ಕಾಡು ಪ್ರಾಣಿಗಳ ಹಾವಳಿ ತಡೆಗೆ ಗ್ರಾಮಸ್ಥರ ಪ್ರತಿಭಟನೆ : ಶಾಸಕರಿಂದ ಅರಣ್ಯಾಧಿಕಾರಿಗಳ ತರಾಟೆ


Team Udayavani, Feb 3, 2022, 8:42 PM IST

ಕಾಡು ಪ್ರಾಣಿಗಳ ಹಾವಳಿಗೆ ಗ್ರಾಮಸ್ಥರ ಪ್ರತಿಭಟನೆ : ಶಾಸಕರಿಂಗ ಅರಣ್ಯ ಅಧಿಕಾರಿಗಳ ತರಾಟೆ

ಹುಣಸೂರು : ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸುವವರೆಗೂ ರಾಜೇಶನ ಶವವನ್ನು ತೆಗೆಯುವುದಿಲ್ಲವೆಂದು ಕುಟುಂಬದವರೊಂದಿಗೆ ಗ್ರಾಮಸ್ಥರು ಪಟ್ಟ ಹಿಡಿದ ಘಟನೆ ತಾಲೂಕಿನ ಕೊಳವಿಗೆಯಲ್ಲಿ ನಡೆಯಿತು.

ವಿಷಯ ತಿಳಿದ ಶಾಸಕ ಎಚ್.ಪಿ.ಮಂಜುನಾಥ್ ಸ್ಥಳಕ್ಕಾಗಮಿಸಿ ಗ್ರಾಮಸ್ಥರಿಂದ ಮಾಹಿತಿ ಪಡೆದರು.

ಈ ವೇಳೆ ಎಪಿಎಂಸಿ.ಅಧ್ಯಕ್ಷ ಮುದಗನೂರುಸುಭಾಷ್, ಮುಖಂಡರಾದ ವೆಂಕಟೇಶ್, ಮಹೇಶ್ ಇತರರು ಮಾತನಾಡಿ ಕಾಡಂಚಿನ ಗ್ರಾಮಗಳಲ್ಲಿ ಒಂದೆಡೆ ಕಾಡಾನೆ ಮತ್ತೊಂದೆಡೆ ಹುಲಿ ಕಾಟವೂ ಹೆಚ್ಚಿದ್ದು, ಮಾಹಿತಿ ನೀಡಿದರೂ ಅರಣ್ಯ ಇಲಾಖೆ ಅಧಿಕಾರಿಗಳು ಬೇಜವಾಬ್ದಾರಿ ಉತ್ತರ ನೀಡುತ್ತಾರೆ, ಮಾಹಿತಿ ನೀಡುವವರನ್ನೇ ಬೆದರಿಸುತ್ತಾರೆ, ಹೀಗಾದರೆ ಹಳ್ಳಿಗರು ಏನು ಮಾಡಲು ಸಾಧ್ಯ, ನಮಗೆ ಅಧಿಕಾರ ನೀಡಿ ಕಾಡಾನೆಗಳ ಉಪಟಳವನ್ನು ನಾವೇ ನಿಲ್ಲಿಸುತ್ತೇವೆ. ಇಲ್ಲವೇ ಆನೆ-ಹುಲಿಗಳನ್ನು ಕಾಡಿನಿಂದ ಹೊರಬರದಂತೆ ನೋಡಿಕೊಳ್ಳಬೇಕು. ತಾತ್ಸಾರ ಮಾಡುವ ಅಧಿಕಾರಿಯನ್ನು ಅಮಾನತ್ತು ಪಡಿಸಬೇಕೆಂದು ಪಟ್ಟು ಹಿಡಿದರು.

ಗ್ರಾಮಸ್ಥರ ಅಹವಾಲು ಆಲಿಸಿದ ಶಾಸಕರು ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೊಳಪಡಿಸಿ ನಿಮ್ಮಿಷ್ಟದಂತೆ ಕೆಲಸ ಮಾಡೋದಲ್ಲ. ಜನರ ಪ್ರಶ್ನೆಗೆ ನೀವೇ ಉತ್ತರ ನೀಡಿ, ರೈಲ್ವೆ ಹಳಿ ಕಾಮಗಾರಿ ಇನ್ನೂ ಸಂಪೂರ್ಣವಾಗಿಲ್ಲವೇ. ಅಲ್ಲಿಯವರೆಗೆ ಕಾಡಂಚಿನ ಗ್ರಾಮಗಳಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಬೇಕು. ರೈತರೊಂದಿಗೆ ಸೌಜನ್ಯದಿಂದ ವರ್ತಿಸಬೇಕೆಂದು ಎಚ್ಚರಿಸಿದರು. ಈ ವೇಳೆ ಮಾಹಿತಿ ನೀಡಿದ ಎಸಿಎಫ್ ಮೂರು ಕಿ.ಮೀ. ಬಾಕಿ ಉಳಿದಿದ್ದು, ಟೆಂಡರ್ ಆಗಿದೆ, ಕಾಮಗಾರಿ ಆರಂಭಿಸಲು ಸೂಚಿಸಲಾಗುವುದೆಂದರು.

ಇದನ್ನೂ ಓದಿ : ಬೇಟಿ ಬಚಾವೋ,ಬೇಟಿ ಪಡಾವೋ ಪೊಳ್ಳು ಘೋಷಣೆ: ಹಿಜಾಬ್ ವಿವಾದಕ್ಕೆ ಮುಫ್ತಿ

ಹಗಲಿನಲ್ಲಿ ತ್ರೀಫೇಸ್ ವಿದ್ಯುತ್ ನೀಡಿ:
ಕಾಡಂಚಿನ ದೊಡ್ಡಹೆಜ್ಜೂರು ಹಾಗೂ ಕಿರಂಗೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ರಾತ್ರಿ ವೇಳೆ ತ್ರೀಫೇಸ್ ಕೊಡುತ್ತಾರೆ, ಹೀಗಾಗಿ ತೋಟದ ಕೆಲಸ ರಾತ್ರಿವೇಳೆ ಮಾಡಬೇಕು. ಹಗಲಿನಲ್ಲಿ ತ್ರೀಫೇಸ್ ಕೊಡಲು ಪರಿಶೀಲಿಸಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸಂಪರ್ಕ ಕಲ್ಪಿಸಬೇಕೆಂದು ಎಇಇ.ಸಿದ್ದಪ್ಪರಿಗೆ ಶಾಸಕರು ಸೂಚಿಸಿದರು.

ಹೆಚ್ಚಿನ ಕಾವಲಿಗೆ ಭರವಸೆ, ಪ್ರತಿಭಟನೆ ಹಿಂದಕ್ಕೆ:
ಗ್ರಾಮಸ್ಥರು ರಾಜೇಶನ ಶವವನ್ನು ಮರಣೋತ್ತರ ಪರೀಕ್ಷೆ ಮಾಡಿಸಲು ಸಹಕಾರ ನೀಡಬೇಕು. ಅರಣ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚಿನ ಸಿಬ್ಬಂದಿ ನೇಮಿಸಲು ಕ್ರಮವಹಿಸಲಾಗುವುದು. ತಾತ್ಕಾಲಿಕವಾಗಿ 2 ಲಕ್ಷರೂ ಪರಿಹಾರ ನೀಡಲಾಗುತ್ತಿದ್ದು, ಬಾಕಿ ಉಳಿದ 5.50 ಲಕ್ಷರೂವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಿಸಲು ಕ್ರಮವಹಿಸುತ್ತೇನೆಂಬ ಶಾಸಕರ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆದರು.

ಅಧಿಕಾರಿಗಳಿಗೆ ತರಾಟೆ: ಕಾಡಿನ ಬಗ್ಗೆ ಪ್ರೀತಿ ಇರಲಿ, ಜನರೊಂದಿಗೆ ಸೌಜನ್ಯದಿಂದ ವರ್ತಿಸಿ: ಏನ್ರೀ ನಿಮಗೆ ಕಾಡು ಕಾಯೋಕೂ ಆಗಲ್ಲ, ವನ್ಯಪ್ರಾಣಿ- ಕೆಳಹಂತದ ಸಿಬ್ಬಂದಿಗಳ ಮೇಲೆ ಪ್ರೀತಿನೂ ಇಲ್ಲ, ಸಾರ್ವಜನಿಕರೊಂದಿಗೆ ಸೌಜನ್ಯದೊಂದಿಗೆ ವರ್ತಿಸಿ, ಇಲ್ಲವೇ ವರ್ಗಾವಣೆಮಾಡಿಸಿಕೊಳ್ಳಿರೆಂದು ಅರಣ್ಯಾಧಿಕಾರಿಗಳನ್ನು ಶಾಸಕ ಮಂಜುನಾಥ್ ತರಾಟೆಗೊಳಪಡಿಸಿದರು
ಮಾಜಿ ಜಿ.ಪಂ.ಸದಸ್ಯ ಕಟ್ಟನಾಯಕ, ದೊಡ್ಡಹೆಜ್ಜೂರು ಗ್ರಾ.ಪಂ.ಅಧ್ಯಕ್ಷ ಶಿವಶಂಕರ್, ಮಾಜಿ ಅಧ್ಯಕ್ಷ ದೇವರಾಜ್, ಕಸ್ತೂರಿಗೌಡ, ಗಣೇಶ್, ಸ್ವಾಮಿ, ಮಹದೇವು, ಆರ್‌ಎಫ್‌ಓಗಳಾದ ಕಿರಣ್‌ಕುಮಾರ್, ನಮನ್‌ನಾರಾಯಣ ನಾಯಕ, ಸೇರಿದಂತೆ೫೦೦ಕ್ಕೂ ಹೆಚ್ಚು ಸುತ್ತಮುತ್ತಲ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.