Cloudbrust:ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ-45 ಮಂದಿ ಕಣ್ಮರೆ, ರಕ್ಷಣಾ ಕಾರ್ಯ ಮುಂದುವರಿಕೆ
ನಾಲ್ವರನ್ನು ರಕ್ಷಿಸುವ ಕಾರ್ಯ ಮುಂದುವರಿದಿದೆ
Team Udayavani, Aug 2, 2024, 1:09 PM IST
ಹಿಮಾಚಲಪ್ರದೇಶ: ಹಿಮಾಚಲ ಪ್ರದೇಶದಲ್ಲಿ ಬುಧವಾರ (ಜು.31) ಸಂಭವಿಸಿದ್ದ ಮೇಘಸ್ಫೋಟದಿಂದಾಗಿ ಭಾರೀ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸುಮಾರು 45 ಮಂದಿ ನಾಪತ್ತೆಯಾಗಿದ್ದಾರೆ. ರಾತ್ರಿಯಿಡೀ ಕಾರ್ಯಾಚರಣೆ ನಡೆಸುವ ಮೂಲಕ 29 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಶುಕ್ರವಾರ (ಆ.02) ಅಧಿಕಾರಿಗಳು ತಿಳಿಸಿದ್ದಾರೆ.
ಕುಲ್ಲುವಿನ ನಿರ್ಮಂಡ್, ಸೈಂಜ್ ಮತ್ತು ಮಲಾನಾ ಪ್ರದೇಶಗಳಲ್ಲಿ ಹಾಗೂ ಶಿಮ್ಲಾ ಜಿಲ್ಲೆಯ ಮಾಂಡಿ ಮತ್ತು ರಾಮ್ ಪುರ್ ನಲ್ಲಿ ಬುಧವಾರ ಮೇಘಸ್ಫೋಟ ಸಂಭವಿಸಿದ್ದು, ಇದರ ಪರಿಣಾಮ ಐವರು ಸಾವನ್ನಪ್ಪಿದ್ದು, 45ಕ್ಕೂ ಅಧಿಕ ಮಂದಿ ನಾಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.
ಕುಲು ಜಿಲ್ಲೆಯ ಮಣಿಕರಣ್ ಪ್ರದೇಶದ ಮಲಾನಾ II ವಿದ್ಯುತ್ ಯೋಜನೆಯಲ್ಲಿ ಕನಿಷ್ಠ 33 ಮಂದಿ ಸಿಲುಕಿಕೊಂಡಿದ್ದು, ಇದರಲ್ಲಿ 29 ಜನರನ್ನು ರಕ್ಷಿಸುವ ಮೂಲಕ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಧಾರಾಕಾರ ಮಳೆಯಿಂದಾಗಿ ಗೋಡೆ, ಸೇತುವೆಗಳು ಹಾನಿಗೊಂಡಿದ್ದು, ಎಲ್ಲಾ ಅಡೆತಡೆ ನಡುವೆಯೂ ಎನ್ ಡಿಆರ್ ಎಫ್ ತಂಡ 29 ಜನರನ್ನು ರಕ್ಷಿಸಿದ್ದು, ಪವರ್ ಹೌಸ್ ಒಳಗೆ ಸಿಲುಕಿಕೊಂಡಿರುವ ನಾಲ್ವರನ್ನು ರಕ್ಷಿಸುವ ಕಾರ್ಯ ಮುಂದುವರಿದಿದೆ ಎಂದು ವರದಿ ವಿವರಿಸಿದೆ.
ಮೇಘಸ್ಫೋಟದಿಂದ ಅಪಾಯದಲ್ಲಿ ಸಿಲುಕಿಕೊಂಡವರನ್ನು ಭಾರತೀಯ ಸೇನೆ, ಎನ್ ಡಿಆರ್ ಎಫ್, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಪೊಲೀಸ್, ಹೋಮ್ ಗಾರ್ಡ್ಸ್ ರಕ್ಷಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.