ಹಳೆಯಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಕಿನ ಭಾಗ್ಯ!


Team Udayavani, Apr 28, 2023, 7:05 AM IST

ಹಳೆಯಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಕಿನ ಭಾಗ್ಯ!

ಹಳೆಯಂಗಡಿ: ಸುರತ್ಕಲ್‌ನಿಂದ ಕುಂದಾಪುರದ ವರೆಗೆ ರಾಷ್ಟ್ರೀಯ ಹೆದ್ದಾರಿ ಪ್ರಮುಖ ಜಂಕ್ಷನ್‌ಗಳಲ್ಲಿ ಹೈಮಾಸ್ಟ್‌ ದೀಪವನ್ನು ಅಳವಡಿಸಬೇಕೆಂಬ ಸಾರ್ವಜನಿಕರ ಬೇಡಿಕೆಯನ್ನು ಈಡೇರಿಸಲು ಕೊನೆಗೂ ಹೆದ್ದಾರಿಯ ನಿರ್ವಹಣೆ ನಡೆಸುತ್ತಿರುವ ನವಯುಗ ಸಂಸ್ಥೆ ಮುಂದಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಪ್ರದೇಶಗಳಾದ ಮುಕ್ಕ, ಹಳೆಯಂಗಡಿ, ಮೂಲ್ಕಿ, ಬಪ್ಪನಾಡು, ಪಡುಬಿದ್ರಿ, ಕಾಪು, ಕಟಪಾಡಿ, ಬಲಾಯಿಪಾದೆ, ಕಿನ್ನಿಮೂಲ್ಕಿ, ಸಂತೆಕಟ್ಟೆ, ಬ್ರಹ್ಮಾವರ, ಕೋಟ, ಸಾಲಿಗ್ರಾಮ, ಕುಂದಾಪುರ ಶಾಸಿŒ ಸರ್ಕಲ್‌ಗ‌ಳಲ್ಲಿ ಬೃಹತ್‌ ಹೈಮಾಸ್ಟ್‌ ದೀಪಗಳನ್ನು ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿದೆ.

ಸುಮಾರು 100 ಅಡಿ (33 ಮೀಟರ್‌) ಎತ್ತರದ ಈ ಕಂಬದಲ್ಲಿ ಎಂಟು ದೀಪಗಳು ಪ್ರಜ್ವಲಿಸಲಿವೆ. ಪ್ರತೀ ಒಂದು ದೀಪದ ಗುತ್ಛಕ್ಕೆ ಸುಮಾರು 8 ಲಕ್ಷ ರೂ. ವೆಚ್ಚವಾಗಲಿದೆ ಎಂದು ನವಯುಗ ಸಂಸ್ಥೆಯ ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯಾದ ಬಳಿಕ ಪ್ರಮುಖ ಜಂಕ್ಷನ್‌ಗಳಲ್ಲಿ ರಸ್ತೆಯ ಅಕ್ಕಪಕ್ಕದ ದಾರಿ ದೀಪಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದವು. ಇದೀಗ ಈ ಬೃಹತ್‌ ಹೈಮಾಸ್ಟ್‌ ದೀಪ ಗಳಿಂದ ರಾತ್ರಿ ಸಮಯದಲ್ಲಿ ಬೆಳಕಿನ ಭಾಗ್ಯ ಸಿಗಲಿದೆ.

ಈ ಕಾಮಗಾರಿಯ ಜತೆಗೆ ಕೆಲವೊಂದು ಕಡೆಯಲ್ಲಿ ಸರ್ವಿಸ್‌ ರಸ್ತೆ ಹಾಗೂ ರಸ್ತೆ ಅಭಿವೃದ್ಧಿಯಾಗಿ ದಾರಿ ದೀಪವನ್ನು ಅಳವಡಿಸುವ ಕಾಮಗಾರಿ ಕೂಡ ನಡೆಯಲಿದೆ.

ನಾಗರಿಕ ಸಮಿತಿ ಮನವಿ
ಎರಡು ವರ್ಷಗಳ ಹಿಂದೆ ಧರ್ಮದರ್ಶಿ ಡಾ| ಹರಿಕೃಷ್ಣ ಪುನರೂರು ಅವರ ನೇತೃತ್ವದ ಮೂಲ್ಕಿ ನಾಗರಿಕ ಸಮಿತಿಯು ಪ್ರಮುಖ ಜಂಕ್ಷನ್‌ಗಳಲ್ಲಿ ಬೆಳಕಿನ ವ್ಯವಸ್ಥೆ ಕಲ್ಪಿಸುವಂತೆ ವಿಸ್ತೃತವಾದ ಮನವಿಯನ್ನು ಸುಮಾರು 38 ಸಂಘ – ಸಂಸ್ಥೆಗಳ ಸಹಿತ ನಗರ ಪಂಚಾಯತ್‌, ಗ್ರಾ.ಪಂ.ಗಳ ಬೇಡಿಕೆಯ ಶಿಫಾರಸಿನೊಂದಿಗೆ ನವಯುಗ್‌ ಸಂಸ್ಥೆಗೆ ನೀಡಿತ್ತು. ಅಲ್ಲದೇ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದ್ದ ನವಯುಗ ಸಂಸ್ಥೆಯ ವಿದ್ಯುತ್‌ ಗುತ್ತಿಗೆದಾರ ಬಾಬು ರೆಡ್ಡಿ ಅವರಲ್ಲಿಯೂ ಮನವಿ ಮಾಡಲಾಗಿತ್ತು.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.