RSS Leader ಡಾ.ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ
Team Udayavani, Jul 11, 2024, 7:40 AM IST
ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಿಬೇಕು ಎಂದು ಕೋರಿ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಹಾಗೂ ಸ್ಥಳೀಯ ಜೆಎಂಎಫ್ಸಿ ಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಮಧ್ಯಾಂತರ ತಡೆ ನೀಡಿ ಆದೇಶಿಸಿದೆ.
ಅರ್ಜಿದಾರ ಪ್ರಭಾಕರ್ ಭಟ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ಘಟನೆ ನಡೆದು ಎರಡು ದಿನಗಳ ಬಳಿಕ ವಿಳಂಬವಾಗಿ ದೂರು ದಾಖಲಿಸಲಾಗಿದೆ. ಇದೊಂದು ರಾಜಕೀಯ ದುರುದ್ದೇಶದಿಂದ ದಾಖಲಿಸಿಕೊಳ್ಳಲಾದ ಪ್ರಕರಣವಾಗಿದೆ. ನ್ಯಾಯಾಲಯದ ಅನುಮತಿ ಪಡೆದುಕೊಳ್ಳದೆ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಅರ್ಜಿದಾರರು ಕಾನೂನು ಪಾಲಕ ನಾಗರಿಕರಾಗಿದ್ದು, ದೂರುದಾರರು ಆರೋಪಿಸಿದಂತಹ ತಪ್ಪು ಅವರು ಎಸಗಿಲ್ಲ. ಆದ್ದರಿಂದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದರು. ಅದರಂತೆ ಮಧ್ಯಾಂತರ ತಡೆ ನೀಡಿದೆ.
ಪ್ರಕರಣದ ಹಿನ್ನೆಲೆ
2023ರ ಡಿ. 24ರ ಮಧ್ಯಾಹ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಹನುಮಮಾಲೆ ಸಂಕೀರ್ತನ ಯಾತ್ರೆ ಸಮಾರಂಭದಲ್ಲಿನ ಸಾರ್ವಜನಿಕ ವೇದಿಕೆಯಲ್ಲಿ ಭಾಷಣ ಮಾಡಿದ್ದ ಡಾ.ಪ್ರಭಾಕರ ಭಟ್, ಮುಸ್ಲಿಂ ಮಹಿಳೆಯರಿಗೆ ಶಾಶ್ವತ ಗಂಡ ಇರಲಿಲ್ಲ. ಅವರಿಗೆ ದಿನಕ್ಕೊಬ್ಬ ಗಂಡ. ಶಾಶ್ವತ ಗಂಡ ಕೊಟ್ಟಿದ್ದು ಮೋದಿ ಎಂದು ಹೇಳಿದ್ದರು ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ 2023ರ ಡಿ. 26ರಂದು ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.