![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 9, 2021, 6:40 AM IST
ಹೊಸದಿಲ್ಲಿ : ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮತ್ತು ಅನಂತರ ಇಂಗ್ಲೆಂಡ್ ವಿರುದ್ಧ ಆಡಲಾಗುವ ಟೆಸ್ಟ್ ಸರಣಿಗಾಗಿ ಭಾರತ ತಂಡ ಜೂ. ಎರಡರಂದು ಯು.ಕೆ. ವಿಮಾನ ಏರಲಿದೆ.
ಇದೊಂದು ಸುದೀರ್ಘ ಸರಣಿಯಾದ ಕಾರಣ ಕ್ರಿಕೆಟಿಗರ ಕುಟುಂಬದವರಿಗೂ ಇಂಗ್ಲೆಂಡಿಗೆ ತೆರಳಲು ಅನುಮತಿ ನೀಡಲಾಗಿದೆ. ಆದರೆ ಪತ್ನಿ, ಮಕ್ಕಳೆಲ್ಲ ಆರಂಭದಲ್ಲೇ ಕ್ರಿಕೆಟಿಗರ ಜತೆ ಇರುತ್ತಾರೋ ಅಥವಾ ಪ್ರವಾಸದ ಮಧ್ಯ ಭಾಗದಲ್ಲಿ ಸೇರಿಕೊಳ್ಳುತ್ತಾರೋ ಎಂಬುದು ಇನ್ನೂ ಖಾತ್ರಿಯಾಗಿಲ್ಲ.
ಇಂಗ್ಲೆಂಡಿಗೆ ತೆರಳುವ ಮುನ್ನ ಎಲ್ಲರೂ ಮುಂಬಯಿಯಲ್ಲಿ 8 ದಿನ ಕ್ವಾರಂಟೈನ್ಗೆ ಒಳಗಾಗಬೇಕಿದೆ. ಲಂಡನ್ಗೆ ಬಂದಿಳಿದ ಬಳಿಕ ಮತ್ತೆ 10 ದಿನಗಳ ಸಾಫ್ಟ್ ಕ್ವಾರಂಟೈನ್ ಇರಲಿದೆ. ಆದರೆ “ಬಬಲ್ ಟು ಬಬಲ್’ ಪ್ರಯಾಣವಾದ ಕಾರಣ ಲಂಡನ್ ಕ್ವಾರಂಟೈನ್ ಅವಧಿಯನ್ನು ಕಡಿಮೆಗೊಳಿಸಲು ಬಿಸಿಸಿಐ ಪ್ರಯತ್ನಿಸಲಿದೆ.
ಭಾರತದ ಕ್ರಿಕೆಟಿಗರೆಲ್ಲ ಸೌತಾಂಪ್ಟನ್ನ “ಹಿಲ್ಟನ್ ಹೊಟೇಲ್’ ನಲ್ಲಿ ಉಳಿದುಕೊಳ್ಳಲಿದ್ದಾರೆ. ಸಾಫ್ಟ್ ಕ್ವಾರಂಟೈನ್ ಅವಧಿಯಲ್ಲಿ ಆಟಗಾರರ ಅಭ್ಯಾಸಕ್ಕೇನೂ ಅಡ್ಡಿ ಇರದು.
ಗಂಗೂಲಿ, ಶಾ ಪಯಣ
ಭಾರತ-ನ್ಯೂಜಿಲ್ಯಾಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ವೀಕ್ಷಿಸಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಇಂಗ್ಲೆಂಡಿಗೆ ತೆರಳಲಿದ್ದಾರೆ. ಹಾಗೆಯೇ ಉಳಿದ 31 ಐಪಿಎಲ್ ಪಂದ್ಯಗಳನ್ನು ಇಂಗ್ಲೆಂಡ್ನಲ್ಲಿ ಆಯೋಜಿಸುವ ಕುರಿತು ಇವರು ಇಸಿಬಿ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಲಸಿಕೆ ಕಡ್ಡಾಯ
ಇಂಗ್ಲೆಂಡಿಗೆ ವಿಮಾನ ಏರುವ ಮೊದಲು ಕ್ರಿಕೆಟಿಗರೆಲ್ಲ ಮೊದಲ ಸುತ್ತಿನ ವ್ಯಾಕ್ಸಿನ್ ಪಡೆಯಬೇಕೆಂದು ಬಿಸಿಸಿಐ ಸೂಚಿಸಿದೆ. ಆದರೆ ಪಾಸಿಟಿವ್ ಫಲಿತಾಂಶ ಹೊಂದಿರುವ ಪ್ರಸಿದ್ಧ್ ಕೃಷ್ಣ ಅವರಿಗೆ ಇದು ಸಾಧ್ಯವಾಗದು.
ಭಾರತದಲ್ಲೇ ಮೊದಲ ಸುತ್ತಿನಲ್ಲಿ ಕೊವಿಶೀಲ್ಡ್ ಲಸಿಕೆ ಪಡೆದರೆ ಇಂಗ್ಲೆಂಡ್ನಲ್ಲಿ ಎರಡನೇ ಸುತ್ತಿನ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ. ಆದರೆ ಅದು ಆಕ್ಸ್ಫರ್ಡ್ ವ್ಯಾಕ್ಸಿನ್ ಆಗಿರುತ್ತದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.