Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

ಮೇಘಸ್ಫೋಟ ಶಂಕೆ; ವೃದ್ಧೆ ನಾಪತ್ತೆ, ವಾಹನ-ಜಾನುವಾರು ನೆರೆ ಪಾಲು

Team Udayavani, Oct 7, 2024, 7:50 AM IST

HEBRI-CAR2

ಹೆಬ್ರಿ/ಕಾರ್ಕಳ: ರವಿವಾರ ಸಂಜೆ ಸುರಿದ ಭಾರೀ ಸಿಡಿಲು ಸಹಿತ ಮೇಘ ಸ್ಫೋಟದ ರೀತಿ ಸುರಿದ ಮಳೆಗೆ ಹೆಬ್ರಿ ತಾಲೂಕಿನ ಮುದ್ರಾಡಿ ಬಲ್ಲಾಡಿ ಪರಿಸರದಲ್ಲಿ ಗುಮ್ಮ ಗುಂಡಿ ನದಿ ನೀರು ಉಕ್ಕಿ ಹರಿದು ಅಪಾರ ಹಾನಿ ಸಂಭವಿಸಿದೆ. ಹಲವು ವಾಹನಗಳು, ಜಾನುವಾರು ಮತ್ತು ವೃದ್ಧೆಯೊಬ್ಬರು ನಾಪತ್ತೆಯಾಗಿದ್ದಾರೆ.

ಕಬ್ಬಿನಾಲೆಯ ಬಮ್ಮ ಗುಂಡಿ ನದಿಯಲ್ಲಿ ಹಠಾತ್‌ ನೆರೆ ಬಂದಿದೆ. ಹಲವು ಮನೆ ಹಾಗೂ ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಸಮಸ್ಯೆ ಸೃಷ್ಟಿಸಿದೆ. ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾ.ಪಂ.ನ ಬಲ್ಲಾಡಿ ಗ್ರಾಮ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಪರಿಣಾಮ ಹತ್ತಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಮುಳುಗಡೆಯಾಗಿವೆ. 2 ಕಾರು, 2 ಬೈಕ್‌ ನೀರಿನಲ್ಲಿ ಕೊಚ್ಚಿಹೋಗಿವೆ.

ಮಧ್ಯಾಹ್ನ 2.30ರ ಸುಮಾರಿಗೆ ಒಂದೇ ಸಮನೆ ಸುರಿದ ಭಾರೀ ಮಳೆಯಿಂದಾಗಿ ಬಲ್ಲಾಡಿಯಿಂದ ವರಂಗ ಹೋಗುವ ಸೇತುವೆ ಮತ್ತು ಬಲ್ಲಾಡಿಯಿಂದ ಮುದ್ರಾಡಿಗೆ ಹೋಗುವ 2 ಸೇತುವೆ ಬಳಿ ನದಿ ನೀರು ಉಕ್ಕಿ ರಸ್ತೆಯ ಮೇಲೆ ಹರಿದ ಪರಿಣಾಮ ಬಲ್ಲಾಡಿ ಸುತ್ತಮುತ್ತಲಿನ ಪರಿಸರ ಸಂಪೂರ್ಣ ಜಲಾವೃತಗೊಂಡು ಸಂಚಾರ ಬಂದ್‌ ಆಯಿತು.

ಮೇಘಸ್ಫೋಟ ಶಂಕೆ
ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಬರುವ ಈ ಪ್ರದೇಶದಲ್ಲಿ ಮಧ್ಯಾಹ್ನ 2.30ರಿಂದ 5ರ ವರೆಗೆ ಭಾರೀ ಸಿಡಿಲು ಗಾಳಿಯಿಂದ ಕೂಡಿದ ಮಳೆ ಸುರಿಯಿತು. ನದಿಯಲ್ಲಿ ಹಠಾತ್‌ ಅಗಿ ಕೆಸರು ಮಿಶ್ರಿತ ತುಂಬಿದ ನೀರು ಹರಿದು ಬಂದಿದೆ. ಹೊಸಕಂಬ ಕೃಷ್ಣ ಪೂಜಾರಿ ಅವರ ಅಂಗಳದಲ್ಲಿ ನಿಲ್ಲಿಸಿದ್ದ ಕಾರು ಹಾಗೂ ಪಕ್ಕದ ಕೇರಳ ಮೂಲದ ಕುಟುಂಬದ ನಿವಾಸಿ ನಿಲ್ಲಿಸಿದ್ದ ಆಲ್ಟೋ ಕಾರು ಹಾಗೂ ಎರಡು ಬೈಕ್‌ಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ವಾಹನಗಳು ಮನೆಯ ತೋಟದಲ್ಲಿ ಸಿಲುಕಿಕೊಂಡಿದೆ. ಜಲಾವೃತಗೊಂಡ ಮನೆಮಂದಿಯನ್ನು ಹಗ್ಗಕಟ್ಟಿ ಏಣಿಯ ಸಹಾಯದಿಂದ ಹೊರ ಕರೆತರಲಾಗಿದೆ. ಹಲವಾರು ಮನೆಗಳು ಅರ್ಧದಷ್ಟು ಮುಳುಗಿವೆ.

ಬಲ್ಲಾಡಿಯ ನಾರಾಯಣ ಭಟ್ಟ ಅವರ ತೋಟ ಸಂಪೂರ್ಣ ಜಲಾವೃತ ಗೊಂಡಿದೆ. ಕಾಂತಬೈಲು ವನಜ ಪೂಜಾರಿ, ಕೃಷ್ಣ ಪೂಜಾರಿ, ಸುಧೀರ್‌ ಮೊದಲಾದವರ ಮನೆಗಳು ಅರ್ಧ ಮುಳುಗಿವೆ. ಮುದ್ರಾಡಿ ಪೇಟೆಯಲ್ಲಿ ಭಾರೀ ಗಾಳಿಯಿಂದ ನಾಗೇಶ್‌ ಕಾಮತ್‌ ಅವರ ಅಂಗಡಿಯ ಮೇಲ್ಛಾವಣಿ ಹಾರಿ ಹೋಗಿದೆ.
ಭಾರೀ ಮಳೆಯಿಂದ ನೀರಿನ ರಭಸಕ್ಕೆ ಸುಮಾರು 25ಕ್ಕೂ ಮಿಕ್ಕಿ ಗದ್ದೆಗಳ ಪೈರುಗಳು ಹಾಗೂ ಅಡಿಕೆ, ಬಾಳೆ ತೋಟಗಳು ಹಾನಿಗೊಳಗಾಗಿವೆ ಎಂದು ಬಲ್ಲಾಡಿ ಚಂದ್ರಶೇಖರ್‌ಭಟ್‌ ತಿಳಿಸಿದ್ದಾರೆ.

ಕೊಚ್ಚಿ ಹೋದ ಹಸು, ಕರುಗಳು
ಕಾಂತಬೈಲು ಸುತ್ತಮುತ್ತಲಿನ ಪರಿಸರದ 15ಕ್ಕೂ ಮಿಕ್ಕಿ ಹಸು ಕರುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ ಎಂದು ಸ್ಥಳೀಯರಾದ ಶುಭದರ ಶೆಟ್ಟಿ ತಿಳಿಸಿದ್ದಾರೆ. ಗುಮ್ಮ ಗುಂಡಿ ಪರಿಸರದಲ್ಲಿ ಹಸುವಿನ ಹಟ್ಟಿಯೊಂದು ಕುಸಿದು ಬಿದ್ದಿದೆ. 3 ತಾಸು ಅವಧಿಯಲ್ಲಿ 18 ಸೆಂ.ಮೀ. ಮಳೆ ಸುರಿದಿರಬಹುದು ಎಂದು ಅಂದಾಜಿಸಲಾಗಿದೆ.

ವೃದ್ಧೆ ಪ್ರವಾಹದ ಪಾಲು ಶಂಕೆ
ನೇರಲ್ಪಕ್ಕೆ 85 ವರ್ಷ ಪ್ರಾಯದ ಚಂದ್ರ ಗೌಡ್ತಿ ಮನೆ ಹೊರಗಿನ ಶೌಚಾಲಯಕ್ಕೆ ಹೋದವರು ನಾಪತ್ತೆಯಾಗಿದ್ದಾರೆ. ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ಮೂಡಿದ್ದು ರಾತ್ರಿ 9ರ ತನಕ ಹುಡುಕಾಡಿದರೂ ವೃದ್ಧೆ ಪತ್ತೆಯಾಗಿಲ್ಲ ಎಂದು ಗ್ರಾಮ ಆಡಳಿತಾಧಿಕಾರಿ ನವೀನ್‌ ಕುಮಾರ್‌ ತಿಳಿಸಿದ್ದಾರೆ.

ಇದೇ ಮೊದಲು ಇಷ್ಟೊಂದು ಪ್ರವಾಹ
ಕಾರ್ಕಳ, ಹೆಬ್ರಿ ಭಾಗದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ಜಲಪ್ರವಾಹ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸೀತಾ ನದಿಯಲ್ಲಿ ನೆರೆ ಬಂದು ರಸ್ತೆಗೆ ಹರಿದು ರಸ್ತೆ ಬಂದ್‌ ಆಗುವುದು ಸಾಮಾನ್ಯ. ಆದರೆ ಇಂತಹ ಜಲಪ್ರಳಯ ಸಂಭವಿಸಿದ್ದು ಇದೇ ಮೊದಲು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಸ್ಥಳಕ್ಕೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ವಸಂತಿ ಪೂಜಾರಿ ಹಾಗೂ ಸದಸ್ಯರು ಭೇಟಿ ನೀಡಿದ್ದಾರೆ. ಹೆಬ್ರಿ ತಹಶೀಲ್ದಾರ್‌ ಪ್ರಸಾದ್‌ ಕಂದಾಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದಾರೆ. ರಾತ್ರಿ ಆಗಿರುವುದರಿಂದ ಹಾನಿಯಾಗಿರುವ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕಿಲ್ಲ ಸೋಮವಾರ ಬೆಳಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ಮಾಡುವುದಾಗಿ ತಿಳಿಸಿದ್ದಾರೆ.

ಘಾಟಿ ಪ್ರದೇಶದ ಮಳೆ ಪ್ರಭಾವ
ಆಗುಂಬೆ ಘಾಟಿ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಕಬ್ಬಿನಾಲೆ ಗುಡ್ಡ ಬೆಟ್ಟಗಳಲ್ಲಿ ಒಂದೇ ಸವನೆ ನೀರು ನುಗ್ಗಿ ಬಂದ ಪರಿಣಾಮ ಅನಾಹುತ ಸಂಭವಿಸಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.