
ನೋಡಲು ಸುಂದರವಾಗಿಲ್ಲ ಎಂದು ಪತ್ನಿ ಮೇಲೆ ಪತಿ ಹಲ್ಲೆ
Team Udayavani, Mar 9, 2020, 9:40 PM IST

ಬೆಂಗಳೂರು: ನೋಡಲು ಸುಂದರವಾಗಿಲ್ಲ. ತಾನು ಮತ್ತೂಂದು ಮದುವೆ ಮಾಡಿಕೊಳ್ಳಬೇಕೆಂದು ಪತ್ನಿ ಮೇಲೆ ಪತಿ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ವಿಜಯನಗರದ ಮಾರೇನಹಳ್ಳಿ ನಿವಾಸಿ ವಿಜಯಲಕ್ಷ್ಮೀ ಎಂಬವರು ನೀಡಿದ ದೂರಿನ ಮೇರೆಗೆ ಅವರ ಪತಿ ಶಶಿಕುಮಾರ್(38) ವಿರುದ್ಧ ವಿಜಯನಗರ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಶಿಕುಮಾರ್ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಅವರನ್ನು ಮದುವೆಯಾಗಿದ್ದರು. ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಪದೇ ಪದೇ ಜಗಳ ನಡೆಯುತ್ತಿತ್ತು. ಈ ಮಧ್ಯೆ ಆರೋಪಿ ಪತಿ “ನೀನು ನೋಡಲು ಸುಂದರವಾಗಿಲ್ಲ.
ನಾನು ಬೇರೆ ಮದುವೆ ಮಾಡಿಕೊಳ್ಳಬೇಕು’. ಮನೆಯಿಂದ ಹೊರ ಹೋಗುವಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಆಕೆ ಮೇಲೆ ಆéಸಿಡ್ ಹಾಕುವುದಾಗಿ ಬೆದರಿಸುತ್ತಿದ್ದ. ಕೊಲೆ ಮಾಡುವುದಾಗಿ ಕಬ್ಬಿಣದ ಸರಳುಗಳನ್ನು ಮನೆಯಲ್ಲಿ ತಂದಿಟ್ಟು ಹೆದರಿಸುತ್ತಿದ್ದ. ಹಲವು ಬಾರಿ ವಿಜಯಲಕ್ಷ್ಮೀ ಪೋಷಕರು ಅಳಿಯ ಶಶಿಕುಮಾರ್ಗೆ ಬುದ್ದಿ ಹೇಳಿ ಸಂಧಾನ ಮಾಡಿದರೂ ಪದೇ ಪದೇ ಪತ್ನಿ ಮೇಲೆ ಹಲ್ಲೆ ನಡೆಸುತ್ತಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದರು.
ಹೆಲ್ಮೆಟ್ನಲ್ಲಿ ಹಲ್ಲೆ
ಮಾ.6ರಂದು ಸಂಜೆ ವಿಜಯಲಕ್ಷ್ಮೀ ಮನೆಯಲ್ಲಿ ಕಸ ಗುಡಿಸುತ್ತಿದ್ದಾಗ ಶಶಿಕುಮಾರ್ ತನ್ನ ಹೆಲ್ಮೆಟ್ನಿಂದ ಆಕೆಯ ತಲೆ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದು, ತಲೆಯಿಂದ ರಕ್ತ ಸುರಿಯುತ್ತಿದ್ದರೂ ಲೆಕ್ಕಿಸದೇ ಮನೆಯಲ್ಲಿದ್ದ ಪೈಪ್ನಿಂದ ಮತ್ತೆ ಹಲ್ಲೆ ನಡೆಸಿ ಹೋಗಿದ್ದಾನೆ. ಬಳಿಕ ವಿಜಯಲಕ್ಷ್ಮೀ ಸ್ಥಳೀಯರ ಸಹಾಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆರೋಪಿ ಪತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ನಾಪತ್ತೆಯಾಗಿದ್ದಾನೆ. ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.