![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 29, 2020, 3:59 PM IST
ಮುಂಬಯಿ: ಸುಶಾಂತ್ ಸಿಂಗ್ ಅವರ ಸಾವಿನ ಕುರಿತಾದ ಅನುಮಾನಗಳು ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದೆ.
ಮಂಗಳವಾರ ನಟಿ ರಿಯಾ ಚಕ್ರವರ್ತಿ ಅವರ ವಿರುದ್ಧ ಸುಶಾಂತ್ ಅವರ ತಂದೆ ಪಟ್ನಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಕುರಿತಂತೆ ಬುಧವಾರ ಸುಶಾಂತ್ ಸಿಂಗ್ ರಜಪೂತ್ ಅವರ ಸೋದರ ಸಂಬಂಧಿ ಬಿಜೆಪಿ ಶಾಸಕರೂ ಆಗಿರುವ ನೀರಜ್ ಕುಮಾರ್ ಸಿಂಗ್ ಬಬ್ಲು ಅವರು ರಿಯಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಸುಶಾಂತ್ ಸಿಂಗ್ ಅವರ ಖಾತೆಯಿಂದ ಅಪಾರ ಪ್ರಮಾಣದ ಹಣವನ್ನು ವರ್ಗಾಯಿಸಲಾಗಿದೆ ಎಂದು ನೀರಜ್ ಹೇಳಿದ್ದಾರೆ. ಈ ಕಾರಣಕ್ಕೆ ನಟಿ ರಿಯಾ ಚಕ್ರವರ್ತಿ ವಿರುದ್ಧ ಸುಶಾಂತ್ ಸಿಂಗ್ ಅವರ ತಂದೆ ಎಫ್ಐಆರ್ ದಾಖಲಿಸಿದ್ದಾರೆ. ಏಕೆಂದರೆ ಅವರ ಖಾತೆಗೆ ದೊಡ್ಡ ಮೊತ್ತವನ್ನು ವರ್ಗಾಯಿಸಲಾಗಿದೆ. ಅವರಿಬ್ಬರೂ ಕೆಲವು ಕಂಪನಿಗಳ ಜಂಟಿ ಖಾತೆಗಳನ್ನು ಹೊಂದಿದ್ದಾರೆ. ಅದರ ಮೂಲಕ ರಿಯಾ ಮೋಸ ಮಾಡಿದ್ದಾರೆ. ತನಿಖೆಯ ಬಳಿಕ ಈ ಎಲ್ಲ ಸತ್ಯ ಸಂಗತಿಗಳು ಬಹಿರಂಗಗೊಳ್ಳುತ್ತವೆ ಎಂದು ಬಬ್ಲು ಹೇಳಿದರು.
ಯಾರೀಕೆ ಸುಶಾಂತ್ ಸಖಿ ರಿಯಾ ಚಕ್ರವರ್ತಿ ; ಏನಿದು ಪ್ರಕರಣ: ಇಲ್ಲಿದೆ ಫುಲ್ ಡಿಟೇಲ್ಸ್
ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಣ್ ಜೋಹರ್ ಅವರನ್ನು ಮುಂಬಯಿ ಪೊಲೀಸರು ವಿಚಾರಣೆಗೆ ಕರೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸುಶಾಂತ್ ಸಿಂಗ್ ಸಾವಿನ ಕುರಿತು ಚಿತ್ರರಂಗದ ಕೆಲವು ಖ್ಯಾತನಾಮರು ಅನುಮಾನ ವ್ಯಕ್ತಪಡಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಪಟ್ನಾದಲ್ಲಿ ಎಫ್ಐಆರ್ ದಾಖಲಾದ ಬಳಿಕ ನಾಲ್ಕು ಸದಸ್ಯರ ತಂಡವನ್ನು ಮುಂಬಯಿಗೆ ಕಳುಹಿಸಲಾಗಿದೆ. ಈ ತಂಡವು ಮುಂಬಯಿ ಪೊಲೀಸರಿಂದ ಕೇಸ್ ಡೈರಿ ಮತ್ತು ಇತರ ಪ್ರಮುಖ ದಾಖಲೆಗಳನ್ನು ಸಂಗ್ರಹಿಸಲಿದೆ.
ಸುಶಾಂತ್ ಅವರ ತಂದೆಯ ಪ್ರಕಾರ, ರಿಯಾ ಚಕ್ರವರ್ತಿ ತನ್ನ ವರ್ಚಸ್ಸನ್ನು ವೃದ್ಧಿಸಲು ಸುಶಾಂತ್ನನ್ನು ಬಳಸಿಕೊಂಡಿದ್ದಾಳೆ. ಸುಶಾಂತ್ನ ಸಂಪರ್ಕಗಳನ್ನು ಬಳಸಿಕೊಂಡು ಬಾಲಿವುಡ್ ಚಿತ್ರೋದ್ಯಮದಲ್ಲಿ ತನ್ನನ್ನು ತಾನು ಒಳ್ಳೆಯ ನಿಟ್ಟಿನಲ್ಲಿ ಸ್ಥಾಪಿಸಿಕೊಳ್ಳುವ ಉದ್ದೇಶವನ್ನು ಇಟ್ಟಿದ್ದಳು ಎಂದಿದ್ದಾರೆ. ರಿಯಾ ಅವರ ಸಂಬಂಧಿಕರು ಸುಶಾಂತ್ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಲು ಪ್ರಾರಂಭಿಸಿದರು ಎಂದು ದೂರಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.