High Court Order: ಮುಖ್ಯಮಂತ್ರಿ ಬದಲಾವಣೆ ಕೂಗಿಗೆ ಮತ್ತೆ ರೆಕ್ಕೆಪುಕ್ಕ
ರಾಜ್ಯದ ಕಾಂಗ್ರೆಸ್ನಲ್ಲಿ ಆರಂಭವಾಗಿದೆ ತಂತ್ರ-ಪ್ರತಿತಂತ್ರ , ಪಕ್ಷದ ವರ್ಚಸ್ಸಿನ ಹೆಸರಲ್ಲಿ ರಾಜಕೀಯ ದಾಳ
Team Udayavani, Sep 25, 2024, 6:57 AM IST
ಬೆಂಗಳೂರು: ಮುಖ್ಯ ಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ “ಸಿಎಂ ಬದಲಾವಣೆ’ ಕೂಗಿಗೆ ಈಗ ರೆಕ್ಕೆಪುಕ್ಕಗಳು ಬಂದಿದ್ದು, ಆಕಾಂಕ್ಷಿಗಳು ಈ ನಿಟ್ಟಿನಲ್ಲಿ ರಾಜಕೀಯ ತಂತ್ರಗಾರಿಕೆಗಳು ಹೆಣೆಯಲು ಆರಂಭಿಸಿದ್ದಾರೆ.
ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆ ಹೊಸ್ತಿಲಲ್ಲಿದೆ. ಅಷ್ಟೇ ಅಲ್ಲ, ಚನ್ನಪಟ್ಟಣ ಸೇರಿ ರಾಜ್ಯದಲ್ಲಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ರಾಷ್ಟ್ರ ಮಟ್ಟದಲ್ಲಿ ಪಕ್ಷ ಕೂಡ ಬಲಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧದ ತನಿಖೆ ನಡೆಸಲು ಅನುಮತಿ ದೊರಕಿದೆ. ಇದು ಪಕ್ಷದ ವರ್ಚಸ್ಸಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಅಂಶಗಳನ್ನು ಮುಂದಿಟ್ಟುಕೊಂಡು ಸಿಎಂ ವಿರೋಧಿಗಳು ದಾಳ ಉರುಳಿಸಲು ಆರಂಭಿಸಿದ್ದಾರೆ.
ಈ ಮೊದಲೇ ಪಕ್ಷದಲ್ಲಿ 2 ಬಣಗಳಿದ್ದವು. ಅವರೆಡರ ನಡುವಿನ ಮುಸುಕಿನ ಗುದ್ದಾಟ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯಿಂದ ಹಿಡಿದು ಹಲವು ಸಂದರ್ಭಗಳಲ್ಲಿ ಬಹಿರಂಗಗೊಂಡಿದ್ದೂ ಇದೆ. ಆದರೆ ಸಿಎಂ ವಿರುದ್ಧ ಕೇಳಿಬಂದ ಮುಡಾ ನಿವೇಶನ ಹಂಚಿಕೆ ಹಗರಣದ ಆರೋಪ ಈ ಬಣಗಳನ್ನು ಒಗ್ಗೂಡಿಸಿತ್ತು. ಇದಕ್ಕೆ ಕಾರಣವೂ ಇತ್ತು. ಒಂದು ವಿಪಕ್ಷಗಳ ತಂತ್ರಗಾರಿಕೆಯನ್ನು ಹಣಿಯುವುದು, ಮತ್ತೂಂದು ಹೈಕಮಾಂಡ್ ಸಿಎಂ ಬೆನ್ನಿಗೆ ನಿಂತಿದ್ದಲ್ಲದೆ ಸಚಿವರು ಮತ್ತು ಶಾಸಕರಿಗೂ ಸ್ಪಷ್ಟ ಸೂಚನೆ ನೀಡಿತ್ತು. ಈಗ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಆ ಒಗ್ಗಟ್ಟಿನಲ್ಲಿ ಬಿರುಕು ಕಾಣಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್
3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ
MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್
Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ
SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.