High Court: ಪ್ರಜ್ವಲ್ “ಮಾಸ್ ರೆಪಿಸ್ಟ್’ ಹೇಳಿಕೆ: ರಾಹುಲ್ ತುರ್ತು ವಿಚಾರಣೆ ಇಲ್ಲ!
ಸಾರ್ವಜನಿಕ ಹಿತಾಸಕ್ತಿ ಅರ್ಜಿ ತುರ್ತಾಗಿ ವಿಚಾರಣೆ ನಡೆಸಲು ಹೈಕೋರ್ಟ್ ನಿರಾಕರಣೆ
Team Udayavani, Sep 27, 2024, 6:55 AM IST
ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಚಾರ ಭಾಷಣ ಮಾಡುವಾಗ ಹಾಸನದ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪವನ್ನು ಟೀಕಿಸುವ ಭರದಲ್ಲಿ ಮಹಿಳೆಯರಿಗೆ ಮಾನ ಹಾನಿಯಾಗುವಂತೆ ಹೇಳಿಕೆ ನೀಡಿರುವ ಆರೋಪ ಸಂಬಂಧ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಹೈಕೋರ್ಟ್ ನಿರಾಕರಿಸಿದೆ.
ಈ ವಿಚಾರವಾಗಿ ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷ ಚಿ.ನಾ. ರಾಮು ಮತ್ತು ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ ನ್ಯಾಯ ಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಸ್ವಲ್ಪ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವ ಅಗತ್ಯವಿಲ್ಲ. ಹಾಗಾಗಿ, ಈ ಹಂತದಲ್ಲಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸುವ ಅವಶ್ಯಕತೆಯೂ ಇಲ್ಲ ಎಂದು ಹೇಳಿ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ಮುಂದೂಡಿತು.
ಪೆನ್ಡ್ರೈವ್ ಹಂಚಿಕೆ: ಪ್ರೀತಂ ವಿರುದ್ಧ ತನಿಖೆಗೆ ತಡೆ ಇಲ್ಲ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಪೆನ್ಡ್ರೈವ್ಗಳನ್ನು ಹಂಚಿದ ಆರೋಪದ ಸಂಬಂಧ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ತನಿಖೆಗೆ ಮಧ್ಯಾಂತರ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್ ತನಿಖೆ ಮುಂದುವರಿಸುವಂತೆ ಸೂಚಿಸಿದೆ.
ಪ್ರೀತಂ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ
Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು
Kottigehara: ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
World Tourism Day 2024: ಮಧ್ಯ ಕರ್ನಾಟಕದ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದೀರಾ?
Munirathna Case: ವಿಕಾಸಸೌಧದಲ್ಲೇ ಮುನಿರತ್ನ ರೇಪ್; ಸಂತ್ರಸ್ತೆ
Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.