು, ಸುಳ್ಯ ಸಹಿತ ವಿವಿಧೆಡೆ ತುಂತುರು ಮಳೆಯಾಗಿದೆ.

ಟಾಪ್ ನ್ಯೂಸ್

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

Tejasvi

Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

puttige-2

Udupi; ಗೀತಾರ್ಥ ಚಿಂತನೆ 58-ಒಳ್ಳೆಯ ಕೆಲಸ, ಕೆಟ್ಟ ಕೆಲಸ: ಸಜ್ಜನ, ದುರ್ಜನ ಲಕ್ಷಣ

1

Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು

byndoor

Kundapura: ಸ್ಕೂಟಿ ಸ್ಕಿಡ್‌; ತಂದೆ-ಮಗನಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.