Highway Problem: ಕುಂದಾಪುರ -ತಲಪಾಡಿ ಹೆದ್ದಾರಿಯಲ್ಲಿ ನೀರು ನಿಲ್ಲುವ 40 ಸ್ಥಳಗಳ ಗುರುತು

ಗುತ್ತಿಗೆ ಕಂಪೆನಿಯಿಂದ ಸರ್ವೆ ಕಾರ್ಯ ಆರಂಭ

Team Udayavani, Oct 20, 2024, 7:03 AM IST

Servey-Road

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರದಿಂದ ಸುರತ್ಕಲ್‌ (ಎನ್‌ಐಟಿಕೆ) ವರೆಗಿನ ಮತ್ತು ನಂತೂರು ಜಂಕ್ಷನ್‌ನಿಂದ ತಲಪಾಡಿಯವರೆಗಿನ ಚತುಷ್ಪಥ ಹೆದ್ದಾರಿ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಸ್ಥಳಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕಾಮಗಾರಿಯ ಗುತ್ತಿಗೆ ಕಂಪೆನಿಯಿಂದ ಸರ್ವೆ ಆರಂಭಗೊಂಡಿದೆ.

ಕುಂದಾಪುರದಿಂದ ಸುರತ್ಕಲ್‌ (ಎನ್‌ಐಟಿಕೆ) ನಡುವಿನ ತಲಾ 80 ಕಿ.ಮೀ., ನಂತೂರು ಜಂಕ್ಷನ್‌ನಿಂದ ತಲಪಾಡಿ ನಡುವಣ 15 ಕಿ.ಮೀ. ರಾಷ್ಟ್ರೀಯ ಹೆದ್ದಾರಿ 66ರ ಇಕ್ಕೆಲಗಳಲ್ಲಿ, ಡಿವೈಡರ್‌ ಬಳಿ ಅಲ್ಲಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ತೊಂದರೆಯುಂಟಾಗುತ್ತದೆ ಮಾತ್ರವಲ್ಲದೆ ಆಗಾಗ ಅಪಘಾತಗಳು ಉಂಟಾಗಿ ಹಲವಾರು ಸಾವುನೋವು ಸಂಭವಿಸಿದೆ.

40 ಸ್ಥಳ ಗುರುತು
ರಾ.ಹೆ. 66ರ ಕುಂದಾಪುರ – ಸುರತ್ಕಲ್‌ ನಡುವೆ ಮತ್ತು ನಂತೂರು – ತಲಪಾಡಿ ನಡುವಿನ ಚತುಷ್ಪಥ ಹೆದ್ದಾರಿಯ ಎರಡು ಬದಿಯ ಒಟ್ಟು 190 ಕಿ.ಮೀ. ರಸ್ತೆಯಲ್ಲಿ ನೀರು ನಿಲ್ಲುವ 40 ಸ್ಥಳಗಳನ್ನು ಗುರುತಿಸಲಾಗಿದೆ. ಇಲ್ಲಿ ನೀರು ನಿಲ್ಲಲು ಕಾರಣಗಳೇನು, ಸಮತಟ್ಟುಗೊಳಿಸಬೇಕಾದ ಅಗತ್ಯ ಇತ್ಯಾದಿ ಅಂಶಗಳನ್ನು ಸರ್ವೆಯಲ್ಲಿ ಗೊತ್ತುಪಡಿಸಲಾಗುತ್ತಿದೆ.

ಎಲ್ಲೆಲ್ಲಿ ಸರ್ವೆ?
ಕುಂದಾಪುರ – ಸುರತ್ಕಲ್‌ ನಡುವಿನ ಕುಂದಾಪುರ, ಕೋಟ, ಸಾಸ್ತಾನ, ಬ್ರಹ್ಮಾವರ, ಉಚ್ಚಿಲ, ಉಡುಪಿ, ಅಂಬಲಪಾಡಿ, ಕಿನ್ನಿಮೂಲ್ಕಿ, ಪಾಂಗಾಳ, ಕೋತಲಕಟ್ಟೆ, ಕಾಪು, ಕೊಪ್ಪಲಂಗಡಿ, ಮೂಳೂರು, ಉಚ್ಚಿಲ, ಎರ್ಮಾಳು, ಹೆಜಮಾಡಿ, ಕೊಲಾ°ಡು, ಪಾವಂಜೆ ಹಾಗೂ ನಂತೂರು – ತಲಪಾಡಿ ನಡುವಿನ ಕಲ್ಲಾಪು, ಕೆ.ಸಿ. ರೋಡ್‌ ಸಹಿತ 40 ಸ್ಪಾಟ್‌ಗಳಲ್ಲಿ ಸರ್ವೆ ನಡೆಯುತ್ತಿದೆ.

ಉಡುಪಿ ಜಿಲ್ಲೆಯಿಂದ ಸರ್ವೆ ಆರಂಭ
ಹೆದ್ದಾರಿ ಕಾಮಗಾರಿಯ ನಿರ್ವಹಣ ಉಸ್ತುವಾರಿ ವಹಿಸಿಕೊಂಡಿರುವ ಹೈವೇ ಕನ್ಸೇಷನ್ಸ್‌ ವನ್‌ ಕಂಪೆನಿಯ ಸರ್ವೆ ತಂಡ ಪ್ರಥಮ ಹಂತದಲ್ಲಿ ಉಡುಪಿ ಜಿಲ್ಲೆಯ ಹೆದ್ದಾರಿಯಲ್ಲಿ ಸರ್ವೆ ನಡೆಸುತ್ತಿದ್ದು, ಇದು ಮುಗಿದ ಬಳಿಕ ದ.ಕ.ದಲ್ಲಿ ಮುಂದುವರಿಸಲಿದೆ.

6 ತಿಂಗಳಲ್ಲಿ ಕಾಮಗಾರಿ ಪೂರ್ಣ
ಸರ್ವೆ ಬಳಿಕ ಅದರ ವರದಿಯನ್ನು ಕಂಪೆನಿ ಮತ್ತು ರಾ.ಹೆ. ಪ್ರಾಧಿಕಾರಕ್ಕೆ ನೀಡಲಿದ್ದು, ಅವರಿಂದ ಕಾಮಗಾರಿಗೆ ಮಂಜೂರಾತಿ ಪಡೆದು 4ರಿಂದ 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಸರ್ವೆ ತಂಡದ ಪ್ರತಿನಿಧಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಉದಯವಾಣಿ ನಿರಂತರ ವರದಿ
ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ಅಪಾಯಕಾರಿ ಎನಿಸುವ ಪ್ರದೇಶಗಳನ್ನು ಗುರುತಿಸಿ, “ಉದಯವಾಣಿ’ಯು ನಿರಂತರ ವರದಿ ಪ್ರಕಟಿಸುವ ಮೂಲಕ ಜನಪ್ರತಿನಿಧಿಗಳು, ಸರಕಾರ, ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆದಾರರ ಗಮನ ಸೆಳೆಯುವ ಪ್ರಯತ್ನ ನಡೆಸಿತ್ತು. ಸತತ ವರದಿಗಳು ಮತ್ತು ಜನಪ್ರತಿನಿಧಿಗಳ ವಿಶೇಷ ಒತ್ತಡದ ಬಳಿಕ ಕೊನೆಗೂ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತವು ಸಮಸ್ಯೆ ಬಗೆಹರಿಸುವಂತೆ ಹೆದ್ದಾರಿ ಇಲಾಖೆಯ ಮೂಲಕ ಗುತ್ತಿಗೆದಾರರಿಗೆ ಸೂಚನೆ ನೀಡಿದೆ.

– ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

INDvsNZ: A huge win for New Zealand in Bengaluru

INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

nirbhaya-bike

Women, Child Safety: ಗ್ರಾಮೀಣ ಭಾಗದಲ್ಲಿ ಸಕ್ರಿಯವಾಗಿಲ್ಲ ನಿರ್ಭಯ ಬೈಕ್‌

19

Udupi: ಅಕ್ರಮ ಬಾಂಗ್ಲಾ ವಲಸಿಗರಿಗೆ ನ್ಯಾಯಾಂಗ ಬಂಧನ

Krishna-Mata-Udupi

Udupi: ಅ.24-26: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ 23 ಗೋಷ್ಠಿಗಳು

DK-DC

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

2

Dandeli: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.