D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Team Udayavani, Apr 29, 2024, 12:25 AM IST
ಮಂಗಳೂರು/ಉಡುಪಿ: ಚುನಾವಣೆ, ಸತತ ಎರಡು ದಿನ ರಜೆ, ಶುಭ ಸಮಾರಂಭಗಳ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ವಾಹನ ದಟ್ಟಣೆ ಕಂಡು ಬಂತು.
ಸಾಮಾನ್ಯವಾಗಿ ರವಿವಾರ ಬೆಳಗ್ಗೆ, ಮಧ್ಯಾಹ್ನ ವೇಳೆ ಮಂಗಳೂರು, ಉಡುಪಿ ನಗರದಲ್ಲಿ ವಾಹನ ದಟ್ಟಣೆ ಕಡಿಮೆ ಇರುತ್ತದೆ. ಆದರೆ ರಜೆ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ನಗರದ ಬೆಳಗ್ಗಿನಿಂದಲೇ ವಾಹನ ದಟ್ಟಣೆ ಕಂಡು ಬಂತು. ಮಧ್ಯಾಹ್ನ ವೇಳೆ ಕೆಲವು ಮದುವೆ ಹಾಲ್ಗಳ ಬಳಿ ಬ್ಲಾಕ್ ಉಂಟಾಗಿತ್ತು.
ಮಂಗಳೂರು ಹಾಗೂ ಉಡುಪಿ ನಗರ ವ್ಯಾಪ್ತಿಯ ಪ್ರವಾಸಿ ಕೇಂದ್ರಗಳಲ್ಲಿ ಸಂಜೆ ವೇಳೆ ಜನರು ಹೆಚ್ಚಾಗಿ ಕಂಡು ಬಂದರು. ಮಂಗಳೂರಿನ ತಣ್ಣೀರು ಬಾವಿ, ಪಣಂಬೂರು ಸಹಿತ ವಿವಿಧ ಬೀಚ್, ಕದ್ರಿ ಪಾರ್ಕ್, ಪಿಲಿಕುಳ ನಿಸರ್ಗಧಾಮ, ಉಡುಪಿಯ ಮಲ್ಪೆ ಬೀಚ್, ಶ್ರೀಕೃಷ್ಣ ಮಠ ಮೊದಲಾದೆಡೆಗಳಿಗೆ ಸ್ಥಳೀಯ ಹಾಗೂ ಹೊರ ಜಿಲ್ಲೆಗಳಿಂದ ಪ್ರವಾಸಿಗರು ಬಂದಿದ್ದರು. ದೇವಸ್ಥಾನಗಳಲ್ಲಿಯೂ ಭಕ್ತರ ಸಂಖ್ಯೆ ಹೆಚ್ಚಿತ್ತು.
ಹೆದ್ದಾರಿಗಳಲ್ಲೂ ಸಂಚಾರ ಹೆಚ್ಚಳ
ಹೆದ್ದಾರಿಗಳಲ್ಲಿ ವಾಹನ ಸಂಚಾರ ಹೆಚ್ಚಿತ್ತು. ಘನ ವಾಹನಗಳ ಜತೆ ಕಾರು ಮೊದಲಾದವುಗಳ ಸಂಚಾರ ಹೆಚ್ಚಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.