ಖಿನ್ನತೆಯಿಂದ ದೂರವಾಗಲು ಗಿಡಮೂಲಿಕೆ ಔಷಧ


Team Udayavani, Jun 1, 2020, 3:30 PM IST

ಖನ್ನತೆಯಿಂದ ದೂರವಾಗಲು ಗಿಡಮೂಲಿಕೆ ಔಷಧ

ನಮ್ಮಲ್ಲಿ ಅನೇಕರು ಆತಂಕ, ಒತ್ತಡ ಮತ್ತು ನಿದ್ರಾಹೀನತೆಯಂತಹ ರೋಗಲಕ್ಷಗಳಿಂದ ಬಳಲುತ್ತಿರುವ ಖಿನ್ನತೆಯು ಸಾಮಾನ್ಯ ಜೀವನಶೈಲಿಯ ಸಮಸ್ಯೆಯಾಗುತ್ತಿದೆ ಆದರೆ ಇದು ಕೇವಲ ದಿನನಿತ್ಯದ ಸಮಸ್ಯೆಯಂತೆ ಕಾಣಿಸಿದರು ಕೂಡ ಅದು ದೀರ್ಘಾವಧಿಯಲ್ಲಿ ಕಾಳಜಿಯ ವಿಷಯವಾಗಿ ಬದಲಾಗಬಹುದು. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ವಿಶ್ವಾದ್ಯಂತ ಅನಾರೋಗ್ಯ ಮತ್ತು ಅಂಗವೈಕಲ್ಯಕ್ಕೆ ಖಿನ್ನತೆಯೇ ಪ್ರಮುಖ ಕಾರಣವೆಂದು ತಿಳಿದು ಬಂದಿದೆ. ಮಾನಸಿಕ ಖಿನ್ನತೆಗೆ ಖಚಿತವಾದ ‌ ಚಿಕಿತ್ಸೆ ಇಲ್ಲದಿರಬಹುದು ಆದರೆ ಅದನ್ನು ನಿಧಾನಗೊಳಿಸಲು ಮತ್ತು ತೊಂದರೆಗೊಳಗಾದ ನಿಮ್ಮ ಮನಸ್ಸನ್ನು ಶಾಂತಗೊಳಿಸುವ ಸಾಧ್ಯತೆ ಇದೆ. ಆಯುರ್ವೇದ ಗಿಡಮೂಲಿಕೆಗಳು ನಿಮ್ಮ ದೇಹವನ್ನು ಒಂದಕ್ಕಿಂತ ಹೆಚ್ಚು ರೀತಿಯಲ್ಲಿ ಗುಣಪಡಿಸಲು ಸಹಾಯ ಮಾಡುತ್ತದೆ. ಖಿನ್ನತೆಯ ಸಮಯದಲ್ಲಿ ನಿಮ್ಮ ಹಾರ್ಮೋನುಗಳು ಉತ್ತಮ ಭಾವನೆಗಳನ್ನು ಅಥವಾ ಅನೇಕ ಸಂದರ್ಭಗಳನ್ನು ನಿಭಾಯಿಸಲು ಸಮರ್ಥವಾಗಿರುವುದಿಲ್ಲ ಆದ್ದರಿಂದ ನಿಮ್ಮನ್ನು ಬೇರೊಂದು ಮನಸ್ಥಿಗೆ ತರುತ್ತದೆ .ಕೆಲವು ಗಿಡಮೂಲಿಕೆಗಳು ಖಿನ್ನತೆಯ ಸಮಸ್ಯೆಯಿಂದ ಹೊರಬರಲು ಸಹಾಯ ಮಾಡುತ್ತವೆ.

ಅಶ್ವಗಂಧ:
ಖಿನ್ನತೆ ಶಮನಕಾರಿ, ಉರಿಯೂತದ ಮತ್ತು ಆತಂಕ ನಿರೋಧಕ ಗುಣಗಳನ್ನು ಒದಗಿಸುತ್ತದೆ. ಇದರಲ್ಲಿ ಸ್ಟಿರಾಯ್ಡ್ ಲ್ಯಾಕ್ಟೋನ್‌ಗಳು , ಸಪೋನಿನ್‌, ಆಲ್ಕಲಾಯ್ಡ್ಗಳಂತಹ ಸಕ್ರೀಯ ಸಂಯುಕ್ತಗಳು ಇರುವುದರಿಂದ ಇದು ಒತ್ತಡ ಮತ್ತು ಆತಂಕವನ್ನು ನಿವಾರಿಸುತ್ತದೆ. ಭಾವನಾತ್ಮಕ ಮತ್ತು ದೈಹಿಕ ಆಯಾಸದಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ನಿರಂತರ ಮನಸ್ಥಿತಿ ಬದಲಾವಣೆಗಳನ್ನು ಸಮತೋಲನಗೊಳಿಸುತ್ತದೆ. ಗಮನ ಮತ್ತು ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಜತೆಗೆ ದೈಹಿಕ ಕಾರ್ಯವನ್ನು ಮರುಸ್ಥಾಪಿಸಲು ಸಹಾಯ ಮಾಡುತ್ತದೆ.

ಬ್ರಾಹ್ಮಿ:
ಬ್ರಾಹ್ಮಿ ಒಂದು ಸಣ್ಣ ದೀರ್ಘ‌ಕಾಲಿಕ ಮೂಲಿಕೆ, ಇದು ಒತ್ತಡವನ್ನು ಗುಣಪಡಿಸುವ ಗುಣವನ್ನು ಹೊಂದಿದೆ. ಬ್ರಾಹ್ಮಿ ಅಡಾಪ್ಟೋಜೆನ್‌ ಆಗಿ ಕಾರ್ಯನಿರ್ವಹಿಸುತ್ತದೆ. ಅಂದರೆ ದೇಹವು ಹೊಸ ಅಥವಾ ಒತ್ತಡದ ಸಂದರ್ಭಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ಮೆದುಳಿನಲ್ಲಿ ಸಿರೊಟೋನಿನ್‌ ಮಟ್ಟವನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ. ಮನಸ್ಸನ್ನು ಶಾಂತವಾಗಿಡಲು ಮತ್ತು ಆತಂಕದಿಂದ ಪರಿಹಾರವನ್ನು ನೀಡುತ್ತದೆ.

ಆಟಮಾನ್ಸಿ:
ಇದೊಂದು ದೀರ್ಘ‌ಕಾಲಿಕ ಸಸ್ಯವಾಗಿದ್ದು ನಿದ್ರಾಹೀನತೆ ಮತ್ತು ಇತರ ಮಲಗುವ ಕಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಹಾಗೆಯೇ ಇದು ಖಿನ್ನತೆ ಶಮನಕಾರಿ , ಒತ್ತಡ ವಿರೋಧಿ ಮತ್ತು ಆಯಾಸ ವಿರೋಧಿ ಗುಣ ಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಇದನ್ನು ಔಷಧೀಯ ಉದ್ದೇಶಗಳಿಗೆ ಬಳಸಲಾಗುತ್ತದೆ. ಮನಸ್ಥಿತಿ ಬದಲಾವಣೆ ಮತ್ತು ಒತ್ತಡ ಕಾಯಿಲೆಗಳಿಗೆ ಚಿಕಿತ್ಸಕ ಪರಿಣಾಮವನ್ನು ನೀಡುತ್ತದೆ.

ಪುದೀನಾ:
ಮೆಂಡಾಲ್‌ ಇರುವಿಕೆಯಿಂದಾಗಿ ನರಮಂಡಲದ ಕಾಯಿಲೆಗಳನ್ನು ಗುಣಪಡಿಸಲು ಪುದಿನಾವನ್ನು ಬಳಸಲಾಗುತ್ತದೆ. ಇದು ನರಗಳನ್ನು ಶಾಂತಗೊಳಿಸಿ, ತಂಪಾಗಿಸುತ್ತದೆ. ಇದು ವಿಟಮಿನ್‌ ಎ ಮತ್ತು ಸಿ, ಮೆಗ್ನೆಷಿಯಂ, ಮ್ಯಾಂಗನೀಸ್‌, ಕ್ಯಾಲ್ಸಿಯಂ, ಕಬ್ಬಿಣಾಂಶಗಳನ್ನು ಹೊಂದಿದೆ.

ಮಕಾ( ಪೆರುವಿಯನ್‌ ಜಿನ್ಸೆಂಗ್‌)
ಇದು ಪೋಷಕಾಂಶಯುಕ್ತ ಸಸ್ಯವಾಗಿದೆ. ಜೀವಸತ್ವಗಳು, ಅಮೈನೊ ಆಮ್ಲಗಳು , ವಿವಿಧ ಖನಿಜ ಮತ್ತು ಫೈಟೊನ್ಯೂಟ್ರಿಯಂಟ್‌ಗಳ ಸಮೃದ್ಧ ಮೂಲವಾಗಿದ್ದು, ತ್ರಾಣವನ್ನು ಹೆಚ್ಚಿಸುತ್ತದೆ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ಮೂಲಂಗಿ ಜಾತಿಗೆ ಸೇರಿದ ಪೆರುವಿಯನ್‌ ಸಸ್ಯ ನೈಸರ್ಗಿಕ ವೈದ್ಯ ಎಂದು ಸಾಬೀತಾಗಿದೆ. ಇದರಲ್ಲಿ ಅಡಾಪ್ಟೋಜೆನ್‌ ಇರುವಿಕೆಯಿಂದ ಹಾರ್ಮೊನ್‌ ಉತ್ಪಾದನೆಗೆ ಸಹಾಯ ಮಾಡುತ್ತದೆ.

ಯಾವುದೇ ಗಿಡಮೂಲಿಕೆ ಔಷಧಿಗಳಿಗೆ ಬದಲಾಯಿಸುವ ಮೊದಲು ವೈದ್ಯರನ್ನು ಭೇಟಿಯಾಗುವುದು ಉತ್ತಮ. ಏಕೆಂದರೆ ಇದರ ಫ‌ಲಿತಾಂಶ ಮುಖ್ಯವಾಗಿ ಡೋಸೆಜ್‌ ಮತ್ತು ಅವುಗಳನ್ನು ಸೇವಿಸುವ ರೂಪವನ್ನು ಅವಲಂಬಿಸಿರುತ್ತದೆ. ಆದುದರಿಂದ ವೈದ್ಯರ ಸಲಹೆ ಅಗತ್ಯವಾಗಿದೆ. ಗಿಡಮೂಲಿಕೆಯಲ್ಲಿರುವ ಆರೋಗ್ಯಯುಕ್ತ ಅಂಶಗಳು ನಮ್ಮಲ್ಲಿನ ಮಾನಸಿಕ ಖಿನ್ನತೆಗೆ ಮತ್ತು ಆತಂಕವನ್ನು ದೂರವಾಗಿಸಲು ಸಹಕರಿಸುತ್ತದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.