ಕೊರೊನಾ ಸಾವಿನ ವರದಿ ತಯಾರಿಗೆ ಅಸಮರ್ಪಕ ವಿಧಾನ : ಡಬ್ಲ್ಯು ಎಚ್‌ಒ ವಿರುದ್ಧ ಭಾರತ ಕೆಂಡ


Team Udayavani, Apr 18, 2022, 7:05 AM IST

ಕೊರೊನಾ ಸಾವಿನ ವರದಿ ತಯಾರಿಗೆ ಅಸಮರ್ಪಕ ವಿಧಾನ : ಡಬ್ಲ್ಯು ಎಚ್‌ಒ ವಿರುದ್ಧ ಭಾರತ ಕೆಂಡ

ಹೊಸದಿಲ್ಲಿ: ಭಾರತ ಸಹಿತ ಜಗತ್ತಿ ನಾದ್ಯಂತದ ಕೊರೊನಾ ಸಾವಿನ ಸಂಖ್ಯೆಯನ್ನು ಅಂದಾಜಿಸಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯು ಎಚ್‌ಒ) ಬಳಸಿರುವ ಕಾರ್ಯವಿಧಾನಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕಡಿಮೆ ಜನ ಸಂಖ್ಯೆಯಿರುವ ಪುಟ್ಟ ದೇಶಕ್ಕೂ ಹೆಚ್ಚು ಜನಸಂಖ್ಯೆಯಿರುವ ದೊಡ್ಡ ದೇಶಕ್ಕೂ ಒಂದೇ ಬಗೆಯ ಕಾರ್ಯ ವಿಧಾನ ಬಳಕೆ ಎಷ್ಟು ಸಮರ್ಪಕ ಎಂದು ಭಾರತ ಪ್ರಶ್ನಿಸಿದೆ.

“ಜಗತ್ತಿನ ಕೊರೊನಾ ಸಾವಿನ ಸಂಖ್ಯೆಯನ್ನು ಬಹಿರಂಗ ಗೊಳಿಸುವ ಯತ್ನಕ್ಕೆ ಭಾರತ ಅಡ್ಡಿಪಡಿಸುತ್ತಿದೆ’ ಶೀರ್ಷಿಕೆಯಡಿ ನ್ಯೂಯಾರ್ಕ್‌ ಟೈಮ್ಸ್‌ ನಲ್ಲಿ ಪ್ರಕಟಗೊಂಡ ಲೇಖನಕ್ಕೆ ಆರೋಗ್ಯ ಸಚಿವಾಲಯ ರವಿವಾರ ಖಾರವಾದ ಪ್ರತಿಕ್ರಿಯೆ ನೀಡಿದೆ.

“ಭಾರತದಲ್ಲಿ ಕೊರೊನಾದಿಂದ 40 ಲಕ್ಷ ಮಂದಿ ಅಸುನೀಗಿದ್ದಾರೆ. ಕಳೆದ 2 ವರ್ಷಗಳಲ್ಲಿ ಭಾರತ ಸಾವಿನ ದತ್ತಾಂಶವನ್ನು ಡಬ್ಲ್ಯುಎಚ್‌ಒಗೆ ಕಳುಹಿಸಿಲ್ಲ. ಆದರೆ ಕರ್ನಾಟಕ ಸಹಿತ 12 ರಾಜ್ಯ ಗಳಲ್ಲಿ ಸಾವಿನ ಸಂಖ್ಯೆ ಹೇಳಿಕೊಂಡದ್ದಕ್ಕಿಂತ 5-6 ಪಟ್ಟು ಹೆಚ್ಚಿತ್ತು’ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಭಾರತದ ಜತೆಗೆ ಚೀನ, ಇರಾನ್‌, ಬಾಂಗ್ಲಾದೇಶ, ಸಿರಿಯಾ, ಇಥಿಯೋ ಪಿಯಾ ಮತ್ತು ಈಜಿಪ್ಟ್ ಕೂಡ ಆಕ್ಷೇಪಿಸಿವೆ.

ಭಾರತದ ವಾದವೇನು?
ವರದಿ ತಯಾರಿಸಲು ಬಳಸಿದ ವಿಧಾನವನ್ನು ನಾವು ವಿರೋಧಿಸುತ್ತೇವೆ. ಕಡಿಮೆ ಜನಸಂಖ್ಯೆ ಯ ದೇಶಗಳಿಗೆ ಬಳಸಲಾದ ಸಾಂಖ್ಯಿಕ ಮಾದರಿ ಭಾರತದಂತಹ ವಿಶಾಲ ಮತ್ತು ಹೆಚ್ಚು ಜನಸಂಖ್ಯೆಯಿರುವ ದೇಶಕ್ಕೆ ಹೇಗೆ ಹೊಂದಾಣಿಕೆಯಾಗುತ್ತದೆ? 1.18 ಕೋಟಿ ಜನಸಂಖ್ಯೆ ಯಿರುವ ಟ್ಯುನೀಷಿಯಾಕ್ಕೂ 130 ಕೋಟಿ ಜನಸಂಖ್ಯೆಯಿರುವ ಭಾರತಕ್ಕೂ ವ್ಯತ್ಯಾಸವಿಲ್ಲವೇ? ವರದಿಯ ಹಲವು ಅಂಶಗಳು ಡಬ್ಲ್ಯುಎಚ್‌ಒ ಬಳಸಿದ ಮಾದರಿ ನಿಖರ ಹಾಗೂ ವಿಶ್ವಾಸಾರ್ಹವಾಗಿಲ್ಲ ಎನ್ನುವುದನ್ನು ಸಾರುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ಸರಕಾರದ ಪ್ರಕಾರ, ದೇಶದಲ್ಲಿ ಕೊರೊ ನಾದಿಂದ 5.21 ಲಕ್ಷ ಮಂದಿ ಮೃತಪಟ್ಟಿದ್ದಾರೆ.

ಕೇಂದ್ರದ ನಿರ್ಲಕ್ಷ್ಯದಿಂದಾಗಿ ಕೊರೊನಾಗೆ ಬಲಿಯಾದವರ ಸಂಖ್ಯೆ 40 ಲಕ್ಷ ಎಂಬುದು ಬಹಿರಂಗವಾಗಿದೆ. ಮೃತರ ಕುಟುಂಬಕ್ಕೆ ತಲಾ 4 ಲ.ರೂ. ಪರಿಹಾರ ನೀಡಬೇಕು.
– ರಾಹುಲ್‌ ಗಾಂಧಿ, ಕಾಂಗ್ರೆಸ್‌ ನಾಯಕ

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.